ಕಲ್ಯಾಣಸಿರಿ ವಿಶೇಷ

ಕಲಿಕೆಯ ಭವಿಷ್ಯ: ಸಾಮರ್ಥ್ಯ ಆಧಾರಿತ ಶಿಕ್ಷಣ ಮತ್ತು ಕೌಶಲ್ಯ ಪಾಂಡಿತ್ಯ

The future of learning: Competency-based education and skill mastery


ಗಂಗಾವತಿ: ನಗರದ ಪ್ರತಿಷ್ಟಿತ ಎಸ್. ಕೆ. ಎನ್. ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿಯ ಗ್ರಂಥಾಲಯ ಮಾಹಿತಿ ವಿಜ್ಞಾನ ವಿಭಾಗ ಮತ್ತು ಎಂ.ಎಸ್.ಎಂ.ಎಸ್ ವೃತ್ತಿಪರ ತರಬೇತಿ ಕೇಂದ್ರ, ಮರಳಿ ಹಾಗೂ ಕಾಲೇಜಿನ ಆಂತರಿಕ ಭರವಸೆ ಕೋಶ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಒಂದು ದಿನದ ರಾಜ್ಯ ಮಟ್ಟದ ವೃತ್ತಿಪರ ಕೌಶಲ್ಯ ತರಬೇತಿ ಕಾರ್ಯಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿ ಮತ್ತು ಉದ್ಘಾಟಕರಾಗಿ ಆಗಮಿಸಿದ ವಿರೂಪಾಕ್ಷಯ್ಯ ಸ್ವಾಮಿ ಎಚ್.ಎಂ, ವ್ಯವಸ್ಥಾಪಕ ನಿರ್ದೇಶಕರು, ಎಂ.ಎಸ್.ಎಂ.ಎಸ್. ವೃತ್ತಿಪರ ತರಬೇತಿ ಕೇಂದ್ರ, ಮರಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕೌಶಲ್ಯ ತರಬೇತಿ ತೊರಿಕೆಯಾಗದೆ ಅದರ ಸಿದ್ದಾಂತದ ಪರಿಚಯದಂತೆ ಮುನ್ನೆಡೆಯಬೇಕು ಮತ್ತು ಕೇಂದ್ರ ಸರ್ಕಾರದ ಕೌಶಲ್ಯ ಬಾರತ ಯೊಜನೆಯಡಿಯಲ್ಲಿ ಬರುವ ವೃತ್ತಿಪರ ಕೋರ್ಸ್ ಅನ್ನು ತೆಗೆದುಕೊಂಡು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಕೊಳ್ಳಬೇಕು ಹಾಗೂ “ಕಲಿಕೆಯ ಭವಿಷ್ಯ: ಸಾಮರ್ಥ್ಯ ಆಧಾರಿತ ಶಿಕ್ಷಣ ಮತ್ತು ಕೌಶಲ್ಯ ಪಾಂಡಿತ್ಯದಿಂದಲೆ ಎಂದು ತಮ್ಮ ಉದ್ಘಾಟಣ ನುಡಿಯಲ್ಲಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾಲೇಜಿನ ಹಿರಿಯ ಪ್ರಾದ್ಯಪಕರಾದ ಶ್ರೀಮತಿ ಜಗದೇವಿ ಕಲಶೆಟ್ಟಿ ರವರ ಅಧ್ಯಕ್ಷತೆಯ ನುಡಿಯಲ್ಲಿ, ಆದಿಕಾಲದಿಂದಲು ಮನುಕುಲಕ್ಕೆ ಕೌಶಲ್ಯ ಪರಿಚಯವಿತ್ತು ಅದರ ಸದ್ಬಲಕೆ ಕ್ರೆಮೆಣ ಕಡಿಮೆಯಾಗಿದೆ ಆದುದರಿಂದ ವಿದ್ಯಾರ್ಥಿಗಳು ಇಂತಹ ತರಬೇತಿಯೊಂದಿಗೆ ಕಲಿಕೆ ಆರಂಭಿಸಬೇಕು ಎಂದು ಹೇಳಿದರು. ವೇದಿಕೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಡಾ.ವೈ.ಎಸ್,ವಗ್ಗಿ ಆಂತರಿಕ ಭರವಸೆ ಕೋಶ ಸಂಚಾಲಕರು ತಮ್ಮ ನುಡಿಯಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಸಂಯಮ ಭಹಳ ಮುಖ್ಯ ಅದರ ಜೊತೆಗೂಡಿ ಸಾಗಿದಲ್ಲಿ ವಿದ್ಯಾರ್ಥಿಗಳ ಜೀವನ ಯಶಸ್ವಿಗೆ ಕಾರಣವಾಗುತ್ತದೆ ಎಂದು ಹೇಳಿದರು. ಡಾ.ಸೆಲ್ವರಾಜ ಸಿ, ಮುಖ್ಯಸ್ಥರು ಗ್ರಂಥಾಲಯ ವಿಬಾಗ ಪ್ರಾಸ್ತಾವಿಕ ನುಡಿಗಳನ್ನು ಹೇಳಿದರು. ವಿದ್ಯಾರ್ಥಿನಿ ಪುಷ್ಪ ಮತ್ತು ಬಸುವರಾಜ ಎಲ್ಲರಿಗೂ ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಜಾಜಿ ದೆವೇಂದ್ರಪ್ಪ, ಡಾ.ಇಮ್ಮಾನುವೇಲ್ ಸಂಜಯಾನಂದ, ಶ್ರೀ ಶಿವಕುಮಾರ, ಡಾ.ಶಿವರಾಜ ಗುರಿಕಾರ, ಇತರ ಪ್ರಾದ್ಯಾಪಕರು ಇದ್ದರು. ವಿದ್ಯಾರ್ಥಿಗಳು ಹಾಗೂ ಬೋಧಕೇತರ ಸಿಬ್ಬಂದಿ ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago