Vishwakarma’s contribution to the historic architectural heritage of the country is immense…..Minister Shivraj Thangadagi
ಸಿಂಧನೂರು ನಗರದ ವಾರ್ಡ ನಂಬರ್ 4ರಲ್ಲಿನ ವಿಶ್ವಕರ್ಮ ಸಮುದಾಯದ ಶೀಥೀಲಾವಸ್ಥೆಯಲ್ಲಿರುವ ಶ್ರೀ ಕಾಳಿಕಾದೇವಿ ದೇವಸ್ಥಾನ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಕೋರಿ ಸಚಿವ ಶಿವರಾಜ ತಂಗಡಗಿ ಅವರಿಗೆ ಕಾರಟಗಿಯ ನಿವಾಸದಲ್ಲಿ ಸಿಂಧನೂರಿನ ವಿಶ್ವಕರ್ಮ ಮುಖಂಡರು ಭೇಟಿ ಮಾಡಿ ಮನವಿ ಸಲ್ಲಿಸಿದರು.
ನಾಡಿನ ಐತಿಹಾಸಿಕ ವಾಸ್ತು ಶಿಲ್ಪ ಪರಂಪರೆಗೆ ಶಿಲ್ಪಿಗಳ ಕೊಡುಗೆ ಅಪಾರ ಎಂದು ಹಿಂದುಳಿದ ವರ್ಗ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಹೇಳಿದರು.
ಕಾರಟಗಿ ನಗರದ ತಮ್ಮ ನಿವಾಸದಲ್ಲಿ ಸಿಂಧನೂರಿನ ವಿಶ್ವಕರ್ಮ ಮುಖಂಡರ ಮನವಿ ಸ್ವೀಕರಿಸಿ ಮಾತನಾಡಿದ ಅವರು ನಾಡಿನ ಐತಿಹಾಸಿಕ ವಾಸ್ತು ಶಿಲ್ಪ ಪರಂಪರೆಗೆ ಶಿಲ್ಪಿಗಳ ಕೊಡುಗೆ ಅಪಾರ.
ವಿಶ್ವಕರ್ಮರು ತಮ್ಮದೇ ಆದ ಸಾಂಪ್ರದಾಯಿಕ ವೃತ್ತಿಯನ್ನು ಮಾಡುವ ಮೂಲಕ ಈ ನಾಡಿಗೆ ಕಲೆ,ಸಂಸ್ಕೃತಿ,ವಾಸ್ತುಶಿಲ್ಪಗಳನ್ನು ಕೊಡುಗೆ ನೀಡಿದವರು.ಇಂತಹ ಒಂದು ಅದ್ಭುತವಾದ ಕಲೆಯನ್ನು ಹೊಂದಿರುವ ಏಕೈಕ ಸಮಾಜ ವಿಶ್ವಕರ್ಮ ಸಮಾಜ.ಇಂತಹ ಸಮಾಜವನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸ ಬೇಕಾಗಿದೆ.ನಿಮ್ಮ ಮನವಿಯನ್ನು ಆದಷ್ಟೂ ಶೀಘ್ರವಾಗಿ ಪರಿಶೀಲಿಸಿ ಶ್ರೀ ಕಾಳಿಕಾದೇವಿ ದೇವಸ್ಥಾನ ಹಾಗೂ ಸಮುದಾಯ ಭವನ ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ರಾಜ್ಯ ಕಾರ್ಯದರ್ಶಿ ಸೋಮಣ್ಣ ಸುಕಲಪೇಟೆ,ತಾಲೂಕ ಅದ್ಯಕ್ಷರಾದ ಮೌನೇಶ ತಿಡಿಗೋಳ,ಮುಖಂಡರುಗಳಾದ ಅಂಬಣ್ಣ ಗೊರೆಬಾಳ, ಧರ್ಮಣ್ಣ ಗುಂಜಳ್ಳಿ,ಷಣ್ಮುಖಪ್ಪ ಮುಳ್ಳೂರು,ಡಾ.ವೀರೇಶ ತಿಡಿಗೋಳ,ವೀರಭದ್ರಪ್ಪ ಹಂಚಿನಾಳ,ಮಂಜುನಾಥ ಕೊಟ್ನೆಕಲ್,ಮೌನೇಶ ಸಾಲವಾಡಗಿ,ಬಸವರಾಜ ಕಮತಗಿ,ಶಂಕರ ಪತ್ತಾರPWD, ಸುಶೀಲ ದೇವರಗುಡಿ,ಮುತ್ತಣ್ಣ ಪತ್ತಾರ,ವಿನೋದ ಪತ್ತಾರ, ಉಪೇಂದ್ರ ಆಚಾರಿ ಶಿಲ್ಪಿ,ರಾಜು ಬಳಗಾನೂರ,ಮಂಜುನಾಥ ಉಪ್ಪಲದೊಡ್ಡಿ,ವೀರೇಶ ಚನ್ನಳ್ಳಿ,ಚನ್ನಪ್ಪ ಕೆ.ಹೊಸಹಳ್ಳಿ ಇನ್ನೂ ಹಲವರು ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…