Breaking News

ಹಿರಿಯ ಕಲಾವಿದ ಬಾಬಣ್ಣ ಕಲ್ಮನಿ ಅವರ ನಿಧನಕ್ಕೆ ಸಚಿವರಾದ ಶಿವರಾಜ ತಂಗಡಗಿ ತೀವ್ರ ಶೋಕ

Minister Shivraj Thangadagi deeply mourned the death of veteran artist Babanna Kalmani

ಜಾಹೀರಾತು

ಕೊಪ್ಪಳ ಡಿಸೆಂಬರ್ 10 (ಕರ್ನಾಟಕ ವಾರ್ತೆ): ಕನ್ನಡ ರಂಗಭೂಮಿಯ ಹಿರಿಯ ಕಲಾವಿದ ಶ್ರೀ ಬಾಬಣ್ಣ ಕಲ್ಮನಿ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ನನ್ನದೇ ಜಿಲ್ಲೆಯವರಾದ ಕುಕನೂರಿನ ಬಾಬಣ್ಣ ಕಲ್ಮನಿ ಅವರು ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ದೊಡ್ಡ ಹೆಸರು ಮಾಡಿದ ಕಲಾವಿದರು, ಕನ್ನಡ ರಂಗಭೂಮಿಗೆ ಅವರು ಕೊಟ್ಟ ಕೊಡುಗೆ ಅನನ್ಯವಾದದ್ದು. ಬಾಲ್ಯದಿಂದಲೇ ಕನ್ನಡ ರಂಗಭೂಮಿಗೆ ಪಾದಾರ್ಪಣೆ ಮಾಡಿದ ಬಾಬಣ್ಣ ಕಲ್ಮನಿ ಅವರಿಗೆ ರಂಗಭೂಮಿಯೇ ಜೀವನವಾಗಿತ್ತು. ಅವರು ಆರಂಭಿಸಿದ ಲಲಿತ ಕಲಾ ನಾಟ್ಯ ಸಂಘ ಅನೇಕ ಜನಪ್ರಿಯ ನಾಟಕಗಳ ಮೂಲಕ ದೊಡ್ಡ ಹೆಸರು ಮಾಡಿತ್ತು.
ಸ್ತ್ರೀ ಪಾತ್ರ ಹಾಗೂ ಪುರುಷ ಪಾತ್ರ ಎರಡರಲ್ಲೂ ತಮ್ಮ ಪ್ರತಿಭೆಯನ್ನು ಮೆರೆದಂತಹ ಹಿರಿಮೆ ಶ್ರೀ ಬಾಬಣ್ಣ ಕಲ್ಮನಿ ಅವರದ್ದು, 1993ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದ ಬಾಬಣ್ಣ ಕಲ್ಮನಿ ಅವರಿಗೆ 2021 -22ನೇ ಸಾಲಿನ ಪ್ರತಿಷ್ಠಿತ ಗುಬ್ಬಿ ವೀರಣ್ಣ ಪ್ರಶಸ್ತಿ ಘೋಷಿಸಲಾಗಿತ್ತು, ಆದರೆ, ಪ್ರಶಸ್ತಿ ಪ್ರದಾನಕ್ಕೆ ಮುನ್ನವೇ ಅವರು ದೈವಾಧೀನರಾದದ್ದು ಅತ್ಯಂತ ದುರ್ದೈವದ ಸಂಗತಿ. ಇದು ನನಗೆ ಅತ್ಯಂತ ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರಾದ ಶಿವರಾಜ ತಂಗಡಗಿ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

About Mallikarjun

Check Also

screenshot 2025 07 30 13 52 28 88 6012fa4d4ddec268fc5c7112cbb265e7.jpg

ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ “ಗ್ರೀನ್ ಕ್ಯಾಂಪಸ್ ಕ್ಲೀನ್ ಕ್ಯಾಂಪಸ್” ಉದ್ಘಾಟನಾ ಕಾರ್ಯಕ್ರಮ.

The inauguration program of "Green Campus Clean Campus" was successfully held at Christaraja Educational Institution. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.