ಗ್ರಾಮ ಪಂಚಾಯಿತಿ ನೌಕರರು ನಡೆಸುವ ಬೆಂಗಳೂರು ಚಲೋ ಚಳುವಳಿಗೆ ಬೆಂಬಲ ಕೊಟ್ಟ ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Journalist and activist Basavaraju supported the Bengaluru Chalo movement run by Gram Panchayat employees

ಜಾಹೀರಾತು

ಬೆಳಗಾವಿ : ರಾಜ್ಯದಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಪಂಚಾಯಿತಿ ನೌಕರರು ಇದೇ ನವೆಂಬರ್ 7 ರಂದು ಕನಿಷ್ಠ ವೇತನ ನಿಗದಿ ಹಾಗೂ ಪಿಂಚಣಿಗಾಗಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜಧಾನಿ ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಬೃಹತ್ ಮೆರವಣಿಗೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ. ಇನ್ನೂ ಹೋರಾಟಕ್ಕೆ ಭಾಗವಹಿಸುವುದಕ್ಕೆ ಹೋಗಲು ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಹಾಗೂ ಕಿತ್ತೂರು ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳ ನೌಕರರು ಮೊನ್ನೆ ಬೈಲಹೊಂಗಲ ಹಾಗೂ ಕಿತ್ತೂರು ತಾಲ್ಲೂಕು ಪಂಚಾಯಿತಿಗಳ ಕಾರ್ಯ ನಿರ್ವಾಹಕ ಅಧಿಕಾರಿಗಳು ಆದ ಸುಭಾಷ್ ಸಂಪಗಾವಿ ಅವರಿಗೆ ಮನವಿ ಸಲ್ಲಿಸಿದರು. ಇನ್ನೂ ಇದೇ ಸಂದರ್ಭದಲ್ಲಿ ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಸಹ ಇವರ ಹೋರಾಟಕ್ಕೆ ಬೆಂಬಲ ಕೊಟ್ಟು, ಸರ್ಕಾರವು ಕೂಡಲೇ ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಗ್ರಾಮ ಪಂಚಾಯಿತಿ ನೌಕರರ ಸಂಘದ ಜೊತೆ ಚರ್ಚೆ ಮಾಡಿ ಒತ್ತಾಯ ಮಾಡಿದ್ದಾರೆ.

Total Views: 0
Share This Article