ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳ ವಿರುದ್ದ ರೈತ ಸಂಘ ವತಿಯಿಂದ ಪ್ರತಿಭಟನೆ

Mallikarjun
1 Min Read
ಜಾಹೀರಾತು

Protest by Farmers Association against Sagar Rural Police Station Officers

ಜಾಹೀರಾತು

ಸಾಗರ : ರೈತ ಸಂಘದ ಪದಾಧಿಕಾರಿಗಳನ್ನು ಅಗೌರವದಿಂದ ನಡೆಸಿಕೊಂಡಿರುವ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಶುಕ್ರವಾರ ರೈತ ಸಂಘ (ಡಾ.ಎಚ್.ಗಣಪತಿಯಪ್ಪ ಬಣ) ವತಿಯಿಂದ ಡಿ.ವೈ.ಎಸ್.ಪಿ. ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ, ಗ್ರಾಮಾಂತರ ಠಾಣೆ ಅಧಿಕಾರಿಗಳ ವರ್ತನೆ ರೈತ ವಿರೋಧಿಯಾಗಿದೆ. ರೈತರಿಗೆ ಅಗೌರವ ತರುವ ರೀತಿಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ನಡೆದುಕೊಂಡಿದ್ದಾರೆ.

ಈಚೆಗೆ ಚಿಕ್ಕನೆಲ್ಲೂರು ಸಂತೋಷ್ ಅಣ್ಣೋಜಿರಾವ್ ಎಂಬುವವರಿಗೆ ಆಗಿರುವ ಅನ್ಯಾಯದ ವಿರುದ್ದ ನ್ಯಾಯ ಕೊಡಿಸಲು ರೈತ ಸಂಘ ಗ್ರಾಮಾಂತರ ಠಾಣೆಗೆ ಹೋಗಲಾಗಿತ್ತು. ಅ. ೩೦ರಂದು ಠಾಣೆಗೆ ಹೋಗಿದ್ದಾಗ ಪೊಲೀಸ್ ಅಧಿಕಾರಿಗಳು ರೈತ ಸಂಘದ ಜೊತೆ ದಬ್ಬಾಳಿಕೆ ರೀತಿಯಲ್ಲಿ ವರ್ತನೆ ಮಾಡಿದ್ದಾರೆ ಎಂದು ದೂರಿದರು.

ಸಂತೋಷ್ ಅಣ್ಣೋಜಿ ರಾವ್ ಅವರಿಗೆ ಸೂಕ್ತ ನ್ಯಾಯ ದೊರಕಿಸಿಕೊಡಲು ರೈತ ಸಂಘದ ಪದಾಧಿಕಾರಿಗಳು ಏಕೆ ಬಂದಿದ್ದೀರಿ ಎಂದು ಪೊಲೀಸ್ ಅಧಿಕಾರಿಗಳು ದಬಾಯಿಸಿದ್ದಾರೆ. ಹಾಗಾದರೆ ತಮ್ಮ ಸಂಘಟನೆಯಲ್ಲಿ ಸಕ್ರಿಯವಾಗಿರುವ ಪದಾಧಿಕಾರಿಗಳಿಗೆ ಅನ್ಯಾಯವಾದಾಗ ಠಾಣೆಗೆ ಹೋಗುವುದೇ ತಪ್ಪೇ ಎಂದು ಪ್ರಶ್ನಿಸಿದ ಅವರು ತಕ್ಷಣ ಪೊಲೀಸ್ ಅಧಿಕಾರಿ ರೈತರ ಬಳಿ ಕ್ಷಮೆಯಾಚನೆ ಮಾಡಬೇಕು.

ಇಲ್ಲವಾದಲ್ಲಿ ರಾಜ್ಯಾದ್ಯಂತ ರೈತ ಸಂಘವು ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ ಅವರು ಶಾಸಕ ಗೋಪಾಲಕೃಷ್ಣ ಬೇಳೂರು ತಾಲ್ಲೂಕಿನಲ್ಲಿ ರೈತರಿಗೆ ಪೊಲೀಸ್ ಅಧಿಕಾರಿಗಳಿಂದ ಆಗುತ್ತಿರುವ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ಹೇಳಿದರು.

ರೈತ ಸಂಘದ ಪ್ರಮುಖರಾದ ರಮೇಶ್ ಈ. ಕೆಳದಿ, ಹೊಯ್ಸಳ ಗಣಪತಿಯಪ್ಪ ಮಾತನಾಡಿದರು. ಪ್ರತಿಭಟನೆಯಲ್ಲಿ ಡಾ. ರಾಮಚಂದ್ರಪ್ಪ ಮನೆಘಟ್ಟ, ಭದ್ರೇಶ್ ಬಾಳಗೋಡು, ಚಂದ್ರು ಆಲಳ್ಳಿ, ಶಿವು ಮೈಲಾರಿಕೊಪ್ಪ, ಚಂದ್ರು ಪೂಜಾರಿ, ಚಂದ್ರು ಶಿರವಂತೆ ಇನ್ನಿತರರು ಹಾಜರಿದ್ದರು.

Total Views: 0
Share This Article