ಮಾದಿಗ/ಚಲುವಾದಿ ಸಮಾಜಗಳಿಗೆರುದ್ರಭೂಮಿಗೆಒತ್ತಾಯಿಸಿತಹಶೀಲ್ದಾರರಿಗೆ ಕಲ್ಯಾಣ ಕರ್ನಾಟಕದಲಿತಸಂಘರ್ಷ ಸಮಿತಿಯಿಂದ ಮನವಿ

An appeal by Kalyan Karnataka Dalit Sangharsha Samiti to Madiga/Chaluvadi Samaj to the beneficiaries who have been forced to land in the desert

ಕಲ್ಯಾಣ ಕರ್ನಾಟಕದಲಿತಸಂಘರ್ಷ ಸಮಿತಿಯಿಂದ ಮನವಿ


  • ಗಂಗಾವತಿ: ತಾಲೂಕಿನ ಮರಳಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ನಾಗರಹಳ್ಳಿ, ವಿನೋಬನಗರ, ಚಿಕ್ಕಜಂತಕಲ್ ಗ್ರಾಮಗಳ ಮಾದಿಗ ಹಾಗೂ ಚಲುವಾದಿ ಸಮಾಜಗಳಿಗೆ ರುದ್ರಭೂಮಿಯನ್ನು ಮಂಜೂರು ಮಾಡಲು ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಶುಕ್ರವಾರ ಗಂಗಾವತಿ ತಹಶೀಲ್ದಾರರಿಗೆ ಒತ್ತಾಯಿಸಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷರಾದ ಯಲ್ಲಪ್ಪ ಕಟ್ಟಿಮನಿ ಪ್ರಕಟಣೆಯಲ್ಲಿ ತಿಳಿಸಿದರು.
    ಅವರು ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿ, ಈ ಗ್ರಾಮಗಳಲ್ಲಿ ಹಲವಾರು ವರ್ಷಗಳಿಂದ ಮಾದಿಗ ಮತ್ತು ಚಲುವಾದಿ ಸಮಾಜದ ಜನಾಂಗದವರು ವಾಸ ಮಾಡುತ್ತಾ ಬಂದಿದ್ದು, ಇಂದಿನವರೆಗೆ ಅಧಿಕೃತವಾಗಿ ರುದ್ರಭೂಮಿ ಇಲ್ಲದ ಕಾರಣ ತುಂಗಭದ್ರಾ ನದಿ ಪಕ್ಕದ ಉಳಿದ ಜಾಗದಲ್ಲಿ ಶವಸಂಸ್ಕಾರ ಮಾಡುತ್ತಾ ಬರುತ್ತಿದ್ದಾರೆ. ನದಿ ತುಂಬಿದ ಸಮಯದಲ್ಲಿ ಶವಸಂಸ್ಕಾರ ಮಾಡಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪ್ರವಾಹದ ಸಮಯದಲ್ಲಿ ೨-೩ ದಿನಗಳ ಕಾಲ ಶವವನ್ನು ಮನೆಯಲ್ಲಿಯೇ ಇಟ್ಟುಕೊಳ್ಳುವ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ನಮ್ಮ ದೇಶಕ್ಕೆ ಸ್ವಾತಂತ್ರö್ಯ ಲಭಿಸಿ ೭೬ ವರ್ಷಗಳಾದರೂ ಮೇಲಿನ ಗ್ರಾಮಗಳಲ್ಲಿನ ಮಾದಿಗ ಹಾಗೂ ಚಲುವಾದಿ ಸಮಾಜಗಳಿಗೆ ಶವಸಂಸ್ಕಾರ ಮಾಡಲು ರುದ್ರಭೂಮಿ ಇಲ್ಲದೇ ಇರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಖೇದ ವ್ಯಕ್ತಪಡಿಸಿ, ಕೂಡಲೇ ತಾಲೂಕಾಡಳಿತ ಈ ಗ್ರಾಮಗಳ ಮಾದಿಗ/ಚಲುವಾದಿ ಸಮಾಜಗಳಿಗೆ ರುದ್ರಭೂಮಿಗಾಗಿ ಭೂಮಿಯನ್ನು ಮಂಜೂರು ಮಾಡಲು ಒತ್ತಾಯಿಸಲಾಗಿದೆ ಎಂದು ತಿಳಿಸುತ್ತಾ, ಅಲ್ಲದೇ ಭಟ್ಟರಹಂಚಿನಾಳ ಸೀಮಾ ಸ.ನಂ: ೬೮ ವಿಸ್ತೀರ್ಣ ೦೧-೦೦ ಎಕರೆ ಭೂಮಿ ಗಾಳೆಮ್ಮಗುಡಿ ಕ್ಯಾಂಪಿನ ಮಾದಿಗ ಸಮಾಜದ ರುದ್ರಭೂಮಿಯನ್ನು ಸರ್ವೇ ಮಾಡಿ ಸುತ್ತಲೂ ಫಿನ್ಸ್ ಅಳವಡಿಸಿ ಹದ್ದುಬಸ್ತು ಮಾಡಿಕೊಡಬೇಕೆಂದು ತಹಶೀಲ್ದಾರರಲ್ಲಿ ಒತ್ತಾಯಿಸಲಾಗಿದೆ ಎಂದು ತಿಳಿಸಿದರು.
  • ಮತ್ತು ಒಂದು ವೇಳೆ ನಿರ್ಲಕ್ಷಿಸಿದಲ್ಲಿ ಚಿಕ್ಕಜಂತಕಲ್, ವಿನೋಬನಗರ, ನಾಗರಹಳ್ಳಿ ಗ್ರಾಮಗಳಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ಪಾದಯಾತ್ರೆ ನಡೆಸುವ ಮೂಲಕ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಸಿದರು.
    ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳಾದ ರಮೇಶ ಅಂಗಡಿ, ರಾಜ್ಯ ಸಂಘಟನೆ ಕಾರ್ಯದರ್ಶಿ ಸುಮಿತ್ರಕುಮಾರ, ಗಂಗಾವತಿ ತಾಲೂಕ ಸಮಿತಿ ಅಧ್ಯಕ್ಷರು ಯಂಕೋಬ ಮೈಲಾಪುರ, ಕೊಪ್ಪಳ ಜಿಲ್ಲಾ ಸಹ ಕಾರ್ಯದರ್ಶಿಗಳು ಹನುಮೇಶ ಸುಳೇಕಲ್, ನೀಲಪ್ಪ ಡಣಾಪುರ, ಗಂಗಾವತಿ ತಾಲೂಕ ಗೌರವಾಧ್ಯಕ್ಷರು ಮರಿಸ್ವಾಮಿ ಹೊಸಕೇರಿಡಗ್ಗಿ, ಮರಳಿ ಹೋಬಳಿ ಅಧ್ಯಕ್ಷರು ನಾಗರಾಜ ಕಾಮದೊಡ್ಡಿ ಮರಳಿ ಹೋಬಳಿ ಉಪಾಧ್ಯಕ್ಷರು ವಿನೋಬನಗರ, ದೇವದಾಸ ಚಿತ್ತಲಕುಂಟ, ಗಂಗಾವತಿ ತಾಲೂಕ ಪ್ರಧಾನ ಕಾರ್ಯದರ್ಶಿ ಮಂಜುನಾಥ ಬಡಿಗೇರ, ಕನಕಗಿರಿ ತಾಲೂಕ ಅಧ್ಯಕ್ಷರು ಅಶೋಕ ವೆಂಕಟಗಿರಿ, ಮರಿಸ್ವಾಮಿ ಸಣಾಪುರ, ರಾಜ್ಯ ಉಪಾಧ್ಯಕ್ಷರು ಮಹಾದೇವ ಕಾಟಾಪುರ, ಯಮನೂರ ಈಳಿಗನೂರು, ವೀರೇಶ ದೇವರಮನಿ, ನಾಗರಾಜ ಗೋಡಿನಾಳ, ಶಿವಲಿಂಗ ಭಂಡಾರಿ, ಸಂತೋಷ ನಾಗೇನಹಳ್ಳಿ ಸೇರಿದಂತೆ ಗ್ರಾಮಗಳ ಹಿರಿಯರು, ಮುಖಂಡರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago