Breaking News

ಶ್ರದ್ಧಾ ಭಕ್ತಿಯಿಂದ ಜರುಗಿದಕೆರೆಮಾರುತೇಶ್ವರ ಜಾತ್ರೆ

Keremaruteshwar fair held with devotion

ಜಾಹೀರಾತು

ಸಂತಸದಿಂದ ನೂತನ ಉಚ್ಛಾಯ ಎಳೆದ ಮಹಿಳೆಯರು

ಕನಕಗಿರಿ ತಾಲೂಕಿನ ಚಿಕ್ಕಡಂಕನಕಲ್ ಗ್ರಾಮದ ಹೊರ ಹೊಲದಲ್ಲಿರುವ ಉದ್ಭವ ಮೂರ್ತಿ ಶ್ರೀ ಕೆರೆಮಾರುತೇಶ್ವರ ದೇವರ ಜಾತ್ರೆಯು ಶನಿವಾರದಂದು ದೇವರಿಗೆ ಪೂಜೆ ವಿಧಿ ವಿಧಾನಗಳ ಮಾಡುವ ಮೂಲಕ ವಿಜೃಂಭಣೆಯಿಂದ ಜಾತ್ರೆ ನೆಡೆಯಿತು.

ಪ್ರತಿ ವರ್ಷದಂತೆ ಈ ಬಾರಿಯು ಕಾರ್ತಿಕೋತ್ಸವದ ಅಂಗವಾಗಿ ಗ್ರಾಮದ ಕೆರೆಮಾರುತೇಶ್ವರ ದೇವರ ಜಾತ್ರೆಯು ವಿಶೇಷವಾಗಿ ಧಾರ್ಮಿಕ‌ ಭಕ್ತಿ ಭಾವದಿಂದ ಶನಿವಾರದಂದು ಬೆಳಿಗ್ಗೆ ವಿಗ್ರಹ ಮೂರ್ತಿಗೆ ವಿಶೇಷ ರುದ್ರಾಭೀಷೇಕ ಪೂಜೆ ಹಾಗೂ ಇಷ್ಟಾರ್ಥ ಸಿದ್ಧಿಗೆ ಜನರು ಕುಟುಂಬಸಮೇತ ಬಂದು ದೀರ್ಘ ದಂಡ ನಮಸ್ಕಾರ ಹಾಕಿ ದೇವರ ದರ್ಶನ ಪಡೆದು ಪುನೀತ ಭಾವ ತಳೆದರು.

ನೂತನ ಉಚ್ಛಾಯ ಮೆರವಣಿಗೆ: ಪ್ರತಿ ವರ್ಷದಂತೆ ಕಾರ್ತಿಕೋತ್ಸವ ಅಂಗವಾಗಿ ನೆಡೆಯುವ ಶ್ರೀ ಕೆರೆಮಾರುತೇಶ್ವರ ದೇವರಿಗೆ ಭಕ್ತಾದಿಗಳಿಂದ ತಯಾರಿಸಿದ ನೂತನ ಉಚ್ಛಾಯ ಉತ್ಸವದ ಮೆರವಣಿಗೆ ಶನಿವಾರದಂದು ಸಂಜೆ ಅದ್ದೂರಿಯಾಗಿ ಡೊಳ್ಳು ಬಾರಿಸುವುದರ ಜೊತೆಗೆ ಮೆರವಣಿಗೆಯು ದೇವಾಲಯದಿಂದ ಎದುರು ಬಸವಣ್ಣ ಪಾದುಗಟ್ಟೆಯವೆರೆಗೆ ಮೆರವಣಿಗೆ ನೆಡೆಯಿತು. ವಿಶೇಷವಾಗಿ ಪ್ರಪ್ರಥಮ ಬಾರಿಗೆ ಗ್ರಾಮದ ಮಹಿಳೆಯರು ಪುರುಷರೊಂದಿಗೆ ಜೊತೆಗೂಡಿ ತಾವೇ ಸ್ವತಃ ದೇವರ ಉಚ್ಛಾಯ ಎಳೆಯುವ ಮೂಲಕ ಗಮನ ಸೆಳೆದರು.

ಗ್ರಾಮದ ಕೆರೆ ಮಾರುತೇಶ್ವರ ಸೇವಾ ಟ್ರಸ್ಟ್ ವತಿಯಿಂದ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಸುಗಮ ದರ್ಶನದ ವ್ಯವಸ್ಥೆ ಹಾಗೂ ಮಹಾ ಪ್ರಸಾದ ವ್ಯವಸ್ಥೆಯನ್ನು ಸಹ ಮಾಡಿ ದೇವರ ಕೃಪೆಗೆ ಪಾತ್ರರಾದರು.

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *