Breaking News

ಕೆಡಿಪಿಗೆನಾಮನಿರ್ದೇಶನ : ರವಿ ಕುರುಗೋಡಗೆ ಸನ್ಮಾನ

Nomination for KDP : Honorable mention to Ravi Kurugoda

ಜಾಹೀರಾತು
IMG 20231103 WA0365 300x129


ಕೊಪ್ಪಳ: ನಗರದ ಯಾದವ ಸಮಾಜದ ಮುಖಂಡ, ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರ ಜಿಲ್ಲಾ ಪಂಚಾಯತಿ ಕೆಡಿಪಿಗೆ ನಾಮನಿರ್ದೇಶನಗೊಂಡ ನಿಮಿತ್ಯ ರವಿ ಕುರುಗೋಡ ಯಾದವ ಅವರಿಗೆ ಕಾಂಗ್ರೆಸ್ ಮುಖಂಡರು ಸನ್ಮಾನ ಮಾಡಿದರು.
ಜಿಲ್ಲಾ ಪಂಚಾಯತಿಯ ಕೆಡಿಪಿ ಸದಸ್ಯರ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ನೇತೃತ್ವದಲ್ಲಿ ಅಂಬೇಡ್ಕರ್ ಕೃತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ನಂತರ ಮಾತನಾಡಿದ ಜ್ಯೋತಿ ಗೊಂಡಬಾಳ ಅವರು, ಯುವ ಮುಖಂಡ ರವಿ ಕುರಗೋಡ ಅವರು ಹಿಂದುಳಿದ ಯಾದವ ಸಮುದಾಯಕ್ಕೆ ಸೇರಿದರೂ ಸಹ ಅವರು ಪಕ್ಷದ ಚಟುವಟಿಕೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಶ್ರಮಿಸಿದ ಕಾರಣಕ್ಕೆ ಸರಕಾರ ಮತ್ತು ಶಾಸಕರು ಗುರುತಿಸಿದ್ದಾರೆ. ಕಾಂಗ್ರೆಸ್ ಎಲ್ಲರನ್ನೂ ಒಳಗೊಳ್ಳುವ ಪಕ್ಷ ಎಂದು ಸಾಬೀತು ಮಾಡಿದೆ, ಮುಂದೆಯೂ ಸಹ ಕೆಲಸ ಮಾಡುವ ಕಾರ್ಯಕರ್ತರಿಗೆ ಬೆಲೆ ಕೊಡಲಿದೆ ಎಮದರು. ರವಿ ಅವರು ಜಿಲ್ಲೆಯಲ್ಲಿ ಅತ್ಯಂತ ಪ್ರಮುಖ ನಾಮನಿರ್ದೇಶನಗಳಲ್ಲಿ ಒಂದಾಗಿರುವ ಕೆಡಿಪಿಗೆ ಆಯ್ಕೆ ಆಗಿದ್ದು ಸಂತಸ ತಂದಿದೆ. ಅವರು ಪಕ್ಷ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ತಮ್ಮ ಸೇವೆಯನ್ನು ನೀಡುವ ಮೂಲಕ ಮಾದರಿ ಸದಸ್ಯರಾಗಿ ರೂಪಗೊಳ್ಳಲಿ ಎಂದು ಶುಭ ಹಾರೈಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ರವಿ ಕುರಗೋಡ, ಆತ್ಮೀಯರು, ಪಕ್ಷದ ಮುಖಂಡರು ಮತ್ತು ಗೆಳೆಯರು ಸೇರಿ ಸನ್ಮಾನ ಮಾಡಿದ್ದು ಖಷಿಯಾಗಿದೆ, ತಮಗಿರುವ ಜ್ಙಾನ ಮತ್ತು ತಿಳುವಳಿಕೆಯಿಂದ ಆಗುವ ಎಲ್ಲಾ ಉತ್ತಮ ಕೆಲಸ ಮಾಡುವ ಮೂಲಕ ಪಕ್ಷಕ್ಕೆ ಗೌರವ ತರುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಎಸ್.ಟಿ. ಘಟಕ ತಾಲೂಕ ಅಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಮೈನಾರಿಟಿ ಸೆಲ್ ಜಿಲ್ಲಾಧ್ಯಕ್ಷ ಸಲೀಂ ಅಳವಂಡಿ, ಕಾರ್ಮಿಕ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪಂಡಿತ್, ಯುವ ಮುಖಂಡ ಮಲ್ಲಿಕಾರ್ಜುನ ಪೂಜಾರ್, ಮಹಿಳಾ ಘಟಕದ ಕಾರ್ಯದರ್ಶಿ ಅಂಬಿಕಾ ನಾಗರಾಳ, ಮುಖಂಡರುಗಳಾದ ರೂಪಾ ಬಂಗಾರಿ, ಸಂತೋಷ ಬೂದಿಹಾಳ, ರವಿ ಗುಡ್ಡದಮೇಗಳ, ಬೀರಪ್ಪ ಹಳೆಮನಿ, ಮಾರುತಿ ಮಣ್ಣಿನವರ, ಮಹಾಂತೇಶ ದೊಡ್ಡಮನಿ, ಮುದುಕಪ್ಪ ಕೊಪ್ಪಳ, ಶಶಿ ಗುರುವಿನ್ ಇತರರು ಇದ್ದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.