Breaking News

ಕರವೇ ಶೆಟ್ಟಿ ಬಣ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಶಾಸಕ ಜನಾರ್ದನ್ ರೆಡ್ಡಿ ಅವರಿಂದಧ್ವಜಾರೋಹಣ,

Flag hoisting by MLA Janardhan Reddy for Kannada Rajyotsava under the leadership of Karave Shetty Bana.


ಗಂಗಾವತಿ 1,ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ್ಣದ ನೇತ್ರತ್ವದಲ್ಲಿ ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಶಾಸಕ ಜನಾರ್ದನ್ ರೆಡ್ಡಿ ಅವರು ಭುವನೇಶ್ವರಿ ದೇವಿ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸೀ 68ನೇ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು, ಬಳಿಕ ಅವರು ಮಾತನಾಡಿದ ಶಾಸಕ ಜನಾರ್ಧನ್ ರೆಡ್ಡಿ ಅವರು ಕನ್ನಡ ಭಾಷೆ ಅತ್ಯಂತ ಸಮೃದ್ಧವಾದ ಭಾಷೆಯಾಗಿದ್ದು ತನ್ನದೇ ಆದ ಮಹತ್ವವನ್ನು ಹೊಂದಿದೆ ಕನ್ನಡ ನಾಡು ನುಡಿ ಸಂರಕ್ಷಣೆಗೆ ಕನ್ನಡಪರ ಸಂಘಟನೆಗಳು ಧ್ವನಿ ಎತ್ತಬೇಕಾದ ಅವಶ್ಯಕತೆ ಇದೆ ಹಾಗೆ ಕನ್ನಡ ರಕ್ಷಣಾ ವೇದಿಕೆಯ ಮನವಿಯ ಮೇರೆಗೆ ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಮುಂದಿನ ರಾಜ್ಯೋತ್ಸವ ದಿನದೊಳಗೆ ಶ್ರೀ ಕೃಷ್ಣದೇವರಾಯ ಕಂಚಿನ ಪುತ್ತಳಿ ಹಾಗೂ ತಾಯಿ ಭುವನೇಶ್ವರಿ ದೇವಿಯ ಪುತ್ತಳಿಯನ್ನು ನಿರ್ಮಿಸಲಾಗುವುದೆಂದು ಭರವಸೆ ನೀಡಿದರು, ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಪಂಪಣ್ಣ ನಾಯಕ್ ಮಾತನಾಡಿ ಕನ್ನಡ ನೆಲ ಜಲ ಭಾಷೆಗೆ ಸಂಬಂಧಿಸಿದಂತೆ ಪ್ರಾಣ ತ್ಯಾಗಕ್ಕೂ ಸಿದ್ಧರಾಗಿದ್ದು ಇತ್ತೀಚಿಗಷ್ಟೇ ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ ಒಂದು ಅಲ್ಲಿನ ಮರಾಠಿಗರು ತಮ್ಮ ಮೀಸಲಾತಿಗೆ ಸಂಬಂಧಿಸಿದಂತೆ ಬೆಂಕಿ ಹಚ್ಚಿದ್ದುಹೆಡೀ ತನದ ಕೃತ್ಯವಾಗಿದೆ, ಎಂ ಇ ಎಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಕರಾಳ ದಿನ ಆಚರಿಸುತ್ತಿರುವುದು ಇದಕ್ಕೆ ಸಂಬಂಧಿಸಿದಂತೆ ಸರ್ಕಾರ ಮೌನ ವಹಿಸುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿ ಮುಂಬರುವ ದಿನಗಳಲ್ಲಿ ಯಾವುದೇ ಮಹಾರಾಷ್ಟ್ರದ ವಾಹನಗಳು ರಾಜ್ಯಕ್ಕೆ ಬಾರದಂತೆ ಕನ್ನಡ ಪದ ಸಂಘಟನೆಗಳು ಒಗ್ಗೂಡಿ ಕಾರ್ಯಪ್ರವೃತ್ತರಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು ಅಂಗವಿಕಲ ಘಟಕ ದ ಅಧ್ಯಕ್ಷ ಅಶೋಕ್ ಗುಡಿಕೋಟೆ, ಮಹಿಳಾ ಘಟಕದ ಪದಾಧಿಕಾರಿಗಳಾದ, ರಾಜೇಶ್ವರಿ ಗಾಯತ್ರಿ ರಾಧಮ್ಮ, ಸೇರಿದಂತೆ ಇತರರು ಮಾತನಾಡಿದರು ಅಪಾರ ಕಾರ್ಯಕರ್ತರು ಪಾಲ್ಗೊಂಡಿದ್ದ ರು,,

About Mallikarjun

Check Also

ಅಶೋಕಸ್ವಾಮಿ ಹೇರೂರಭೇಟಿ:ಕಾಂಗ್ರೆಸ್ಸಿಗರಿಂದಮತಯಾಚನೆ.

ಗಂಗಾವತಿ:ರಾಜ್ಯ ವಾಣಿಜೋಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ನಿರ್ದೇಶಕ ಮತ್ತು ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.