ಕಲ್ಯಾಣಸಿರಿ ವಿಶೇಷ

ಉರ್ದು ಪ್ರಾಥಮಿಕ ಶಾಲೆಗೆ ಹೈಸ್ಕೂಲ್ ಮಂಜೂರಾತಿ ಹಿನ್ನಲೆ ಬಿಇಒ ನಿಂಗಪ್ಪ ಕೆ.ಟಿ ಭೇಟಿ

BEO Ningappa KT visits background of high school sanction to Urdu primary school

ಯಲಬುರ್ಗಾ: ಪಟ್ಟಣದ ಜಾಮಿಯಾ ಮಸ್ಜಿದ್ ಹತ್ತಿರ ಇರುವ ಉರ್ದು ಪ್ರಾಥಮಿಕ ಶಾಲೆಗೆ ಹೈಸ್ಕೂಲ್ ಮಂಜೂರಾತಿ ಹಿನ್ನಲೆ ಬಿಇಒ ನಿಂಗಪ್ಪ ಕೆ.ಟಿ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಬಳಿಕ ಈ ಕುರಿತಂತೆ ಮಾತನಾಡಿ ತಕ್ಷಣ ಉರ್ದು ಹೈಸ್ಕೂಲ್ ಗೆ ಸೇರುವ ವಿದ್ಯಾರ್ಥಿಗಳ ದಾಖಲು ಮಾಡಿಕೊಳ್ಳುವ ಕ್ರಮ ಕೈಗೊಳ್ಳುವಂತೆ ಸೂಚಿಸಿದರು ಇನ್ನೂ ಅಲ್ಲಿಯೇ ಉಪಸ್ಥಿತರಿದ್ದ ಮುಸ್ಲಿಮ್ ಸಮಾಜ ಮುಖಂಡರಾದ ಅಕ್ತರಸಾಬ ಖಾಜಿ ಮತ್ತು ಪಪಂ ಸದಸ್ಯ ರಿಯಾಜ್ ಖಾಜಿ ಅವರು ಉರ್ದು ಶಾಲೆಗೆ ಹೈಸ್ಕೂಲ್ ದಾಖಲಾತಿ ಪಡೆಯಲು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಗಳಲ್ಲಿ ಇಂತಿಷ್ಟು ಸ್ಥಾನಗಳ ನೀಡುವ ಕ್ರಮ ಕೈಗೊಂಡಾಗ ಮಾತ್ರ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚು ಹೈಸ್ಕೂಲ್ ಗೆ ಸೇರುವರು ಕಾರಣ ಈ ಕುರಿತು ವಸತಿ ನಿಲಯಗಳ ಗಮನಕ್ಕೆ ತರುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ ಎಂದು ಬಿಇಒ ಅವರ ಗಮನಕ್ಕೆ ತಂದರು. ಶಾಲೆಗೆ ಹೈಸ್ಕೂಲ್ ವಿದ್ಯಾರ್ಥಿಗಳ ದಾಖಲು ಪಡೆಯಲು ಪ್ರತಿಯೊಬ್ಬರು ಹೆಚ್ಚು ಗಮನ ಹರಿಸಬೇಕಿದೆ ಎಂದ ಅವರು ಉರ್ದು ಶಾಲೆಯ ಹೈಸ್ಕೂಲ್ ಪ್ರಾರಂಭ ಕಾರ್ಯಕ್ರಮಕ್ಕೆ ಶಾಸಕರಾದ ಬಸವರಾಜ ರಾಯರಡ್ಡಿ ಆಗಮಿಸುವರು ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಬುಡನಸಾಬ ದಫೆದಾರ, ಪಾಷಾಸಾಬ ಕನಕಗಿರಿ, ಬಾಬುಸಾಬ ಮಂಡಲಗಿರಿ, ಎಮ್ ಎಫ್ ನದಾಫ್, ಖಾಜಾಸಾಬ ಅಮರಾವತಿ ಸೇರಿ ಶಿಕ್ಷಕರು ಪ್ರಮುಖರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

20 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

20 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

20 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

20 hours ago