ಕಲ್ಯಾಣಸಿರಿ ವಿಶೇಷ

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಸರಕಾರ ಬದ್ಧ: ತಂಗಡಗಿ

Govt committed to fulfill demand of guest lecturers: Thandagi

ಕೊಪ್ಪಳ: ಅತಿಥಿ ಉಪನ್ಯಾಸಕರ ಕಾಯಮಾತಿ ಬೇಡಿಕೆ ಇವತ್ತಿನದ್ದೇನಲ್ಲ. ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಅವರ ಬೇಡಿಕೆ ಈಡೇರಿಕೆಗೆ ಸರಕಾರ ಬದ್ಧವಾಗಿದೆ ಎಂದು ಕನ್ಬಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ‌ ತಂಗಡಗಿ ಭರವಸೆ ನೀಡಿದರು.

ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಅನುರ್ದಿಷ್ಟಾವಧಿ ಧರಣಿನಿರತ ಅತಿಥಿ ಉಪನ್ಯಾಸಕರನ್ನು ಶುಕ್ರವಾರ ಭೇಟಿ ಮಾಡಿ, ಅವರ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಸರಕಾರಕ್ಕೆ ಅತಿಥಿ ಉಪನ್ಯಾಸಕರ ಕುರಿತು ಅಪಾರ ಗೌರವವಿದೆ ಎಂದರು.

ಹಿಂದಿನ ಸರಕಾರದಲ್ಲೂ ಅತಿಥಿ ಉಪನ್ಯಾಸಕರು ಹೋರಾಟ ನಡೆಸಿದ್ದು, ಗೌರವಧನ ಹೆಚ್ಚಳವಾಗಿರುವುದು ಗೊತ್ತಿದೆ. ಈಗ ಸೇವಾ ಕಾಯಂ ಬೇಡಿಕೆಯ ಆಗ್ರಹವನ್ನು ಸರಕಾರ ಗಮನಿಸುತ್ತಿದೆ. ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದೆ. ಸರಕಾರ ನಿಮ್ಮ ಪರವಾಗಿದ್ದು ಧರಣಿ ಹಿಂಪಡೆಯುವಂತೆ ಮನವಿ ಮಾಡಿದರು.

ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾದರೆ ಬಹುಶಃ ಬೇಡಿಕೆ ಈಡೇರಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸುತ್ತದೆ. ಆದರೆ ನಾನು ಬೇರೆ ಇಲಾಖೆಯ ಸಚಿವವಾಗಿ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಈ ಧರಣಿ ಕುರಿತು ಪ್ರಸ್ತಾಪಿಸುವುದು ಸಮಂಜಸವಲ್ಲ. ವಿವಿಧ ಶಾಸಕರು ಈ ಬಗ್ಗೆ ಧ್ವನಿ ಎತ್ತಿದರೆ ಅಧಿವೇಶನದಲ್ಲಿ ಖಂಡಿತವಾಗಿ ಅತಿಥಿ ಉಪನ್ಯಾಸಕರ ಪರ ಮಾತನಾಡುವುದಾಗಿ ಆಶ್ವಾಸನೆ ನೀಡಿದರು.

ಅತಿಥಿ ಉಪನ್ಯಾಸಕರಾದ ಪ್ರಕಾಶ್ ಬಳ್ಳಾರಿ ನಿರೂಪಿಸಿದರು. ಸಣ್ಣದೇವೇಂದ್ರಸ್ವಾಮಿ ಸ್ವಾಗತಿಸಿದರು. ಬಸವರಾಜ ಕರುಗಲ್ ವಂದಿಸಿದರು. ಡಾ.ವೀರಣ್ಣ ಸಜ್ಜನರ್, ಜ್ಞಾನೇಶ್ವರ ಪತ್ತಾರ, ಗೀತಾ ಬನ್ನಿಕೊಪ್ಪ, ಶಿವಬಸಪ್ಪ ಮಸ್ಕಿ, ವಿಜಯಕುಮಾರ್ ಕುಲಕರ್ಣಿ, ಡಾ.ಗಿರಿಜಾ ತುರುಮುರಿ ಸಚಿವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಹಾಂತೇಶ ನೆಲಾಗಣಿ, ಕಲ್ಲಯ್ಯ ಅಬ್ಬಿಗೇರಿ, ವಿಜಯ ತೋಟದ, ಪ್ರಕಾಶ್ ಜಡಿಯವರ, ಡಾ.ತುಕಾರಾಂ ನಾಯಕ, ಸಂತೋಷಿ ಬೆಲ್ಲದ್, ಪ್ರದೀಪ್ ಪಲ್ಲೇದ್, ಮಹೇಶ, ಮಹಾಂತೇಶ, ತಾಯಪ್ಪ, ರಾಘವೇಂದ್ರ, ಮಂಜುನಾಥ, ಮಲ್ಲಿಕಾರ್ಜುನ, ಬಸವರಾಜ, ಶಿವರಾಜ, ಕಲ್ಲಯ್ಯಸ್ವಾಮಿ, ಡಾ.ಗೀತಾ, ಸರಸ್ವತಿ, ಉಷಾ, ಆಶಾ, ಗೋಣಿಬಸಪ್ಪ, ಶಿವಪ್ರಸಾದ್ ಮತ್ತಿತರರು ಇದ್ದರು.

.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

15 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

15 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago