Breaking News

ಗಂಗಾವತಿಯವಿದ್ಯಾನಗರದಲ್ಲಿ ರೈತನ ಆತ್ಮಹತ್ಯೆ.

Farmer’s suicide in Vidyanagar, Gangavati.

ಗಂಗಾವತಿ: ನಗರದ ರಾಯಚೂರು ರಸ್ತೆಯ ವಿದ್ಯಾನಗರದ ನಿವಾಸಿ ಬಸವರಾಜ @ ಬಸಪ್ಪ (೫೩) ಎಂಬ ರೈತ ಸರಿಯಾಗಿ ಬೆಳೆ ಬಾರದೇ, ಸಾಲಬಾಧೆಯಿಂದ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಸದರಿಯವರಿಗೆ ಪತ್ನಿ ಹಾಗೂ ಮೂರು ಹೆಣ್ಣು ಮಕ್ಕಳಿದ್ದು, ಅವರ ಸಾವಿನಿಂದ ಕುಟುಂಬ ಅನಾಥವಾಗಿದೆ.
ಬಸವರಾಜ @ ಬಸಪ್ಪ ಇವರು ತಮ್ಮ ಸಹೋದರ ಸಂಗಪ್ಪ ಎಂಬುವವರ ಹೆಸರಿನಲ್ಲಿದ್ದ ೦೪ ಎಕರೆ ೩೭ ಗುಂಟೆ ಜಮೀನಿನ ಮೇಲೆ ಆಕ್ಸಿಸ್ ಬ್ಯಾಂಕ್‌ನಲ್ಲಿ ೪.೩೭ ಲಕ್ಷ ಸಾಲ ಮಾಡಿದ್ದು, ಅಲ್ಲದೇ ಶ್ರೀ ಧರ್ಮಸ್ಥಳ ಮಂಜುನಾಥ ಗುಂಪಿನಲ್ಲಿ ೩ ಲಕ್ಷ ಸಾಲ ಪಡೆದುಕೊಂಡಿದ್ದು, ಆದರೆ ಸರಿಯಾಗಿ ಮಳೆ ಬರದೆ ಇದ್ದುದರಿಂದ ಬಿತ್ತನೆ ಮಾಡಿದ ಬೆಳೆ ಕೈಗೆ ಸಿಗದೇ ಆರ್ಥಿಕವಾಗಿ ತೀವ್ರವಾಗಿ ಹಿನ್ನಡೆ ಅನುಭವಿಸಿ, ಸಾಲದ ಕಿರುಕುಳದಿಂದ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಡಿಸೆಂಬರ್-೨೩ ರಂದು ಇಲಿ ಪಾಷಾಣ ಸೇವಿಸಿದ್ದರು, ಅವರನ್ನು ಗಂಗಾವತಿ ಸರಕಾರಿ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿರುತ್ತಾರೆ.
ಸದರಿಯವರ ಆತ್ಮಹತ್ಯೆ ಕುರಿತು ಅವರ ಅಳಿಯನಾದ ರವಿಕುಮಾರ ಎಂಬುವವರು ಗಂಗಾವತಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಾಗಿರುತ್ತದೆ.

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.