ಕಲ್ಯಾಣಸಿರಿ ವಿಶೇಷ

ಕನ್ನಡ ಸಪ್ತಾಹ: ಜಾಗೃತಿ ಜಾಥಾ

Kannada Week: Awareness Jatha

ಕನಕಗಿರಿಯ ಎಕ್ಸೆಲ್ ಪಬ್ಲಿಕ್ ಶಾಲೆಯ ವತಿಯಿಂದ ಕನ್ನಡ ಸಪ್ತಾಹ ಕಾರ್ಯಕ್ರಮದ ನಿಮಿತ್ತ ಶನಿವಾರ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು

ಕನಕಗಿರಿ: ಇಲ್ಲಿನ ಎಕ್ಸೆಲ್ ಪಬ್ಲಿಕ್ ಶಾಲೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ನಿಮಿತ್ತ ಕನ್ನಡ ಸಪ್ತಾಹದ ಜಾಗೃತಿ ಜಾಥಾ ಕಾರ್ಯಕ್ರಮ ಶನಿವಾರ ನಡೆಯಿತು.
ಮುಖ್ಯಶಿಕ್ಷಕಿ ಅರುಣಕುಮಾರಿ ವಸ್ತ್ರದ ಮಾತನಾಡಿ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದೆ, ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಕುರಿತು ಅರಿವು ಮೂಡಿಸುವ ಸಲುವಾಗಿ ಪ್ರತಿ ವರ್ಷ ಶಾಲೆಯಲ್ಲಿ ಕನ್ನಡ ಸಪ್ತಾಹ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ, ವೇಷಭೂಷಣ ಸ್ಪರ್ಧೆ ಸೇರಿದಂತೆ ಪ್ರತಿ ದಿನ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಮೆಹಬೂಬಹುಸೇನ ಮಾತನಾಡಿ ಕನ್ನಡ ಭಾಷೆಯು ಸುಲಿದ ಬಾಳೆಹಣ್ಣಿನಂತೆ ಇದ್ದು ಅದರ ವಿಶಿಷ್ಟತೆಯನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕೆಂದು ಹೇಳಿದರು. ಅನ್ಯ ಭಾಷೆಗೆ ಹೋಲಿಸಿಕೊಂಡರೆ ಕನ್ನಡವನ್ನು ಸರಳವಾಗಿ ಕಲಿಯಲು, ಬರೆಯಲು ಹಾಗೂ ಮಾತನಾಡಲು ಸಾಧ್ಯವಿದೆ ಎಂದರು. ಗೌರವ ಕಾರ್ಯದರ್ಶಿ ಕನಕರೆಡ್ಡಿ ಕೆರಿ, ನಿವೃತ್ತ ಮುಖ್ಯಶಿಕ್ಷಕ ಶ್ರೀಶೈಲ ಪಾಟೀಲ, ಶಿಕ್ಷಕ ಪ್ರಶಾಂತ ಸೇರಿದಂತೆ ಶಿಕ್ಷಕರು ಇದ್ದರು. ವಿದ್ಯಾರ್ಥಿಗಳು ಕಲ್ಮಠದಿಂದ ರಾಜಬೀದಿ ಸೇರಿದಂತೆ ಪಟ್ಟಣದ ವಿವಿಧ ಬೀದಿಗಳಲ್ಲಿ ಕನ್ನಡ ಭಾಷೆಯ ಕುರಿತು ಜಾಥಾ ನಡೆಸಿ ಜಾಗೃತಿ ಮೂಡಿಸಿದರು. ನಾಡು ನುಡಿಗೆ ಸಂಬಂಧಿಸಿದಂತೆ ಘೋಷಣೆ ಕೂಗಲಾಯಿತು. ವಿದ್ಯಾರ್ಥಿಗಳು ವಿವಿಧ ವೇಷಭೂಷಣ ಧರಿಸಿ ಗಮನ ಸೆಳೆದರು. ಕನಕಾಚಲಪತಿ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ನೃತ್ಯ ಪ್ರದರ್ಶಿಸಲಾಯಿತು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago