ಕಲ್ಯಾಣಸಿರಿ ವಿಶೇಷ

ಹೊಸ ವರ್ಷದಆಚರಣೆಯಲ್ಲಿ ರೇವ್ ಪಾರ್ಟಿಗಳಿಗೆ ನಿರ್ಬಂಧಿಸಿಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಒತ್ತಾಯ

Restrict to rave parties in celebration of New Year Forced to curb illegal and unethical activities.

ಗಂಗಾವತಿ: ತಾಲೂಕಿನ ಸಣಾಪುರ, ಆನೆಗುಂದಿ, ಸಂಗಾಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ರೇವ್ ಪಾರ್ಟಿಗಳಿಗೆ ನಿರ್ಬಂಧಿಸಿ, ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಹೆಚ್. ಶಿವರಾಮೇಗೌಡ್ರು ಬಣ) ಯ ಗಂಗಾವತಿ ತಾಲೂಕ ಅಧ್ಯಕ್ಷರಾದ ಯಮನೂರ ಭಟ್ ತಹಶೀಲ್ದಾರರಿಗೆ ಒತ್ತಾಯಿಸಿದರು.
ಅವರು ಡಿಸೆಂಬರ್-೨೭ ಬುಧವಾರ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಹೊಸ ವರ್ಷದ ಸಂಭ್ರಮಾಚರಣೆಯ ಸಿದ್ಧತೆಗಳು ನಡೆದಿದ್ದು, ರೇವ್ ಪಾರ್ಟಿಗಳ ಆಯೋಜನೆಗೆ ಕೆಲವು ರೆಸಾರ್ಟ್ ಮಾಲಿಕರು ಹಾಗೂ ರೆಸ್ಟೋರೆಂಟ್‌ಗಳ ಮಾಲಿಕರು ಮುಂದಾಗಿದ್ದು, ಇಂತಹ ಪಾರ್ಟಿಗಳಿಗೆ ನೆರೆಹೊರೆ ಜಿಲ್ಲೆ ಹಾಗೂ ರಾಜ್ಯಗಳಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ. ಪ್ರಸ್ತುತ ದೇಶಾಧ್ಯಂತ ಕೊರೋನಾ ಭೀತಿ ಮತ್ತೆ ಆರಂಭವಾಗಿದ್ದು, ಹೆಚ್ಚಿನ ಪ್ರವಾಸಿಗರಿಂದಾಗಿ ಕೊರೋನಾ ಸೋಂಕು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಕಾರಣ ತಾಲೂಕಾಡಳಿತ ಮುಂಜಾಗ್ರತಾ ದೃಷ್ಟಿಯಿಂದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ನಿರ್ಬಂಧ ಹೊರಡಿಸಿ, ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳು ನಡೆಯದಂತೆ ಕ್ರಮವಹಿಸಬೇಕೆಂದು ಒತ್ತಾಯಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರ ಘಟಕ ಅಧ್ಯಕ್ಷರಾದ ಹನುಮೇಶ್ ಕುರುಬರು, ಉಪಾಧ್ಯಕ್ಷರಾದ ಅಂಬಾಸ್, ತಾಲೂಕು ಯುವ ಘಟಕ ಅಧ್ಯಕ್ಷರಾದ ಸುನಿಲ್ ಕುಮಾರ್ ಕುಲಕರ್ಣಿ, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಪವನ್‌ಕುಮಾರ್ ಗಡ್ಡಿ, ತಾಲೂಕು ಸಂಚಾಲಕರಾದ ಸುರೇಶ್ ಚನ್ನಳ್ಳಿ, ತಾಲೂಕು ಕಾರ್ಯದರ್ಶಿ ಹುಲುಗಪ್ಪ ಹಾರೆಗಾರ, ಮುತ್ತುರಾಜ್ ಕುಷ್ಟಗಿ, ವಿಜಯಕುಮಾರ ಸಮಗಾರ, ಮಾರುತಿ ಹಾಗೂ ರಕ್ಷಣಾ ವೇದಿಕೆಯ ಇನ್ನಿತರ ಪದಾಧಿಕಾರಿಗಳು ಭಾಗಿಯಾಗಿದ್ದರು.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

2 hours ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

21 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

21 hours ago