ವರದಿ :ಬಂಗಾರಪ್ಪ ಸಿ ಹನೂರು.
ಹನೂರು :ಕ್ಷೇತ್ರದಲ್ಲಿ ರೈತರಿಗೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಬಗೆಹರಿಸದಿರುವುದು ಬೆಸರದ ಸಂಗಾತಿ ಹಾಗೂ ರಾಮಾಪುರ ಹೋಬಳಿಯ ನಾಲ್ ರೋಡಿನಿಂದ ಮಾರ್ಟಳ್ಳಿ-ಜಲ್ಲಿಪಾಳ್ಯಂ ವರೆಗಿನ ಕಾಡಂಚಿನ ಗ್ರಾಮಗಳ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಜನವರಿ 3ನೆ ತಾರೀಖಿನಂದು ನಾಲ್ ರೋಡ್ ನಲ್ಲಿ ರಸ್ತೆ ತಡೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೈತ ಸಂಘದ ಉಪಾಧ್ಯಕ್ಷರಾದ ಗೌಡೆಗೌಡ ತಿಳಿಸಿದರು.
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹನೂರು ತಾಲ್ಲೂಕು ಘಟಕದ ಅಧ್ಯಕ್ಷ ರಾದ ಅಮ್ಜಾದ್ ಖಾನ್
ಚಾಮರಾಜನಗರ ಜಿಲ್ಲೆಯಲ್ಲಿ ಅತ್ಯಂತ ದೊಡ್ಡ ತಾಲ್ಲೂಕಾದ ಹನೂರಿನಲ್ಲಿ ರುವ ಕಾಡಂಚಿನ ಗ್ರಾಮಗಳ ರೈತರ ಸಮಸ್ಯೆಗಳು ಬಹಳಷ್ಟಿದ್ದು, ಅಭಿವೃದ್ಧಿ ಕಡೆಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನವೇ ಕೊಡದ ಕಾರಣ ಸಮಸ್ಯೆಗಳನ್ನು ಬಗೆಹರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ರಾಮಾಪುರ ಹೋಬಳಿ ನಾಲ್ ರೋಡಿನಲ್ಲಿ ಮೇಲ್ಕಂಡ ಸಂಘಟನೆಯು ರಸ್ತೆ ತಡೆ ಚಳುವಳಿಯನ್ನು ಹಮ್ಮಿಕೊಂಡಿರುತ್ತದೆ. ಆದ್ದರಿಂದ ಮಾರ್ಟಳ್ಳಿ, ವೆಟ್ಟುಕಾಡು, ಬಿದರಹಳ್ಳಿ, ಸಂದನಪಾಳ್ಯ, ಪೆದ್ದನಪಾಳ್ಯ, ಕೂಡೂರು, ಹೂಗ್ಯಂ, ಜಲ್ಲಿಪಾಳ್ಯ ಮುಂತಾದ ಗ್ರಾಮಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದೆವಿ ಎಂದರು.
ಇದೇ ಸಮಯದಲ್ಲಿ ಮಂಡಿಸಿದ
-ಹಕ್ಕೋತ್ತಾಯಗಳು :-
ಹಾವಳಿ ಹೆಚ್ಚಾಗಿದ್ದು ರೈಲ್ವೆ ಕಂಬಿಗಳ ಬ್ಯಾರಿಕೇಡ್ ಬೇಲಿ ನಿರ್ಮಾಣ ಮಾಡಬೇಕು.
5) ಕೂಡಲೂರು ಹಾಗೂ ಸುಳ್ಳಾಡಿ ಪ್ರಾಥಮಿಕ ಆರೋಗ್ಯ ಕೇಂದ್ರವು ಸರ್ಮಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಆದ್ದರಿಂದ ಆರೋಗ್ಯ ಸಿಬ್ಬಂದಿ ಸರಿಯಾಗಿ ಕೆಲಸ ಮಾಡುವಂತೆ ಕ್ರಮವಹಿಸಬೇಕು.
6) ಸ್ಥಳೀಯವಾಗಿ ಲಭ್ಯವಿರುವ ಕೊಟ್ಟಿಗೆ ಗೊಬ್ಬರವು ಹೊರ ರಾಜ್ಯಕ್ಕೆ ಸಾಗಾಣಿಕೆಯಾಗುತ್ತಿದ್ದು ಸ್ಥಳೀಯ ರೈತರಿಗೆ ಗೊಬ್ಬರ ದೊರಕುತ್ತಿಲ್ಲ ಆದ್ದರಿಂದ ಕೊಟ್ಟಿಗೆ ಗೊಬ್ಬರವು ಹೊರರಾಜ್ಯಕ್ಕೆ ಹೋಗದಂತೆ ನಿರ್ಬಂದ ವಿಧಿಸಬೇಕು.
ಈ ಮೇಲ್ಕಂಡ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸುವ ರಸ್ತೆ ತಡೆ ಚಳುವಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಗ್ರಾಮಸ್ಥರು ಭಾಗವಹಿಸುವಂತೆ ಮೇಲ್ಕಂಡ ಸಂಘಟನೆ ಮನವಿ ಮಾಡಿದೆ , ದರಣಿಯ ಸಮಯದಲ್ಲಿ
ಸುವ್ಯವಸ್ಥೆ ಕಾಪಾಡಬೇಕು. ಹಾಗೂ ಅನಿದಿಷ್ಟ ರಸ್ತೆ ತಡೆ ಚಳುವಳಿಯ ಸ್ಥಳಕ್ಕೆ ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಜಿಲ್ಲಾಧಿಕಾರಿಗಳು, ಉಪವಿಭಾಗಅಧಿಕಾರಿಗಳು, ಹಾಗೂ ಹಾಗೂ ಇನ್ನಿತರೆ ಅಧಿಕಾರಿಗಳು ರಸ್ತೆ ತಡೆ ಚಳುವಳಿ ಸ್ಥಳಕ್ಕೆ ಬರಬೇಕೆಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಕ್ತಿವೇಲು, ಗೌರವಾಧ್ಯಕ್ಷ ರಾಜೇಂದ್ರ, ಯುವ ಘಟಕ ಅಧ್ಯಕ್ಷ ಸೂರ್ಯ, ಜಿಲ್ಲಾ ಉಪಾಧ್ಯಕ್ಷರಾದ ಲೋಕೇಶ್ ಗೌಡ, ಕಾಶಿ ಗೌಡ, ಅರ್ಪದ್ ರಾಜ್, ಪಳನಿ ಶೆಟ್ಟಿ, ಹುಚ್ಚಯ್ಯ, ರಾಜಮಣಿ, ಪೂಂಗುಡಿ, ಸೇರಿದಂತೆ ಇನ್ನಿತರರು ಹಾಜರಿದ್ದರು.
124th day of anti-Baldota factory sit-in is a success; MLAs' move welcomed ೧೨೪ನೇ ದಿನದ ಬಲ್ಡೋಟ…
ಗಂಗಾವತಿ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಶ್ರೀಯೋಗಿ ನಾರಾಯಣ ಯತೀಂದ್ರರ 300ನೇ ಜಯಂತಿ ಆಚರಣೆ 300th birth anniversary of…
https://kalyanasiri.in/2026/03/02/influential-people-planning-to-encroach-on-government-cattle-ranch-villagers-oppose/
https://kalyanasiri.in/2026/03/03/no-matter-how-many-births-you-take-you-cannot-repay-your-fathers-debt/
ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…
ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…