ಕಲ್ಯಾಣಸಿರಿ ವಿಶೇಷ

ಅಪಘಾತದಲ್ಲಿ ನಿಧನರಾದ ವಡ್ಡರಹಟ್ಟಿ ನ್ಯಾಯಬೆಲೆ ಅಂಗಡಿ ಮಾಲಿಕಸತೀಶ ಅವರ ಕುಟುಂಬಕ್ಕೆ ಸಾಂತ್ವನ.

Nyayabele shop owner of Waddarahatti who died in an accident Condolences to Satish’s family.

ಗAಗಾವತಿ: ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲಿಕರಾದ ಸತೀಶ್‌ರವರು ಕರ್ನಾಟಕ ರಾಜ್ಯ ಪಡಿತರ ವಿತರಕರ ಸಂಘದಿAದ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ತೆರಳುವ ಸಂದರ್ಭದಲ್ಲಿ ತುಮಕೂರು ಹತ್ತಿರ ರಸ್ತೆ ಅಪಘಾತ ಸಂಭವಿಸಿ ನಿಧನ ಹೊಂದಿದ್ದು ಅವರ ಕುಟುಂಬಕ್ಕೆ ರಾಜ್ಯಾಧ್ಯಕ್ಷರಾದ ಕೃಷ್ಣಪ್ಪನವರು ಹಾಗೂ ಕಾರ್ಯಾಧ್ಯಕ್ಷರಾದ ಡಿ. ತಾಯಣ್ಣನವರು ಸ್ವತಃ ಹಣ ಸಹಾಯ ಮಾಡಿ ಅವರಿಗೆ ಧೈರ್ಯ ತುಂಬಿದರು ಎಂದು ಕರ್ನಾಟಕ ರಾಜ್ಯ ಪಡಿತರ ವಿತರಕರ ಸಂಘದ ಗಂಗಾವತಿ ತಾಲೂಕ ಅಧ್ಯಕ್ಷರಾದ ಕೆ. ಮಂಜುನಾಥ ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಕೃಷ್ಣಪ್ಪರವರು ಮಾತನಾಡಿ, ಮೃತ ಸತೀಶ್‌ರವರ ಕುಟುಂಬಕ್ಕೆ ಸಾಂತ್ವನ ಹೇಳಿ, ರಾಜ್ಯದಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸಗಟು ಮಳಿಗೆಗಳಿಂದ ನ್ಯಾಯಬೆಲೆ ಅಂಗಡಿಗಳಿಗೆ ಸಾಗಾಣಿಕೆ ಮಾಡುವ ಲಾರಿಗಳಿಗೆ ಜಿಪಿಎಸ್ ಅಳವಡಿಸಿ ಅಕ್ರಮವನ್ನು ತಡೆಗಟ್ಟಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಯಿತು ಎಂದರು.
ಇದೇ ಸಂದರ್ಭದಲ್ಲಿ ರಾಜ್ಯ ಕಮಿಟಿ ಸದಸ್ಯರಾದ ಹೇಮಣ್ಣ, ಹೊನ್ನಮ್ಮ, ಕೊಪ್ಪಳ ಜಿಲ್ಲಾಧ್ಯಕ್ಷರಾದ ಮಲ್ಲಪ್ಪ, ಕಾರಟಗಿ ತಾಲೂಕ ಅಧ್ಯಕ್ಷರಾದ ನಾಗರಾಜ ಕುಲಕರ್ಣಿ, ಪ್ರಮುಖರಾದ ದಾನನಗೌಡ ಹೇರೂರು, ಮಹಮ್ಮದ ಫಯಾಜ್, ವಿರುಪಾಕ್ಷಿ ಕಂಬಳೆ ಹಾಗೂ ಇನ್ನಿತರರು ಭಾಗವಹಿಸಿದ್ದರು.

Mallikarjun

Share
Published by
Mallikarjun

Recent Posts

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ Meeting on future plans from the educational patron   ಧಾರವಾಡ :…

47 minutes ago

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ Farmers' Central ID mandatory to avail central…

54 minutes ago

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

2022 State Level Book Selection List Published: Objection Invited 2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ…

1 hour ago

ವಿಶ್ವ ಶ್ರವಣ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

Awareness program as part of World Hearing Day ವಿಶ್ವ ಶ್ರವಣ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಕೊಪ್ಪಳ…

1 hour ago