Breaking News

ಗಂಗಾವತಿ ನಗರದಲ್ಲಿ ಡಿಸೆಂಬರ್-೨೨ನೇ ಶುಕ್ರವಾರದಂದು ಹನುಮಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ

Sankirtana Yatra by Hanuman Maladhari at Gangavati Nagar on 22nd Dec-Friday

ಗಂಗಾವತಿ: ನಗರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡಾ ೨೨ನೇ ಡಿಸೆಂಬರ್ ಶುಕ್ರವಾರದಂದು ತಾಲೂಕಿನ ಹನುಮಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ, ಉತ್ತರ ಪ್ರಾಂತದ ಕೊಪ್ಪಳ ಜಿಲ್ಲಾ ಸಂಯೋಜಕರಾದ ಕೆ.ಎಂ ದೊಡ್ಡಬಸಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದರು.
ಅಂದು ಬೆಳಿಗ್ಗೆ ೧೦:೦೦ ಗಂಟೆಗೆ ಎ.ಪಿ.ಎಂ.ಸಿ ಚನ್ನಬಸವಸ್ವಾಮಿ ದೇವಸ್ಥಾನ (೧ನೇ ಗೇಟ್) ದಿಂದ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಪ್ರಾರಂಭಗೊAಡು, ಯಾತ್ರೆಯು ಸಿ.ಬಿ.ಎಸ್ ವೃತ್ತ, ಮಹಾವೀರ ವೃತ್ತ, ಗಾಂಧಿವೃತ್ತ, ಬಸವಣ್ಣ ಸರ್ಕಲ್, ಅಂಬೇಡ್ಕರ್ ವೃತ್ತ, ಕೊಟ್ಟೂರುಬಸವೇಶ್ವರ ದೇವಸ್ಥಾನದವರೆಗೆ ನಡೆದು ಮುಕ್ತಾಯಗೊಳ್ಳಲಿದೆ.
ಈ ಯಾತ್ರೆಯಲ್ಲಿ ಗಂಗಾವತಿ, ಕನಕಗಿರಿ, ಕಾರಟಗಿ ಹಾಗೂ ಎಲ್ಲಾ ಸುತ್ತಮುತ್ತಲಿನ ಹನುಮಮಾಲಾಧಾರಿಗಳು, ಗಣ್ಯಮಾನ್ಯರು, ಸಾರ್ವಜನಿಕರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿಶ್ವಹಿಂದೂ ಪರಿಷತ್ ಭಜರಂಗದಳ ಕೋರಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪರಿಷತ್‌ನ ಜಿಲ್ಲಾ ಕಾರ್ಯದರ್ಶಿ ವಿನಯ ಪಾಟೀಲ್, ತಾಲೂಕ ಸಂಯೋಜಕರಾದ ರಾಮಾಂಜನೇಯ, ವಿಬಗ ಸಂಯೋಜಕರಾದ ಮಲ್ಲಿಕಾರ್ಜುನ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮಾಹಿತಿಗಾಗಿ
ಕೆ.ಎಂ. ದೊಡ್ಡಬಸಯ್ಯ
ಕೊಪ್ಪಳ ಜಿಲ್ಲಾ ಸಂಯೋಜಕರು.
ಮೊ: ೯೯೦೨೫೩೮೩೨೮

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.