ಕಲ್ಯಾಣಸಿರಿ ವಿಶೇಷ

ವಿದ್ಯಾರ್ಥಿದೆಸೆಯಿಂದಲೇ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ಇಂದಿನದಿನಮಾನಗಳಲ್ಲಿ ಅತ್ಯಂತ ಅಗತ್ಯ -ಡಾ. ಅಮರೇಶ್ ಪಾಟೀಲ್

Dr. Amarēś pāṭīlIt is very necessary to develop a scientific attitude from the students themselves -Dr. Amaresh Patil

ಗಂಗಾವತಿ, ೧೩:ಇಂದಿನ ಮಕ್ಕಳೇ ಮುಂದಿನ ನಾಗರಿಕರು ವಿದ್ಯಾರ್ಥಿ ದೆಸೆಯಿಂದಲೇ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ಇಂದಿನ ದಿನಮಾನಗಳಲ್ಲಿ ಅತ್ಯಂತ ಅಗತ್ಯ ಎಂದು ಗಂಗಾವತಿಯ ಖ್ಯಾತ ಮಕ್ಕಳ ತಜ್ಞರು ಹಾಗೂ ಡಾ. ಹೆಚ್ ನರಸಿಂಹಯ್ಯ ಪ್ರಶಸ್ತಿ ಪುರಸ್ಕೃತ ಡಾ. ಅಮರೇಶ್ ಪಾಟೀಲ್ ಅಭಿಪ್ರಾಯಪಟ್ಟರು . ಅವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಜಿಲ್ಲಾ ಘಟಕ ಕೊಪ್ಪಳ ವತಿಯಿಂದ, ಸ್ವಾಮಿ ವಿವೇಕಾನಂದರ ದಿನಾಚರಣೆ ಪ್ರಯುಕ್ತ ಸರ್ಕಾರಿ ಪ್ರೌಢಶಾಲೆ ಇಸ್ಲಾಂಪುರ್ ಸಿಬಿಎಸ್ ಗಂಜ್ ನಲ್ಲಿ ಹಮ್ಮಿಕೊಳ್ಳಲಾದ ಯುವ ವೈಜ್ಞಾನಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ವಿಜ್ಞಾನ ಹಾಗೂ ಆಧ್ಯಾತ್ಮ ಜೊತೆಗೂಡಿ ಸಾಗಬೇಕು. ನಿಮ್ಮೊಳಗೆ ನೀವು ಇಣುಕಿ ನೋಡಿದಾಗ ಆ ಸತ್ಯದ ಅರಿವಾಗಲು ಸಾಧ್ಯ ಎಂದರು ಸ್ವಾಮಿ ವಿವೇಕಾನಂದರು ಯಾವುದೇ ಜಾತಿ ಧರ್ಮಕ್ಕೆ ಸೀಮಿತ ರಾಗಿರಲಿಲ್ಲ ಅವರೊಬ್ಬ ದೃಢ ಮನಸ್ಸಿನ ಸಂತರಾಗಿದ್ದು ಭಾರತದ ಯೋಗ ಪದ್ಧತಿಯನ್ನು ಪ್ರಪಂಚಕ್ಕೆ ಪರಿಚಯಿಸಿದವರು ಎಂದರು.
ಇನ್ನೋರ್ವ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕೊಪ್ಪಳ ಜಿಲ್ಲಾ ಆರ್ ಟಿ ಓ ಕಚೇರಿಯ ನಿವೃತ್ತ ಸೂಪರಿಟೆಂಡೆ ಡೆಂಟ್ ಆಗಿರುವ ಸನ್ಮಾನ ಶ್ರೀ ಲಕ್ಷ್ಮಣ್ ಗೌಡ್ರು ಮಾತನಾಡಿ ಪ್ರಾಮಾಣಿಕತೆ ಶ್ರದ್ಧೆ ಗುರಿ ಮುಟ್ಟಲೇಬೇಕೆಂಬ ಛಲವಿದ್ದರೆ ಏನನ್ನಾದರೂ ಸಾಧಿಸಬಹುದು ಇದಕ್ಕೆ ಸಾಕ್ಷಾತ್ ನನ್ನ ಸುಪುತ್ರರು ನೈಜ ಉದಾಹರಣೆ ಎಂದು ತಮ್ಮ ಸ್ವಂತ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.
ಪರಿಷತ್ತಿನ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಸಿದ್ದಲಿಂಗೇಶ್ವರ ಪೂಲ ಬಾವಿ ಮಾತನಾಡಿ ಪರಿಷತ್ತು ಅತ್ಯಂತ ವೇಗವಾಗಿ ಇಡೀ ರಾಜ್ಯದಲ್ಲಿ ಬೆಳೆಯುತ್ತಿದ್ದು ಈಗಾಗಲೇ 40,000ಕ್ಕೂ ಹೆಚ್ಚು ಜನ ಸದಸ್ಯರನ್ನು ಹೊಂದಿದೆ. ಅಜ್ಞಾನ ಅಳಿಯಬೇಕೆನ್ನುವ ವಿಜ್ಞಾನ ಬೆಳೆಯಬೇಕೆನ್ನುವ ಎಲ್ಲರೂ ಸಹ ಇದರ ಸದಸ್ಯರಾಗಬಹುದು ಎಂದರು.
ಶಾಲೆ ಪ್ರಭಾರಿ ಮುಖ್ಯಗುರು ಎಸ್ ಕೆ ಜಡ್ ಮೋಹಿದೀನ್ ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಖಜಾಂಚಿ ಈರಣ್ಣ ಹೆಬ್ಬಾಳ್ ಗಂಗಾವತಿ ತಾಲೂಕ ಪ್ರೌಢಶಾಲಾ ನೌಕರರ ಪತ್ತಿನ ಸಹಕಾರ ಸಂಘದ ನಿರ್ದೇಶಕಿಯಾದ ಶ್ರೀಮತಿ ಜಯಶ್ರೀ ಹಕ್ಕಂಡಿ ಕಾರ್ಯಕ್ರಮ ನಿರೂಪಿಸಿದರು . ಶಾಲೆಯ ವಿಜ್ಞಾನ ಶಿಕ್ಷಕ ಅಮೃತ್ ಕುಮಾರ್ ಸ್ವಾಗತಿಸಿ ದರು. ಶಾಲೆ ವಿದ್ಯಾರ್ಥಿನಿ ಕುಮಾರಿ ಮೀನಾಕ್ಷಿ ಪ್ರಾರ್ಥಿಸಿದರು. ಶಾಲೆಯ ಹಿರಿಯ ಶಿಕ್ಷಕರಾದ ಶ್ರೀ ಅಬ್ದುಲ್ ನಬಿ, ಶ್ರೀಮತಿ ಸೋಫಿಯಾ ಬೇಗಂ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಭೀಮಪ್ಪ ಕೋಳೂರು, ಶಾಮಲಮ್ಮ ಶಾಲೆಯ ಅಡುಗೆ ಸಿಬ್ಬಂದಿ ಸೇರಿದಂತೆ ಶಾಲೆ ವಿದ್ಯಾರ್ಥಿಗಳು ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

12 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

12 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

12 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

12 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

12 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

12 hours ago