ಕಲ್ಯಾಣಸಿರಿ ವಿಶೇಷ

ಕ.ದ.ಸಂ ಸಮಿತಿ (ಭೀಮವಾದ)ಸಂಘಟನೆಯವಿವಿಧಪದಾಧಿಕಾರಿಗಳ ನೇಮಕಾತಿ.

Appointment of various office bearers of K.D.Sam Samiti (Bhimavada) organization

ಗಂಗಾವತಿ: ಸಂವಿಧಾನ ಶಿಲ್ಪಿ, ಭಾರತರತ್ನ, ವಿಶ್ವಜ್ಞಾನಿ ಡಾ. ಬಾಬಾಸಾಹೇಬ್ ಅಂಬೇಡ್ಕರ್‌ರವರ ಮಹಾಪರಿನಿರ್ವಾಣ ದಿನದ ವಿಚಾರ ಸಂಕೀರಣ ಅಂಗವಾಗಿ ಗಂಗಾವತಿ ತಾಲೂಕ ಪದಾಧಿಕಾರಿಗಳ ಅಲ್ಪಸಂಖ್ಯಾತರ ವಿಭಾಗದ ಹಾಗೂ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯ ಕೊಪ್ಪಳ ಜಿಲ್ಲಾ ಸಂಚಾಲಕರಾದ ಸಿ.ಕೆ ಮರಿಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧೀರ ಕನ್ನಡಿಗರ ಕರವೇ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ವಿರುಪಾಕ್ಷಿಗೌಡ ನಾಯಕ ಹೇರೂರು ಮತ್ತು ಯುವ ಕಾಂಗ್ರೆಸ್ ಮುಖಂಡರಾದ ರಾಜುನಾಯಕ ಅವರು ವಹಿಸಿ, ಡಾ. ಬಾಬಾಸಾಹೇಬ್ ಅಂಬೇಡ್ಕರ್‌ರವರ ವಿಚಾರಗಳನ್ನು ಮತ್ತು ಸಂಘಟನೆ ಎಂದರೇನು, ಸಂಘಟನೆಯನ್ನು ನಾವು ಏಕೆ ಮಾಡಬೇಕು, ಅನ್ಯಾಯಕ್ಕೆ ಒಳಗಾದವರ ಪರವಾಗಿ ನಾವು ಯಾವಾಗಲೂ ಧ್ವನಿ ಎತ್ತಬೇಕು ಎಂದು ಪದಾಧಿಕಾರಿಗಳಿಗೆ ತಿಳಿಸಿ, ನೂತನ ಪದಾಧಿಕಾರಿಗಳ ಆಯ್ಕೆಯನ್ನು ನೆರವೇರಿಸಿಕೊಟ್ಟರು.
ಈ ಸಂದರ್ಭದಲ್ಲಿ ಚಿಂತಕರು ಹಾಗೂ ಬುದ್ಧಿಜೀವಿಗಳಾದ ಎಂ.ಎನ್.ಎA ಕಾಲೇಜಿನ ಪ್ರಾಚಾರ್ಯರಾದ ಡಾ. ಸೋಮಕ್ಕ ಹಾಗೂ ಸರಕಾರಿ ಜೂನಿಯರ್ ಕಾಲೇಜಿನ ಗ್ರಂಥಪಾಲಕರು ಹಾಗೂ ಜಾನಪದ ಕವಿಗಳಾದ ರಮೇಶ ಗಬ್ಬೂರು ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಕುರಿತು, ಅವರು ನಡೆದುಬಂದ ದಾರಿ ಹಾಗೂ ನಮ್ಮ ದೇಶದ ಸಂವಿಧಾನ ಜಾರಿಯಾಗುವ ಪೂರ್ವದಲ್ಲಿ ಈ ದೇಶದಲ್ಲಿ ಬಹುಸಂಖ್ಯಾತ ಹೆಣ್ಣುಮಕ್ಕಳು, ಕೂಲಿಕಾರ್ಮಿಕರು, ಶೋಷಿತ ಸಮುದಾಯಗಳು, ದಲಿತರು, ತಿರಸ್ಕಾರಕ್ಕೆ ಒಳಗಾದವರು, ನಿರ್ಗತಿಕರು, ಬುಡಕಟ್ಟು ಜನಾಂಗದವರು, ಶಿಕ್ಷಣ, ಆಸ್ತಿ, ಸಂಪತ್ತು, ಸಾರ್ವಜನಿಕ ಸ್ಥಳಗಳಲ್ಲಿ ಮುಕ್ತ ಅವಕಾಶ ಇಲ್ಲದಿರುವುದು, ಕೆಲವು ಅವಕಾಶಗಳಿಂದ ವಂಚಿತರಾಗಿದ್ದರು. ಸಂವಿಧಾನ ಜಾರಿಯಾದ ನಂತರ ಇವುಗಳನ್ನು ಎಲ್ಲವನ್ನೂ ಪಡೆದುಕೊಳ್ಳುವುದಕ್ಕೆ ಸಾಧ್ಯವಾಯಿತು ಎಂದು ತಿಳಿಸುತ್ತಾ, ಬಾಬಾಸಾಹೇಬರ ಜೀವನ ಕುರಿತು ಹೇರಳವಾಗಿ ತಿಳಿಯಪಡಿಸಿದರು.
ಇದೇ ಸಮಯದಲ್ಲಿ ಸಂಘಟನೆಯ ಗಂಗಾವತಿ ತಾಲೂಕ ಅಧ್ಯಕ್ಷರಾಗಿ ಯಲ್ಲಪ್ಪ, ಉಪಾಧ್ಯಕ್ಷರಾಗಿ ಟಿ. ವೆಂಕಟೇಶ ಜಂತಕಲ್, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾಗಿ ಅತ್ತ ಸಂಪAಗಿ, ವಿದ್ಯಾರ್ಥಿ ಘಕಟದ ತಾಲೂಕ ಅಧ್ಯಕ್ಷರಾಗಿ ಸಾಗರ ಉಪಾಧ್ಯಕ್ಷರಾಗಿ ಕೃಷ್ಣ ನೂತನ ಪದಾದಿಕಾರಿಗಳಾಗಿ ಆಯ್ಕೆಯಾದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago