Ashokaswamy Heroor urges MPs for Gangavati-Vijaypur railway
ಜಾಹೀರಾತು


ಗಂಗಾವತಿ: ಗಂಗಾವತಿ-ವಿಜಯಪುರ ರೇಲ್ವೆ ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಮಹಾ ಮಂಡಳದ ನಿರ್ದೇಶಕ ಅಶೋಕಸ್ವಾಮಿ ಹೇರೂರ,ಸಂಸದ ಕರಡಿ ಸಂಗಣ್ಣ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಸೊಲ್ಲಾಪುರ ಮತ್ತು ಮುಂಬೈ ರೇಲ್ವೆ ಸೌಲಭ್ಯದಿಂದ ಗಂಗಾವತಿ ಜನತೆ ವಂಚಿತರಾಗಿರುವುದರಿಂದ ಗಂಗಾವತಿ-ವಿಜಯಪುರ ರೇಲ್ವೆ ಪ್ರಾರಂಭಿಸಿ,ಈ ಭಾಗದ ಜನತೆಗೆ ಸೌಲಭ್ಯ ಒದಗಿಸಬೇಕೆಂದು ಕೋರಿದ್ದಾರೆ.
ಈ ಪತ್ರದ ಪ್ರತಿಯನ್ನು ನೈರುತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಅವರಿಗೂ ಕಳುಹಿಸಿ, ಅಧಿಕಾರಿಗಳಲ್ಲಿಯೂ ಈ ಬಗ್ಗೆ ಮನವಿ ಮಾಡಿದ್ದಾರೆ.
ಸಂಸದ ಸಂಗಣ್ಣ ಕರಡಿ ಮತ್ತು ರೇಲ್ವೆ ಇಲಾಖೆಯ ಅಧಿಕಾರಿಗಳು ತಮ್ಮ ಬೇಡಿಕೆಗೆ ಸ್ಪಂಧಿಸುತ್ತಾರೆ ಎಂಬ ಆಶಾ ಭಾವನೆಯನ್ನು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಅಶೋಕಸ್ವಾಮಿ ಹೇರೂರ ಆಶಾ ಭಾವನೆ ವ್ಯಕ್ತ ಪಡಿಸಿದ್ದಾರೆ.
Total Views:
0
