ಕಲ್ಯಾಣಸಿರಿ ವಿಶೇಷ

ಗ್ರಾಮೀಣ ಕೃಪಾಂಕ ನಿರ್ಲಕ್ಷ್ಯಿಸದಿರಿ ಹಳ್ಳಿ ಪಾಲಕರಿಗೆ ಜಿಜಿಡಿಇ ಟ್ರಸ್ಟ್ ಅಧ್ಯಕ್ಷ ಜಿ. ಶ್ರೀಧರ ಕಿವಿಮಾತು

Gramin Krupanka Do not neglect the village parents GGDE Trust President G. Sridhar’s ear

ಗಂಗಾವತಿ: ಹಳ್ಳಿ ಶಾಲೆಗಳಲ್ಲಿ ಓದಿದ ಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ.25ರಷ್ಟು ಮೀಸಲಾತಿ ಇದ್ದು, ಪಾಲಕರು ಈ ವಿಷಯವನ್ನು ನಿರ್ಲಕ್ಷ್ಯಿಸಬಾರದು ಎಂದು ಕೇಸರಹಟ್ಟಿಯ ಗದ್ದಡಿಕಿ ಗಂಗಮ್ಮ ದೇವಪ್ಪ ಎಜ್ಯುಕೇಷನಲ್ ಟ್ರಸ್ಟ್ ಅಧ್ಯಕ್ಷ ಜಿ.ಶ್ರೀಧರ ಹೇಳಿದರು.

ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಗ್ರಾಮೀಣ ಶಾಲೆಯ 20ನೇ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

1ರಿಂದ 10ನೇ ತರಗತಿ ವರೆಗೆ ಗ್ರಾಮೀಣ ಶಾಲೆಗಳಲ್ಲಿ ಅಭ್ಯಾಸ ಮಾಡಿದವರಿಗೆ ಮೆಡಿಕಲ್, ಇಂಜಿನಿಯರಿಂಗ್, ಡೆಂಟಲ್ ಮತ್ತಿತರ ಉನ್ನತ ವ್ಯಾಸಂಗಗಳಿಗೆ ಶೇ.25ರಷ್ಟು ಸ್ಥಾನಗಳನ್ನು ಸರ್ಕಾರ ಮೀಸಲು ಇರಿಸಿದೆ. ಕೇವಲ ಶೇ.2ರಷ್ಟು ಮೀಸಲಾತಿ ಪಡೆಯಲು ಗಂಭೀರ ಹೋರಾಟ ನಡೆದಿರುವುದನ್ನು ಕಾಣುತ್ತಿರುವ ಪಾಲಕರು ಸರ್ಕಾರವೇ ಕೊಟ್ಟಿರುವ ಗ್ರಾಮೀಣ ಕೃಪಾಂಕದತ್ತ ಗಮನ ಹರಿಸಬೇಕು ಎಂದು ಮನವಿ ಮಾಡಿದರು.

ಸ್ವಾ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಗಂಗಾವತಿ ಬಿಇಒ ವೆಂಕಟೇಶ ಸಿಂಧ್ಯ ಮಾತನಾಡಿ, ಕೇಸರಹಟ್ಟಿ ಗ್ರಾಮ ಗಂಗಾವತಿ ತಾಲೂಕಿಗೆ 25 ವೈದ್ಯರನ್ನು ಕೊಟ್ಟಿದೆ. ಇದಕ್ಕೆ ಕಾರಣ ಅವರು ಪಡೆದ ಶಿಕ್ಷಣ. ಶಿಕ್ಷಣ ವ್ಯವಹಾರವಲ್ಲ. ಅದೊಂದು ಸಾಮಾಜಿಕ ಸೇವೆ. ಇಂಥ ಸೇವೆ ಮಾಡುತ್ತಿರುವ ಜಿಜಿಡಿಇ ಟ್ರಸ್ಟ್ ಕೆಲಸ ಶ್ಲಾಘನೀಯ ಎಂದರು.

42 ಜನ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಜಿ.ಜಯಶ್ರೀ ಅವರು, ಮಹಿಳೆಯರು, ಮಕ್ಕಳು ವಿಶೇಷವಾಗಿ ಗರ್ಭಿಣಿಯರ ಆರೋಗ್ಯ ಕಾಳಜಿ ಮಾಡುವ ಕೆಲಸವನ್ನು ಆಶಾ ಕಾರ್ಯಕರ್ತೆಯರು ಮಾಡುತ್ತಿದ್ದಾರೆ. ಸ್ವಸ್ಥ ಸಮಾಜಕ್ಕಾಗಿ ದುಡಿಯುತ್ತಿರುವ ಇಂಥವರನ್ನು ಗುರುತಿಸಿ ಸನ್ಮಾನಿಸಲು ಸಂತೋಷ ಎನಿಸುತ್ತದೆ ಎಂದರು.

ಕಾರ್ಯಕ್ರಮ ಉದ್ಘಾಸಿದ ಮಕ್ಕಳ ವೈದ್ಯ ಡಾ.ಅಮರ್ ಪಾಟೀಲ ಮಾತನಾಡಿ,    ಪಾಲಕರು ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜತೆ ಸಂಸ್ಕಾರವನ್ನು ಕೊಡಿಸಬೇಕು. ವಿದ್ಯಾವಂತರು ಕೃಷಿ, ಪಶು ಸಂಗೋಪನೆಗೆ ಮುಂದಾಗಬೇಕು. ಈ ಶಾಲೆಯಲ್ಲಿ ಗೋಶಾಲೆ ಸ್ಥಾಪಿಸಿ, ಮಕ್ಕಳಿಗೆ ಪ್ರಾಯೋಗಿಕ ಜ್ಞಾನ ನೀಡಬೇಕು ಎಂದು ಸಲಹೆ ನೀಡಿದರು.

ಬಿಆರ್‌ಸಿ ಮಂಜುನಾಥ ವಸ್ತ್ರದ್ ಮಾತನಾಡಿ, ಈ ಶಾಲೆ ಮಕ್ಕಳಿಗೆ ಶಿಕ್ಷಣ ಕೊಡುವುದರ ಜತೆಗೆ ಭಾರತೀಯ ಸಂಸ್ಕೃತಿಯನ್ನು ಕಲಿಸುತ್ತಿರುವುದು, ಮಕ್ಕಳಲ್ಲಿ ನೈತಿಕ ಮೌಲ್ಯ ಬಿತ್ತುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು. ಸಿಆರ್‌ಸಿ ಬೆಟ್ಟದಪ್ಪ ಮಾತನಾಡಿ, ಶಿಕ್ಷಣ ಹುಲಿಯ ಹಾಲಿದ್ದಂತೆ. ಅದನ್ನು ಕುಡಿದವರು ಘರ್ಜಿಸಲೇ ಬೇಕು ಎಂದು ಡಾ.ಬಿ.ಆರ್. ಅಂಬೇಡ್ಕರ್ ಹೇಳಿದ್ದಾರೆ. ಶಿಕ್ಷಣಕ್ಕೆ ಅಂತಹ ಶಕ್ತಿ ಇದೆ ಎಂದರು.

ಇದೇ ವೇಳೆ ಆಶಾ ಕಾರ್ಯಕರ್ತೆಯರನ್ನುಮತ್ತು ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿಕಾಸ ಮತ್ತು ಕರುಣಾಕರ ಹಾಗೂ ಸರ್ಕಾರಿ ಶಾಲೆಗೆ ನೇಮಕಗೊಂಡ ಹಿರಿಯ ಶಿಕ್ಷಕ ಮೌನೇಶ ಬಡಿಗೇರ್ ಅವರನ್ನು ಸನ್ಮಾನಿಸಲಾಯಿತು. 

ಜಿಜಿಡಿಇ ಟ್ರಸ್ಟಿಗಳಾದ ಶಾರದಮ್ಮ ಜಿ.ಮಂಜುನಾಥ, ಪಂಪಾಪತಿ ನಾಗಪ್ಪ ಇದ್ದರು. ಆಡಳಿತಾಧಿಕಾರಿ ಲಿಂಗಾರೆಡ್ಡಿ ಆಲೂರು ಪ್ರಾರ್ಥಿಸಿದರು. ಮುಖ್ಯಶಿಕ್ಷಕ ರಾಘವೇಂದ್ರ ದಂಡಿನ್ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಪ್ರಶಾಂತ ಮತ್ತು ಶ್ರಾವಣಿ ನಿರೂಪಿಸಿದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago