ರಾಜಕೀಯ

ನಮ್ಮ ಅಂಗನವಾಡಿ ರೇಡಿಯೋ ವಿಶೇಷ ಕಾರ್ಯಕ್ರಮ : ಶುಭಹಾರೈಸಿದ ತಿಪ್ಪಣ್ಣ ಸಿರಸಗಿ

Our Anganwadi Radio Special Program: Greetings from Tippanna Sirasagi

ಗಂಗಾವತಿ, ಜನವರಿ 10;ಗಂಗಾವತಿ ನಗರದ 30ನೇ ವಾರ್ಡಿನಲ್ಲಿರುವ ಗ್ರಾಮೀಣ ಭಾರತಿ 90.4ಎಫ್‌ ಎಂ ರೇಡಿಯೋ ನಿಲಯದಲ್ಲಿ ಜನವರಿ 09 ರಂದು ಮದ್ಯಾಹ್ನ 12 ಗಂಟೆಗೆ ʼನಮ್ಮ ಅಂಗನವಾಡಿʼ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕುರಿತಾದ 2ನೇ ಸಂಚಿಕೆಯ ಕಾರ್ಯಕ್ರಮ ಇದಾಗಿತ್ತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೊಪ್ಪಳ ಜಿಲ್ಲಾ ಉಪನಿರ್ದೇಶಕರಾದ ತಿಪ್ಪಣ್ಣ ಪಿ ಸಿರಸಗಿ ಅವರು ನೇರಪ್ರಸಾರದ ರೇಡಿಯೋ ಕಾರ್ಯಕ್ರಮದಲ್ಲಿ ಕರೆಯ ಮೂಲಕ ಕಾರ್ಯಕ್ರಮಕ್ಕೆ ಶುಭ ಕೋರಿ ಮಾತನಾಡಿದರು.

ನಂತರದಲ್ಲಿ ಗಂಗಾವತಿ ನಗರದ 24, 25 ಮತ್ತು 26ನೇ ವಾರ್ಡಿನ ಅಂಗನವಾಡಿ ಮಕ್ಕಳು ಶಿಶುಗೀತೆಗಳನ್ನು ಹಾಡಿದರು.  ‘ಅಂಗನವಾಡಿ ಶಾಲಾ ಪೂರ್ವ ಶಿಕ್ಷಣ’ ಕುರಿತು ಹಿರಿಯ ಮೇಲ್ವಿಚಾರಕಿ ವಿದ್ಯಾವತಿ  ಮಾಹಿತಿ ಹಂಚಿಕೊಂಡರು.

ಮೇಲ್ವಿಚಾರಕಿ ಚಂದ್ರಮ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು. ರೇಡಿಯೋ ನಿರೂಪಕಿ ಹಾಗೂ ನಿಲಯ ವ್ಯವಸ್ಥಾಪಕಿ ಲಾವಣ್ಯ ಅಂಚಕಟ್ಲು ಕಾರ್ಯಕ್ರಮ ನಿರೂಪಿಸಿದರು.

ಈ ವೇಳೆ ನಿಲಯ ನಿರ್ದೇಶಕರಾದ ರಾಘವೇಂದ್ರ ತೂನ, ನಗರದ 24, 25 ಮತ್ತು 26ನೇ ವಾರ್ಡಿನ ಅಂಗನವಾಡಿ ಮಕ್ಕಳು, ಪಾಲಕರು ಹಾಗೂ ಅಂಗನವಾಡಿ ಶಿಕ್ಷಕಿಯರಾದ ಶಿವಬಸಮ್ಮ, ಮೆಹಮೂದಾ, ಮತ್ತು ನಾಗಮ್ಮ ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

11 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

11 hours ago