ಕಲ್ಯಾಣಸಿರಿ ವಿಶೇಷ

ರಾಜ್ಯಸರಕಾರ ಎಲ್ಲಾ ಇಲಾಖೆಗಳಿಗೆ ಇ-ಹಾಜರಿ ಕಡ್ಡಾಯ ಮಾಡಿ -ಪ್ರವೀಣ ನಾಯಿಕ ಒತ್ತಾಯ

Make e-attendance mandatory for all state government departments :- Praveena Naika urges

ಕಾಗವಾಡ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಸಿಬ್ಬಂದಿ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದೆ ಚಕ್ಕರ ಹಾಕುತ್ತಿರುವ ಪ್ರವೃತ್ತಿ ಹೆಚ್ಚುತ್ತಿರುವದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಇ-ಹಾಜರಾತಿ ಜಾರಿಗೆ ತಂದು ಮುಗುದಾರ ಹಾಕಿದ್ದು ಒಳ್ಳೆಯ ಕಾರ್ಯ ಎಂದು ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡ ಪ್ರವೀಣ ನಾಯಿಕ ಹೇಳಿದ್ದಾರೆ.

ಗ್ರಾಮ ಪಂಚಾಯಿತಿಯಲ್ಲಿ ಇ ಹಾಜರಾತಿ ಜಾರಿ ಮಾಡಿರುವದು ಉತ್ತಮ ಬೆಳವಣಿಗೆ ಇ ಹಾಜರಾತಿ ಹಾಕದೆ ನಿರ್ಲಕ್ಷಿಸಿದರೆ ವೇತನ ಕಡಿತಗೊಳ್ಳುತ್ತದೆ ಅಧಿಕಾರಿ, ಸಿಬ್ಬಂದಿ ಸರಿಯಾದ ಸಮಯಕ್ಕೆ ಕಛೇರಿಗೆ ಬಂದು ಕಾರ್ಯನಿರ್ವಹಿಸಲಿದ್ದಾರೆ ಈ ಮೊದಲು ಜನಸಾಮಾನ್ಯರು ಕಚೇರಿಗೆ ಹೋದಾಗಲೇಲ್ಲ ಸಿಬ್ಬಂದಿ ಅಷ್ಟೇ ಇರುತಿದ್ದರು. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಸರಿಯಾದ ಸಮಯಕ್ಕೆ ಇರುವದೆ ಅಪರೂಪವಾಗಿದೆ.ಗ್ರಾಮ ಪಂಚಾಯತಿ ಸೇರಿದಂತೆ ಎಲ್ಲಾ ಇಲಾಖೆಗಳಿಗೆ ಜಾರಿ ಆಗಬೇಕು.

ರಾಜ್ಯಸರಕಾರ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಕಡ್ಡಾಯ ಸಮಯ ಪಾಲನೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದು ಮತ್ತು ಬೆಳಗಾವಿ ಜಿಲ್ಲಾ ಪಂಚಾಯಿತಿ ಸಿಇಒ ಹರ್ಷಲ ಬೋಯರ ಇವರು ಉತ್ತಮ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದು ಜಿಲ್ಲೆಯ ಎಲ್ಲಾ ಗ್ರಾಮಪಂಚಾಯಿತಿಗಳಿಗೆ ಭೇಟಿ ನೀಡಿ ಜನ ಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಬೇಕೆಂದು ಕಾಂಗ್ರೆಸ್ ಪಕ್ಷದ ಮುಖಂಡ ಪ್ರವೀಣ ನಾಯಿಕ ಒತ್ತಾಯ ಮಾಡಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago