ಕಲ್ಯಾಣಸಿರಿ ವಿಶೇಷ

ಗಂಗಾವತಿಯರಸ್ತೆಗಳನ್ನು ಸರಿಪಡಿಸಲು ಶಾಸಕರಿಗೆ ಒತ್ತಾಯ: ಭಾರಧ್ವಾಜ್.

Urge MLAs to repair Gangavati roads: Bhardwaj

ಗಂಗಾವತಿ: ನಗರದಲ್ಲಿ ರಸ್ತೆಗಳು ಪೂರ್ತಿಯಾಗಿ ಹದಗೆಟ್ಟು ಸಂಚಾರಕ್ಕೆ ತೊಂದರೆಯಾಗಿದೆ. ಮುಖ್ಯವಾಗಿ ದ್ವಿಚಕ್ರ ವಾಹನಗಳ ವಾಹನ ಸವಾರರು ರಸ್ತೆಗಳಲ್ಲಿರುವ ತೆಗ್ಗುಗಳನ್ನು ತಪ್ಪಿಸಲು ಆಗದೆ ಪರದಾಡುತ್ತಿದ್ದಾರೆ. ಶಾಸಕರು ಕೂಡಲೇ ಗಂಗಾವತಿ ನಗರದ ರಸ್ತೆಗಳನ್ನು ಸ್ವತಃ ಪರಿಶೀಲಿಸಿ ರಿಪೇರಿ ಮಾಡಲು ಸರ್ಕಾರವನ್ನು ಒತ್ತಾಯಿಸಲು ಕೇಳಿಕೊಳ್ಳುತ್ತೇವೆ. ಶಾಸಕರು ಮುಂದೆ ಬಂದಲ್ಲಿ ಕಾರ್ಮಿಕರು, ಆಟೋ ಚಾಲಕರು, ಬೀದಿ ವ್ಯಾಪಾರಿಗಳು ಅವರನ್ನು ಬೆಂಬಲಿಸಿ ಸರ್ಕಾರದ ವಿರುದ್ಧ ಹೋರಾಟಗಳನ್ನು ನಡೆಸಲು ಸಿದ್ಧರಿದ್ದೇವೆ.
ಶಾಸಕರು ವಿಧಾನಸಭೆಯ ಅಧಿವೇಶನದಲ್ಲಿ ಮಾತಾಡಲು ಸಮಯ ಸಿಕ್ಕಾಗಲ್ಲೆ ಬಳ್ಳಾರಿ ಬಗ್ಗೆ ಮತ್ತು ಹಳೆಯ ಪ್ರಕರಣಗಳ ಬಗ್ಗೆ ಮಾತನಾಡುತ್ತಾರೆ. ಇದು ಗಂಗಾವತಿ ಮತದಾರರಿಗೆ ಶಾಸಕರು ಮಾಡುತ್ತಿರುವ ದ್ರೋಹವಾಗಿದೆ. ಶಾಸಕರು ಕೂಡಲೇ ಗಂಗಾವತಿಯ ೩೫ ವಾರ್ಡುಗಳನ್ನು ಪರಿಶೀಲಿಸಿ ರಸ್ತೆಗಳನ್ನು ಸರಿಪಡಿಸಲು ಸರ್ಕಾರವನ್ನು ಒತ್ತಾಯಿಸಲು ಮುಂದಾಗಬೇಕು.
ಶಾಸಕರು ರಸ್ತೆಗಳ ವಿಷಯದಲ್ಲಿ ನಿರ್ಲಕ್ಷö್ಯವಹಿಸಿ ಅಂಜನಾದ್ರಿ ಬೆಟ್ಟ ಇನ್ನಿತರ ದೇವಸ್ಥಾನಗಳ ಬಗ್ಗೆ ಮಾತನಾಡುವುದು ಪ್ರಗತಿಪರ ಜನರು ಗಮನಿಸುತ್ತಿದ್ದಾರೆ. ಗಂಗಾವತಿಯಲ್ಲಿ ಸುಮಾರು ಹತ್ತು ವರ್ಷಗಳಿಂದ ನಿವೇಶನಗಳಿಗಾಗಿ ಅರ್ಜಿ ಸಲ್ಲಿಸಿದ ನಿವೇಶನರಹಿತರಿಗೆ ಯಾವುದೇ ರೀತಿಯ ಸ್ಪಂದಿಸುತ್ತಿಲ್ಲ. ಶಾಸಕರು ಈ ವಿಷಯವನ್ನು ಹಗುರವಾಗಿ ಪರಿಗಣಿಸದೇ ಮುಂದಿನ ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ಶಾಸಕರ ವಿರುದ್ಧ ಗಂಗಾವತಿ ಬಂದ್ ಮಾಡಿ ಪ್ರತಿಭಟಿಸಬೇಕಾಗುತ್ತದೆ ಎಂದು ಕ್ರಾಂತಿಚಕ್ರ ಬಳಗ ಎಚ್ಚರಿಸಿದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago