Telangana Congress Election Manifesto Released
ಹೈದ್ರಾಬಾದ್ ನ ಗಾಂಧಿ ಭವನದಲ್ಲಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅದ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ತೆಲಂಗಾಣ 2023 ವಿಧಾನ ಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ 6 ಭರವಸೆಗಳ ಪ್ರಣಾಳಿಕೆ ಬಿಡುಗಡೆಯ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅವರು ಭಾಗವಹಿಸಿ ಪಕ್ಷದ ಭರವಸೆಯ ಪ್ರಣಾಳಿಕಾ ಪುಸ್ತಕವನ್ನು ಅನಾವರಣಗೊಳಿಸಿದರು.
ಕಾಂಗ್ರೆಸ್ “ಅಭಯಸ್ತಂ”
ಗ್ರಾರಂಟಿ 1: ಮಹಾಲಕ್ಷ್ಮೀ
ಪ್ರತಿ ತಿಂಗಳು ಮನೆಯೊಡತಿಗೆ 2,500 ರೂಪಾಯಿ. 500 ರೂ ಗ್ಯಾಸ್ ಸಿಲೆಂಡರ್. ಟಿಪಿಎಸ್ ಆರ್ ಟಿಸಿ ಬಸ್ ಉಚಿತ ಪ್ರಯಾಣ.
* ಗ್ಯಾರಂಟಿ 2: ರೈತ ಭರವಸೆ
ವರ್ಷಕ್ಕೆ ರೈತರ ಪ್ರತಿ ಎಕರೆಗೆ 15000, ಕೃಷಿ ಕಾರ್ಮಿಕರಿಗೆ 12000.
* ಗ್ಯಾರಂಟಿ 3: ಗೃಹಜ್ಯೋತಿ
ಬಡವರಿಗೆ 200 ಯೂನಿಟ್ವರೆಗೂ ಉಚಿತ ವಿದ್ಯುತ್ ಗ್ಯಾರಂಟಿ.
* ಗ್ಯಾರಂಟಿ 4: ಇಂದಿರಾ ವಸತಿ
ಹೊಸ ಮನೆ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ನೆರವು.
* ಗ್ಯಾರಂಟಿ 5: ಯುವ ವಿಕಾಸ
ವಿದ್ಯಾಭ್ಯಾಸಕ್ಕೆ 5 ಲಕ್ಷ ಕಾರ್ಡ್. ಮಂಡಲಕ್ಕೊಂಡು ಆಂಗ್ಲ ಶಾಲೆ.
* ಗ್ಯಾರಂಟಿ 6: ವೃದ್ದಾಪ್ಯ ವೇತನ
ಪಿಂಚಣಿ ಮೊತ್ತ 2,000 ರೂಪಾಯಿ ನಿಂದ 4,000 ರೂಪಾಯಿಗೆ ಹೆಚ್ಚಳ.
ಈ ಸಂದರ್ಭದಲ್ಲಿ ಟಿಪಿಸಿಸಿ ಅದ್ಯಕ್ಷರಾದ ವ ರೇವಂತರಡ್ಡಿ, ಮಾಜಿ ಸಂಸದರು, ಕಾಂಗ್ರೆಸ್ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾದ ದೀಪಾದಾಸ್ ಮುನಿಷಿ, ಪ್ರಣಾಳಿಕಾ ಬಿಡುಗಡೆ ಸಮಿತಿ ಅದ್ಯಕ್ಷರಾದ ಶ್ರೀಧರ ಬಾಬು, ತಾರೀಫ್ ಅನ್ವರ್, ಅಂಜನ್ ಕುಮಾರ್ ಯಾದವ್, ಅನಿಲ್ ಕುಮಾರ್, ಸಲೀಂ ಅಹ್ಮದ್, ಮಾಜಿ ಸಚಿವ ಚಿನ್ನಾ ರಡ್ಡಿ ಸೇರಿದಂತೆ ನೇಕರು ಉಪಸ್ಥಿತರಿದ್ದರು.
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…