ಕಲ್ಯಾಣಸಿರಿ ವಿಶೇಷ

ಮಲೆ ಮಹದೇಶ್ವರ ಸ್ವಾಮಿದೇಗುಲಹುಂಡಿಯಲ್ಲಿ 28 ದಿನದಲ್ಲಿ ಎರಡು ಕೋಟಿಗೂ ಹೆಚ್ಚಿನ ಹಣ ಸಂಗ್ರಹ

More than two crore money collected in 28 days in Male Mahadeshwar Swamy Temple Hundi


ವರದಿ :ಬಂಗಾರಪ್ಪ ಸಿ.
ಹನೂರು :ನಂಬಿದವರನ್ನು ಮಾದಪ್ಪ ಎಂದಿಗೂ ಕೈಬಿಡುವುದಿಲ್ಲ ಎಂಬ ನಂಬಿಕೆಯಿಂದ ಭಕ್ತರು ಸಲ್ಲಿಸುವ ಕಾಣಿಕೆ ಹಣವನ್ನು ಇಂದು ಎಣಿಕೆ ಮಾಡಲಾಯಿತು.

ಕರ್ನಾಟಕದ ನೆಲದಲ್ಲಿ ಐತಿಹಾಸಿಕ ಹಿನ್ನೆಲೆ ಇರುವ ದೇಗುಲಗಳ ಪೈಕಿ ಮಹದೇಶ್ವರ ಬೆಟ್ಟ ಮೊದಲ ಸ್ಥಾನ ಪಡೆಯುತ್ತದೆ ಎಂಬ ಪ್ರತೀತಿ ಇದೆ. ಕರ್ನಾಟಕ ಮಾತ್ರವಲ್ಲ, ನೆರೆ ರಾಜ್ಯ ಹಾಗೂ ದೂರದ ಊರುಗಳಿಂದಲೂ ಜನ ಮಹದೇಶ್ವರ ಬೆಟ್ಟಕ್ಕೆ ಬಂದು ಸ್ವಾಮಿ ದರ್ಶನ ಪಡೆದು ನಮಿಸುತ್ತಾರೆ. ಹಾಗೇ ಕಾಣಿಕೆ ಸಂಗ್ರಹ ವಿಚಾರದಲ್ಲಿ ಕೂಡ ಈ ದೇಗುಲ ಮುಂದೆ ಇದ್ದು, ಈಗ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಹುಂಡಿ ಹಣದ ಎಣಿಕೆ ಕಾರ್ಯ ನಡೆದಿದೆ. ಚಾಮರಾಜನಗರದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಕಳೆದ 28 ದಿನಗಳಲ್ಲಿ 2.10 ಕೋಟಿ ರೂಪಾಯಿ ನಗದು ಸಂಗ್ರಹ ಆಗಿದೆ. ಮಲೆ ಮಹದೇಶ್ವರ ಬೆಟ್ಟದ ಖಾಸಗಿ ಬಸ್ ನಿಲ್ದಾಣ ಸಮೀಪದ, ವಾಣಿಜ್ಯ ಸಂಕೀರ್ಣದಲ್ಲಿ ಇಂದು ಹುಂಡಿ ಹಣದ ಎಣಿಕೆ ಕಾರ್ಯ ನಡೆಯಿತು. ಸಾಲೂರು ಪೀಠಾಧಿಪತಿಗಳಾದ ಶಾಂತಮಲ್ಲಿಕಾರ್ಜುನ ಶ್ರೀಗಳು ಈ ವೇಳೆ ಸಾನಿಧ್ಯ ವಹಿಸಿದ್ರು. ಹಾಗೆ ಇಂದು ಬೆಳಗ್ಗೆ 8 ಗಂಟೆ ಸಮಯಕ್ಕೆ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಶುರು ಆಗಿದ್ದ ಹುಂಡಿ ಎಣಿಕೆ ಕಾರ್ಯ ಇಂದು ಸಂಜೆ 7 ಗಂಟೆ ವೇಳೆಗೆಲ್ಲಾ ಮುಕ್ತಾಯವಾಗಿದೆ.ಎಣಿಕೆ ವೇಳೆ ಯಾರೆಲ್ಲಾ ಹಾಜರಿದ್ದರು?
ಅಷ್ಟಕ್ಕೂ ಈ ಬಾರಿ ಮಹದೇಶ್ವರ ಸ್ವಾಮಿ ಹುಂಡಿಯಲ್ಲಿ ಕಳೆದ 28 ದಿನದಲ್ಲಿ 2,10,78,014 ಅಂದರೆ 2 ಕೋಟಿ 10 ಲಕ್ಷದ 78 ಸಾವಿರದ 14 ರೂಪಾಯಿ ಸಂಗ್ರಹವಾಗಿದೆ. ಮತ್ತೊಂದು ಕಡೆ ಹುಂಡಿ ಎಣಿಕೆ ಪ್ರಕ್ರಿಯೆ ವೇಳೆ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಉಪಕಾರ್ಯದರ್ಶಿ ಚಂದ್ರಶೇಖರ್ ಜಿ.ಎಲ್., ಪ್ರಾಧಿಕಾರದ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿವರ್ಗ, ಬ್ಯಾಂಕಿನ ಅಧಿಕಾರಿಗಳು ಹಾಜರಿದ್ದರು. ಮಲೆ ಮಹದೇಶ್ವರಬೆಟ್ಟ ಠಾಣೆಯ ಪೊಲೀಸರು ಈ ವೇಳೆ ಬಿಗಿ ಭದ್ರತೆ ಏರ್ಪಡಿಸಿದ್ದರು.

ಈ ನಡುವೆ ಹುಂಡಿಯಲ್ಲಿ ಸಂಗ್ರಹವಾಗಿರುವ, ಚಿನ್ನ ಮತ್ತು ಬೆಳ್ಳಿ ಮೌಲ್ಯಮಾಪನ ಕಾರ್ಯ ಇನ್ನೂ ನಡೆದಿಲ್ಲ. ಈ ಹಿಂದೆ ಪ್ರತಿ ಬಾರಿ, ಹುಂಡಿ ಎಣಿಕೆ ಕಾರ್ಯದ ವೇಳೆ ಚಿನ್ನ & ಬೆಳ್ಳಿ ಮೌಲ್ಯಮಾಪನ ನಡೆಯುತ್ತಿತ್ತು. ಆದ್ರೆ ಈ ಬಾರಿ ಮೌಲ್ಯಮಾಪಕರು ಗೈರಾದ ಹಿನ್ನೆಲೆಯಲ್ಲಿ ಮೌಲ್ಯಮಾಪನ ಸಾಧ್ಯವಾಗಿಲ್ಲ ಎನ್ನಲಾಗಿದೆ. ಹೀಗಾಗಿ ಹುಂಡಿಯಲ್ಲಿ ಸಂಗ್ರವಾಗಿದ್ದ ಚಿನ್ನ & ಬೆಳ್ಳಿಯನ್ನ ಚೀಲದಲ್ಲಿ ಹಾಕಿ ಸೀಲ್ಮಾಡಲಾಗಿದೆ.
ಹರಿದು ಬಂದಿತ್ತು ಭಕ್ತ ಸಾಗರ
ಮತ್ತೊಂದು ಕಡೆ ಇದು ಹಬ್ಬಗಳ ಸಮಯವಾದ ಕಾರಣ, ಕಳೆದ 28 ದಿನಗಳ ಅವಧಿಯಲ್ಲಿ ಶ್ರೀ ಕ್ಷೇತ್ರಕ್ಕೆ ಹೆಚ್ಚಿನ ಭಕ್ತರು ಬಂದು ಸ್ವಾಮಿಯ ದರ್ಶನ ಪಡೆದಿದ್ದರು. ಇದೇ ಅವಧಿಯಲ್ಲಿ ಮಹಾಲಯ ಅಮಾವಾಸ್ಯೆ, ನವರಾತ್ರಿ ಮಹೋತ್ಸವ, ಆಯುಧ ಪೂಜೆ, ವಿಜಯದಶಮಿಯ ಸಂಭ್ರಮ ಮೇಳೆಸಿತ್ತು. ಈ ಹಿನ್ನೆಲೆ ಕರ್ನಾಟಕದ ಮೂಲೆ ಮೂಲೆಯಿಂದ ಮತ್ತು ದೇಶದ ಹಲವು ರಾಜ್ಯಗಳಿಂದ ಬಂದಿದ್ದ ಭಕ್ತರು ಮಹದೇಶ್ವರ ಸ್ವಾಮಿಯ ದರ್ಶನ ಪಡೆದಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago