JPM CEO visits Jangamar Kalgudi to inspect various works
ಗಂಗಾವತಿ ತಾಲೂಕಿನ ಜಂಗಮರ್ ಕಲ್ಗುಡಿ ಗ್ರಾಮ ಪಂಚಾಯತ್ ಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಸೋಮವಾರ ಬೆಳಗ್ಗೆ 8.30 ಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಗ್ರಾಮದ ಒಂದನೇ ವಾರ್ಡ್ ಗೆ ಜಿಪಂ ಸಿಇಓ ಅವರು ಭೇಟಿ ನೀಡಿ ಪ್ರಗತಿ ಹಂತದಲ್ಲಿ ಇರುವ ಚರಂಡಿ ಕಾಮಗಾರಿ, ಸ್ಮಶಾನದ ಸ್ಥಳ, ಆಸ್ಪತ್ರೆ, ಅಂಗನವಾಡಿ ಕೇಂದ್ರ, ಎನ್ ಆರ್ ಎಲ್ ಎಂ ಶೆಡ್ , ಜೆಜೆಎಂ ಕಾಮಗಾರಿ ಪರಿಶೀಲನೆ ನಡೆಸಿದರು, ಹಾಗೂ
ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನಿರ್ಮಿಸಿಕೊಂಡ ವೈಯಕ್ತಿಕ ಶೌಚಾಲಯ ಬಳಕೆ, ಮತ್ತು ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕೆಲಸ ಕುರಿತು ಗ್ರಾಮಸ್ಥರೊಂದಿಗೆ ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರು ಚರ್ಚಿಸಿದರು.
ಈ ವೇಳೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ, ಗ್ರಾ.ಕು.ನೀ & ನೈ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವಿಜಯ ಕುಮಾರ,
ತಾಪಂ ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್, ಗ್ರಾಪಂ ಅಧ್ಯಕ್ಷರಾದ ಶೃತಿ ಧನಂಜಯ, ಗ್ರಾಪಂ ಪಿಡಿಓ ರಾಮುನಾಯ್ಕ, ಗ್ರಾಪಂ ಕಾರ್ಯದರ್ಶಿ ಯಮನೂರಪ್ಪ, ನರೇಗಾ ತಾಂತ್ರಿಕ ಸಂಯೋಜಕರಾದ ಬಸವರಾಜ ಜಟಗಿ ಹಾಗೂ ಗ್ರಾಪಂ ಸದಸ್ಯರು ಇದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…