Breaking News

ಮಾದಪ್ಪನ ಸನ್ನಿಧಿಯಲ್ಲಿನ ಲಾಡು ತಯಾರಿಕ ಘಟಕದಲ್ಲಿ ಅಗ್ನಿ ಅವಘಡ ಯಾವುದೇ ನಡೆದಿಲ್ಲ .

There was no fire accident in the laddu manufacturing plant near Madappa.


ಹನೂರು: ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಾದಪ್ಪನ ಬೆಟ್ಟದಲ್ಲಿ ಅಗ್ನಿ ಅವಘಡವಾಗಿದ್ದು ಲಾಡು ತಯಾರಿಕ ಕೇಂದ್ರದಲ್ಲಿ ನಡೆದಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ತಿಳಿಸಿದರು .
ಚಾಮರಾಜನಗರದ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರದಂದು ಅಗ್ನಿ ಅವಘಡ ಸಂಭವಿಸಿದೆ. ದೇವಸ್ಥಾನದ ಬಳಿ ಇರುವ ಲಾಡು ಪ್ರಸಾದ ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದಿರುವ ಘಟನೆ ಮಧ್ಯಾಹ್ನ ವೇಳೆ ನಡೆದಿದ್ದು, ಪ್ರಾಧಿಕಾರದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಘಟಕದಲ್ಲಿರುವ ಸಿಲಿಂಡರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಇದನ್ನು ನಂದಿಸುವುದರೊಳಗೆ ಘಟಕದಲ್ಲಿ ಸಿಹಿ ಜಿಡ್ಡು ಹಾಗೂ ಎಣ್ಣೆ ಪದಾರ್ಥ ಇದ್ದ ಪರಿಣಾಮ ಎಲ್ಲೆಡೆ ಬೆಂಕಿ ಆವರಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಅಪಾರ ಪ್ರಮಾಣದ ಲಾಡು ತಯಾರಿಕ ಸಾಮಗ್ರಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಸದ್ಯ ಈ ಸಂದರ್ಭದಲ್ಲಿ ಲಾಡು ಪ್ರಸಾದ ತಯಾರಿಕಾ ಘಟಕದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಪ್ರಾಧಿಕಾರದ ಕಾರ್ಯದರ್ಶಿಗಳಾದ ಸರಸ್ವತಿಮಾತನಾಡಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಈ ಮೊದಲು ಸಹ ಘಟನೆ ನಡೆದಿದ್ದು ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕುಳಿಸದಂತೆ ನೋಡಿಕೊಳ್ಳಲಾಗುವುದು ಎಂದರು.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.