Minister Shivraj Thangadagi deeply mourned the death of veteran artist Babanna Kalmani
ಕೊಪ್ಪಳ ಡಿಸೆಂಬರ್ 10 (ಕರ್ನಾಟಕ ವಾರ್ತೆ): ಕನ್ನಡ ರಂಗಭೂಮಿಯ ಹಿರಿಯ ಕಲಾವಿದ ಶ್ರೀ ಬಾಬಣ್ಣ ಕಲ್ಮನಿ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ನನ್ನದೇ ಜಿಲ್ಲೆಯವರಾದ ಕುಕನೂರಿನ ಬಾಬಣ್ಣ ಕಲ್ಮನಿ ಅವರು ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ದೊಡ್ಡ ಹೆಸರು ಮಾಡಿದ ಕಲಾವಿದರು, ಕನ್ನಡ ರಂಗಭೂಮಿಗೆ ಅವರು ಕೊಟ್ಟ ಕೊಡುಗೆ ಅನನ್ಯವಾದದ್ದು. ಬಾಲ್ಯದಿಂದಲೇ ಕನ್ನಡ ರಂಗಭೂಮಿಗೆ ಪಾದಾರ್ಪಣೆ ಮಾಡಿದ ಬಾಬಣ್ಣ ಕಲ್ಮನಿ ಅವರಿಗೆ ರಂಗಭೂಮಿಯೇ ಜೀವನವಾಗಿತ್ತು. ಅವರು ಆರಂಭಿಸಿದ ಲಲಿತ ಕಲಾ ನಾಟ್ಯ ಸಂಘ ಅನೇಕ ಜನಪ್ರಿಯ ನಾಟಕಗಳ ಮೂಲಕ ದೊಡ್ಡ ಹೆಸರು ಮಾಡಿತ್ತು.
ಸ್ತ್ರೀ ಪಾತ್ರ ಹಾಗೂ ಪುರುಷ ಪಾತ್ರ ಎರಡರಲ್ಲೂ ತಮ್ಮ ಪ್ರತಿಭೆಯನ್ನು ಮೆರೆದಂತಹ ಹಿರಿಮೆ ಶ್ರೀ ಬಾಬಣ್ಣ ಕಲ್ಮನಿ ಅವರದ್ದು, 1993ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದ ಬಾಬಣ್ಣ ಕಲ್ಮನಿ ಅವರಿಗೆ 2021 -22ನೇ ಸಾಲಿನ ಪ್ರತಿಷ್ಠಿತ ಗುಬ್ಬಿ ವೀರಣ್ಣ ಪ್ರಶಸ್ತಿ ಘೋಷಿಸಲಾಗಿತ್ತು, ಆದರೆ, ಪ್ರಶಸ್ತಿ ಪ್ರದಾನಕ್ಕೆ ಮುನ್ನವೇ ಅವರು ದೈವಾಧೀನರಾದದ್ದು ಅತ್ಯಂತ ದುರ್ದೈವದ ಸಂಗತಿ. ಇದು ನನಗೆ ಅತ್ಯಂತ ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರಾದ ಶಿವರಾಜ ತಂಗಡಗಿ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…