ಕಲ್ಯಾಣಸಿರಿ ವಿಶೇಷ

ಭಾರತ ದೇಶದ ಶ್ರೇಷ್ಠ ಕ್ರೀಡಾಪಟು ವಿರಾಟ್ ಕೊಹ್ಲಿ ಅವರ ಹುಟ್ಟು ಹಬ್ಬದ ಅಂಗವಾಗಿ ಸಸಿ ನೆಟ್ಟ ವನಸಿರಿ ತಂಡ

Vanasiri team planted saplings as part of India’s great sportsman Virat Kohli’s birthday

ಸಿಂಧನೂರು: ತಾಲೂಕಿನ ಮಲ್ಲಾಪೂರ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಸಿರಿ ಫೌಂಡೇಶನ್ ಹಾಗೂ ಹಳೆಯ ವಿದ್ಯಾರ್ಥಿಗಳಿಂದ ಭಾರತ ದೇಶದ ಹೆಮ್ಮೆಯ ಕ್ರೀಡಾಪಟುಗಾರರಾದ ವಿರಾಟ್ ಕೊಹ್ಲಿ ಅವರ ಹುಟ್ಟು ಹಬ್ಬದ ಅಂಗವಾಗಿ ಸಸಿನೆಡುವ ಕಾರ್ಯಕ್ರಮ ಹಾಗೂ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಭಾರತದ ಶೇಷ್ಠ ಕ್ರಿಕೆಟ್ ಆಟಗಾರ ವಿರಾಟ್ ಕೋಹ್ಲಿ ಅವರ 35ನೇ ಹುಟ್ಟು ಹಬ್ಬದವನ್ನು ಅವರ ಅಭಿಮಾನಿಗಳು ದೇಶದೆಲ್ಲೆಡೆ ವಿವಿಧ ರೀತಿಯಲ್ಲಿ ಆಚರಿಸುತ್ತಿದ್ದಾರೆ ಅವರ ಹಾದಿಯಲ್ಲೇ ಸಿಂಧನೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಕೂಡಾ ಅವರ ಅವರ ಅಭಿಮಾನಿಗಳಾದ ವನಸಿರಿ ಫೌಂಡೇಶನ್ ಸದಸ್ಯರು ಹಾಗೂ ಹಳೆಯ ವಿದ್ಯಾರ್ಥಿಗಳ ಸದಸ್ಯರು ಹಾಗೂ ಊರಿನ ಯುವಕರು ಸೇರಿಕೊಂಡ ಅವರ ಸವಿ ನೆನಪಿನ ಹುಟ್ಟು ಹಬ್ಬದ ಅಂಗವಾಗಿ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಸಿನೆಟ್ಟು ನೀರುಣಿಸಿ ಸ್ವಚ್ಚತಾ ಕಾರ್ಯವನ್ನು ಕೈಗೊಂಡರು ಈ ಕಾರ್ಯಕ್ಕೆ ಗ್ರಾಮದ ಹಿರಿಯರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಅಮರೇಗೌಡ ಮಲ್ಲಾಪುರ, ಗ್ರಾಮದ ಯುವಕರಾದ ಆಕಾಶ,ಸುಧಾಕರ, ಮಲ್ಲಿಕಾರ್ಜುನ H, ರಮೇಶ, ಬಸವಲಿಂಗ,ಮೌನೇಶ, ಶ್ರೀನಿವಾಸ್ ನಾಯಕ,ಮಹೇಶ, ಸಿದ್ದಲಿಂಗಪ್ಪ,ನಿಂಗರಾಜ ಕೆ, ಅಂಬರೀಶ ಕೆ,ವೀರೇಶ ಹಾಲುಮತ ಊರಿನ ಹಿರಿಯರು ಯುವಕರು ಉಪಸ್ಥಿತರಿದ್ದರು.

ವರದಿ:- ಚನ್ನಪ್ಪ ಕೆ.ಹೊಸಹಳ್ಳಿ

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago