Breaking News

ಗುರು ವೃಂದದವರಿಗೆ ಸ್ವಾಗತ ಹಾಗೂ ಸತ್ಕಾರ ಕಾರ್ಯಕ್ರಮದಲ್ಲಿಚಿದಾನಂದ ಲ. ಸವದಿ ಭಾಗಿ

Welcome and refreshment program for Guru Vrinda Chidananda La. Savadi Bhagi

ಅಥಣಿ : ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ತಾಲೂಕಾ ಘಟಕ ಅಥಣಿ, ದಿ ಅಥಣಿ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತು ಬೆಳೆಸುವ ಸಹಕಾರಿ ಸಂಘ ಅಥಣಿ, ಮಹಿಳಾ ವೇದಿಕೆ ಅಥಣಿ ಇವರ ಸಹಯೋಗದಲ್ಲಿ ಪಟ್ಟಣದ ರಾಯಲ್ ಶಿಕ್ಷಣ ಸಂಸ್ಥೆಯಲ್ಲಿ ದಿ. ೨೫-೧೧-೨೩ರಂದು ಆಯೋಜಿಸಿದ್ದ ಅಥಣಿ ತಾಲೂಕಿಗೆ ೨೦೨೩-೨೦೨೪ನೇ ಸಾಲಿನಲ್ಲಿ ಬೇರೆ ಜಿಲ್ಲೆ ಹಾಗೂ ತಾಲೂಕುಗಳಿಂದ ವರ್ಗಾವಣೆಗೊಂಡು ಬಂದ ಗುರು ವೃಂದದವರಿಗೆ ಹಾಗೂ ಹೊಸದಾಗಿ ನೇಮಕಗೊಂಡ ಜಿಪಿಟಿ ಗುರು ವೃಂದದವರಿಗೆ ಸ್ವಾಗತ ಹಾಗೂ ಸತ್ಕಾರ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಯುವ ನಾಯಕರಾದ ಶ್ರೀ ಚಿದಾನಂದ ಲ. ಸವದಿಯವರು ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಥಣಿ ತಾಲೂಕಾ ಅಧ್ಯಕ್ಷರಾದ ಶ್ರೀ ಆರ್.ಎಸ್. ಪಾಟೀಲ, ಬಿಆರ್‌ಸಿ ಶ್ರೀ ಗೌಡಪ್ಪ ಖೋತ ಸೇರಿದಂತೆ ಮತ್ತಿತರ ಗಣ್ಯರು, ವಿವಿಧ ವೃಂದ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಬಿಆರ್‌ಸಿ, ಸಿಆರ್‌ಸಿ, ಶಿಕ್ಷಕರು ಪಾಲ್ಗೊಂಡಿದ್ದರು.ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ರಾಯಲ್ ಸ್ಕೂಲ್ ನಲ್ಲಿ ರಾಜ್ಯ ಸರ್ಕಾರ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘ ಅಥಣಿ ತಾಲೂಕಿನಲ್ಲಿ ಜಿ ಪಿ ಟಿ ಶಿಕ್ಷಕರಿಗಾಗಿ ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ವಿಜೃಂಭಣೆಯಿಂದ ಯಶಸ್ವಿಯಾಗಿ ಕಾರ್ಯಕ್ರಮ ನಡೆಯಿತು

ಇದೇ ಸಂದರ್ಭದಲ್ಲಿ ಚಿಕ್ಕೋಡಿಯ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷರು ಚಿಕ್ಕೋಡಿ ಜಿಲ್ಲಾ ಶಿಕ್ಷಕ ಸಂಘದ ಅಧ್ಯಕ್ಷರು ಲೋಕಣ್ಣವರ, ತಾಲೂಕಾ ಅಧ್ಯಕ್ಷರು ಹಿರೇಮಠ ಸರ್ ಶಿಕ್ಷಕರು ಶಿಕ್ಷಕಿಯರು ಮತ್ತು ಇನ್ನು ಅನೇಕರು ಮುಖಂಡರು ಉಪಸ್ಥಿತರಿದ್ದರು

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.