ಕಲ್ಯಾಣಸಿರಿ ವಿಶೇಷ

ಶ್ರೀಘ್ರದಲ್ಲೆ ಚಿಕ್ಕೋಡಿ ಪಟ್ಟಣದ ಗುರುವಾರ ಪೇಠೆ ರಸ್ತೆಅಗಲೀಕರಣ.

Road widening of Chikkodi town in Srighra on Thursday

ಚಿಕ್ಕೋಡಿ: ಇಂದು ವಿ ಪ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಶ್ರೀ ಪ್ರಕಾಶ ಹುಕ್ಕೇರಿ ಅವರು ಚಿಕ್ಕೋಡಿ ಪಟ್ಟಣದ ಗುರುವಾರ ಪೇಠನಲ್ಲಿರುವ ವ್ಯಾಪಾರಸ್ಥರೊಂದಿಗೆ ಸಭೆ ನಡೆಸಿ ಚಿಕ್ಕೋಡಿ ಪಟ್ಟಣದ ನಿವಾಸಿಗಳ ಬಹುದಿನಗಳ ಬೇಡಿಕೆಯಾದ ಗುರುವಾರ ಪೇಠ ರಸ್ತೆ ಅಗಲೀಕರಣದ ಬಗ್ಗೆ ಚರ್ಚಿಸಿದರು.

ಶ್ರೀ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೆರಿಯವರ ಪ್ರಯತ್ನದಿಂದ ಚಿಕ್ಕೋಡಿ ಪಟ್ಟಣದ ಗುರುವಾರ ಪೇಠದ ರಸ್ತೆ ಅಗಲೀಕರಣದ ಹಿನ್ನೆಲೆಯಲ್ಲಿ ವ್ಯಾಪಾರಸ್ಥರಿಗೆ ಭೂ ಸ್ವಾಧೀನ ಪರಿಹಾರ ಹಾಗೂ ರಸ್ತೆ ಅಗಲೀಕರಣಕ್ಕಾಗಿ ಸುಮಾರು 7 ಕೋಟಿ ರೂ. ನೀಡಲಾಗುವುದು ಎಂದು ಹೇಳಿದರು.

ಗುರುವಾರ ಪೇಠ ರಸ್ತೆ ಅಗಲೀಕರಣದ ವಿಷಯ ತಿಳಿದು ಪಟ್ಟಣದ ವ್ಯಾಪಾರಸ್ಥರು ಸಹಮತದಿಂದ ಒಪ್ಪಿಗೆ ಸೂಚಿಸಿ ಹರ್ಷ ವ್ಯಕ್ತಪಡಿಸಿದರು.

ಗುರುವಾರ ಪೇಠ ರಸ್ತೆಯಲ್ಲಿ ಹೊಸ ಮಾದರಿಯ ಭೂಗತ ವಿದ್ಯುತ್ ಕೇಬಲ್ ಅಳವಡಿಕೆಯ ತಂತ್ರಜ್ಞಾನದ ಮೂಲಕ ಬೀದಿ ದೀಪಗಳನ್ನು ಅಳವಡಿಸಲಾಗುವುದು ಹಾಗೂ ಜನದಟ್ಟಣೆ ತಗ್ಗಿಸಲು ಅತಿ ಶೀಘ್ರದಲ್ಲಿಯೇ ಗುರುವಾರ ಪೇಠ ರಸ್ತೆಯ ಅಗಲೀಕರಣ ಮಾಡಿ ವ್ಯಾಪಾರಿಗಳಿಗೆ ಹಾಗೂ ನಗರದ ಜನತೆಗೆ ಅನುಕೂಲ ಕಲ್ಪಿಸಲಾಗುವುದು. ಎಂದು ಹೇಳಿದರು.ತಹಶೀಲ್ದಾರು, ಪುರ ಸಭೆ ಸದಸ್ಯರು ಹಾಗೂ ವ್ಯಾಪಾರಸ್ಥರು ಉಪಸ್ಥಿತರಿದ್ದರು..

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago