Discussion on North Karnataka issues for two days in Parishad: Chairman Basavaraja Horatti
ಬೆಳಗಾವಿ ಸುವರ್ಣಸೌಧ,ಡಿ.4ರಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿಧಾನಪರಿಷತ್ನಲ್ಲಿ ಎರಡು ದಿನಗಳ ಕಾಲ ಮಹದಾಯಿ,ಕೃಷ್ಣಾ,ಬರಗಾಲದ ಸಮಸ್ಯೆ ಸೇರಿದಂತೆ ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು.
ಬೆಳಗಾವಿಯ ಸುವರ್ಣಸೌಧದಲ್ಲಿ ಭಾನುವಾರ ಮಧ್ಯಾಹ್ನ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಯಾವುದೇ ಭಾಗದ ಶಾಸಕರು ಉತ್ತರ ಕರ್ನಾಟಕದ ವಿಷಯಗಳ ಕುರಿತು ಚರ್ಚೆಗೆ ಆಸಕ್ತಿ ತೋರಿದರೇ ಮೊದಲ ಆದ್ಯತೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ ಸಭಾಪತಿ ಹೊರಟ್ಟಿ ಅವರು ಈ ಬಾರಿ ಪ್ರತಿಭಟನೆಗಳ ಸಂಖ್ಯೆ ಕಡಿಮೆಗೊಳಿಸಲು ಸಂಬAಧಿಸಿದ ಸಚಿವರು ಸಂಘ-ಸAಸ್ಥೆಗಳು ಮತ್ತು ಹೋರಾಟಗಾರರೊಂದಿಗೆ ಚರ್ಚಿಸಿದ್ದಾರೆ.ಬೆಳಗಾವಿ ಅಧಿವೇಶನವೆಂದರೇ ಪ್ರತಿಭಟನೆಗಳ ಅಧಿವೇಶನವೆಂಬ ಹಣೆಪಟ್ಟಿ ಅಳಿಸಿಹಾಕಲು ಕ್ರಮವಹಿಸಬೇಕೆಂದು ಸೂಚಿಸಿ ತಾವು ಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಪತ್ರ ಬರೆದಿದನ್ನು ಉಲ್ಲೇಖಿಸಿದ ಅವರು ಈ ಹಿನ್ನೆಲೆಯಲ್ಲಿ ಈ ಬಾರಿ ಪ್ರತಿಭಟನೆಗಳು ಕಡಿಮೆಯಾಗಬಹುದು ಎಂಬ ನಿರೀಕ್ಷೆ ಇದೆ ಎಂದರು.
ವಿಧಾನಪರಿಷತ್ ಕಲಾಪಗಳಿಗೆ ಈವರೆಗೆ 1207 ಪ್ರಶ್ನೆಗಳು ಸ್ವೀಕೃತವಾಗಿವೆ;ಅವುಗಳಲ್ಲಿ 1057 ಚುಕ್ಕೆ ರಹಿತ ಪ್ರಶ್ನೆಗಳಾಗಿವೆ.ನಿಯಮ 72ರ ಅಡಿ 111 ಪತ್ರಗಳು ಸ್ವೀಕೃತವಾಗಿವೆ. ಕಲಾಪಸೂಚಿಗೆ ಸಾಕಷ್ಟು ವಿಷಯಗಳಿವೆ ಎಂದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…