ಕಲ್ಯಾಣಸಿರಿ ವಿಶೇಷ

ಸಹಸ್ರಾಂಜನೇಯ ದೇವಸ್ಥಾನದಲ್ಲಿ ಶೇಖಣ್ಣಾಚಾರ್ಯ ಸ್ಮರಣೆ

Memorial of Shekhannacharya in Sahasranjaneya Temple


ಕೊಪ್ಪಳ, ೧೩: ನಗರದ ಶ್ರೀ ಸಹಸ್ರಾಂಜನೇಯ ದೇವಸ್ಥಾನದ ಆವರಣದಲ್ಲಿ ಆಂಜನೇಯನ ಆರಾಧಕರಾದ ಅನ್ನಪೂರ್ಣೇಶ್ವರಿ ಕೃಪಾಕಟಾಕ್ಷವಿದ್ದ ಶ್ರೀ ಶೇಖಣ್ಣಾಚಾರ್ ಶಿಲ್ಪಿ ಅವರ ೧೭ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ವಿಶೇಷ ಪೂಜೆ ಜರುಗಿತು.
ಗವಿಶ್ರೀನಗರದ ಶ್ರೀ ಕೇತೇಶ್ವರ ಕಲ್ಯಾಣ ಮಂಟಪದ ಹತ್ತಿರವಿರುವ ಶ್ರೀ ಸಹಸ್ರಾಂಜನೇಯ ದೇವಸ್ಥಾನದಲ್ಲಿ ಪಂಚಾಮೃತ ಅಭಿಷೇಕ ಮತ್ತು ಕಾರ್ತಿಕ ಇಳಿಸುವ ಕಾರ್ಯಕ್ರಮ ನಿಮಿತ್ಯ ಸಂಕ್ಷಿಪ್ತ ಮದ್ದು ಸುಡುವ ಕಾರ್ಯಕ್ರಮ ಸಹ ನಡೆಯಿತು.
ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜಿ. ಗೊಂಡಬಾಳ ಮಾತನಾಡಿ, ವಿಶ್ವದಲ್ಲಿಯೇ ಇಂಥಹ ದೇವಸ್ಥಾನ ಸಿಗುವದಿಲ್ಲ, ಒಂದೇ ಕಡೆಗೆ ೬೧೪೪ ಆಂಜನೇಯನ ಮೂರ್ತಿಗಳು ನೋಡಲು ಸಿಗುತ್ತವೆ, ಟ್ರಸ್ಟ್ ಅಧ್ಯಕ್ಷ ಮತ್ತು ಆಂಜನೇಯನ ಆರಾಧಕರಾದ ಪ್ರಕಾಶ ಶಿಲ್ಪಿ ಅವರು ಒಬ್ಬರೇ ಮಡಿಯಲ್ಲಿ ಆರು ಸಾವಿರ ಆಂಜನೇಯನ ಮೂರ್ತಿಗಳನ್ನು ಕೆತ್ತಿದ್ದಾರೆ. ಪ್ರತಿ ಮಂಡಲಕ್ಕೆ ವಿಶೇಷವಾಗಿ ಪೂಜೆ ಮಾಡಲಾಗುತ್ತಿದೆ, ಇಂತಹ ಸ್ಥಳದ ಮಹಿಮೆ ಇರುವ ದೇವಸ್ಥಾನದ ನಂಟು ಈಗ ರಾಮನ ಅಯೋಧ್ಯೆಗೆ ಬೆಸೆದುಕೊಂಡಿದೆ ಎಂದರು.
ಒAದು ದಶಕದ ಕಾಲ ದೇವಸ್ಥಾನದ ಸ್ಥಳಕ್ಕೆ ಖ್ಯಾತನಾಮರು ಆಗಮಿಸಿ ಸ್ಥಳಪಾವನ ಮಾಡಿದ್ದಾರೆ, ಅತೀ ಶೀಘ್ರದಲ್ಲಿ ಅಲ್ಲಿ ಶಿಲಾ ದೇವಸ್ಥಾನ ನಿರ್ಮಾಣ ಕಾರ್ಯ ಆರಂಭವಾಗಲಿದೆ, ಜನೇವರಿ ೨೨ ರಂದು ಅಯೋಧ್ಯೆ ರಾಮನ ಮೂರ್ತಿ ಪ್ರತಿಷ್ಠಾನಗೊಳ್ಳಲಿದೆ ಅಂದು ಅದೇ ಕಲ್ಲಿನ ಉಳಿದ ಬಾಗದಲ್ಲಿ ಹನುಮನ ವಿಶೇಷ ಮೂರ್ತಿ ಸಿದ್ದಗೊಂಡ ಪೂಜೆಗೊಳ್ಳಲಿದೆ ಎಂದರು.
ಈ ಸಂದರ್ಭದಲ್ಲಿ ಆಂಜನೇಯನ ಆರಾಧಕರಾದ ಪ್ರಕಾಶ ಶಿಲ್ಪಿ, ಮಹಿಳಾ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ, ಪ್ರಹಲ್ಹಾದಪ್ಪ, ವಿರೇಶ ಚೋಳಪ್ಪನವರ, ಸೌಭಾಗ್ಯ ಗೊರವರ, ಪ್ರಸನ್ನ, ಪವನ, ಪುನೀತ ಅನೇಕರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago