Sankirtana Yatra by Hanuman Maladhari at Gangavati Nagar on 22nd Dec-Friday
ಗಂಗಾವತಿ: ನಗರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡಾ ೨೨ನೇ ಡಿಸೆಂಬರ್ ಶುಕ್ರವಾರದಂದು ತಾಲೂಕಿನ ಹನುಮಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ, ಉತ್ತರ ಪ್ರಾಂತದ ಕೊಪ್ಪಳ ಜಿಲ್ಲಾ ಸಂಯೋಜಕರಾದ ಕೆ.ಎಂ ದೊಡ್ಡಬಸಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದರು.
ಅಂದು ಬೆಳಿಗ್ಗೆ ೧೦:೦೦ ಗಂಟೆಗೆ ಎ.ಪಿ.ಎಂ.ಸಿ ಚನ್ನಬಸವಸ್ವಾಮಿ ದೇವಸ್ಥಾನ (೧ನೇ ಗೇಟ್) ದಿಂದ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಪ್ರಾರಂಭಗೊAಡು, ಯಾತ್ರೆಯು ಸಿ.ಬಿ.ಎಸ್ ವೃತ್ತ, ಮಹಾವೀರ ವೃತ್ತ, ಗಾಂಧಿವೃತ್ತ, ಬಸವಣ್ಣ ಸರ್ಕಲ್, ಅಂಬೇಡ್ಕರ್ ವೃತ್ತ, ಕೊಟ್ಟೂರುಬಸವೇಶ್ವರ ದೇವಸ್ಥಾನದವರೆಗೆ ನಡೆದು ಮುಕ್ತಾಯಗೊಳ್ಳಲಿದೆ.
ಈ ಯಾತ್ರೆಯಲ್ಲಿ ಗಂಗಾವತಿ, ಕನಕಗಿರಿ, ಕಾರಟಗಿ ಹಾಗೂ ಎಲ್ಲಾ ಸುತ್ತಮುತ್ತಲಿನ ಹನುಮಮಾಲಾಧಾರಿಗಳು, ಗಣ್ಯಮಾನ್ಯರು, ಸಾರ್ವಜನಿಕರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿಶ್ವಹಿಂದೂ ಪರಿಷತ್ ಭಜರಂಗದಳ ಕೋರಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪರಿಷತ್ನ ಜಿಲ್ಲಾ ಕಾರ್ಯದರ್ಶಿ ವಿನಯ ಪಾಟೀಲ್, ತಾಲೂಕ ಸಂಯೋಜಕರಾದ ರಾಮಾಂಜನೇಯ, ವಿಬಗ ಸಂಯೋಜಕರಾದ ಮಲ್ಲಿಕಾರ್ಜುನ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮಾಹಿತಿಗಾಗಿ
ಕೆ.ಎಂ. ದೊಡ್ಡಬಸಯ್ಯ
ಕೊಪ್ಪಳ ಜಿಲ್ಲಾ ಸಂಯೋಜಕರು.
ಮೊ: ೯೯೦೨೫೩೮೩೨೮
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…