ಕಲ್ಯಾಣಸಿರಿ ವಿಶೇಷ

ರೈತ ಸಂಘಟನೆಯ ಕ್ಷಮೆ ಕೋರಿದ ಶಾಸಕ ಎಮ್ ಆರ್ ಮಂಜುನಾಥ್

MLA MR Manjunath apologized to farmers’ organization


ಹನೂರು:ಸರ್ಕಾರದಿಂದ ಸಾರ್ವಜನಿಕರಿಗಾಗಿ ಹಮ್ಮಿಕೊಂಡಿದ್ದ ಕುಂದುಕೊರತೆಗಳ ಸಭೆಯಲ್ಲಿ ರೈತರಿಗೂ ಶಾಸಕರ ಬೆಂಬಲಿಗರಿಗೂ ನಡೆದ ಮಾತಿನ ಚಕಮಕಿಯಿಂದ ರೈತ ಸಂಘವು ಸಭೆಯಿಂದ ದೂರುವುಳಿದಿದ್ದರು .ಇದನ್ನು ಮನಗಂಡ ಶಾಸಕರು ರೈತರಿಗೂ ತಮ್ಮ ಬೆಂಬಲಿಗರಿಗೂ ಯಾವುದೇ ಮನಸ್ಥಾಪಕ್ಕೆ ಅನುವು ಮಾಡದೆ ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಅಂತ್ಯವಾಡಿದರು . ಪಟ್ಟಣದಲ್ಲಿ ಶನಿವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಶಾಸಕರ ಬೆಂಬಲಿಗರು ಹಾಗೂ ರೈತ ಸಂಘದ ಪದಾಧಿಕಾರಿಗಳ ನಡುವೆ ನಡೆದ ವಾಗ್ವಾದಕ್ಕೆ ಸಂಬಂಧಿಸಿದಂತೆ ಶಾಸಕ ಎಂ.ಆ‌ರ್.ಮಂಜುನಾಥ್ ತಮ್ಮ ಬೆಂಬಲಿಗರ ಪರವಾಗಿ ಕ್ಷಮೆಯಾಚಿಸುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಶನಿವಾರ ಪಟ್ಟಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ ಕರ್ನಾ ಟಕ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ ರೈತರ ಸಮಸ್ಯೆಗಳನ್ನು ತಿಳಿಸುತ್ತಿದ್ದಾಗ ಶಾಸಕ ಮಂಜುನಾಥ್‌ರವರ ಬೆಂಬಲಿಗರು ಹಾಗೂ ರೈತ ಸಂಘದವರ ನಡುವೆ ಮಾತಿನ ಚಕಮಕಿ ನಡೆದು ರೈತ ಸಂಘದ ಸದಸ್ಯರು ಶಾಸಕರು ಹಾಗೂ ಅವರ ಬೆಂಬಲಿಗರಿಗೆ ಧಿಕ್ಕಾರ ಕೂಗಿ ಸಭೆ ಬಹಿಷ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ರೈತ ಸಂಘದವರು ಪತ್ರಿಕಾಗೋಷ್ಠಿ ಕರೆದಿದ್ದರು. ಬಳಿಕ ಶಾಸಕರು ರೈತ ಸಂಘದವರು ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿ ಸ್ಥಳಕ್ಕೆ ಆಗಮಿಸಿ ತಮ್ಮ ಬೆಂಬಲಿಗರ ಪರವಾಗಿ ಕ್ಷಮೆಯಾಚಿಸುವ ಮೂಲಕ ವಿವಾದ ಬಗೆಹರಿಸಿದ್ದಾರೆ. ಇದೇ ಸಮಯದಲ್ಲಿ ಶಾಸಕರು ಮಾತನಾಡಿದ, ರೈತ ಸಂಘದ ಸದಸ್ಯರು ಯಾವುದೇ ಸಮಸ್ಯೆಗಳಿದ್ದರೂ ನನಗೆ ಲಿಖಿತವಾಗಿ ಮನವಿ ನೀಡಿ, ದ ಮನವಿಯನ್ನು ನೀಡದೆ ಸುಮ್ಮನೆ ಪ್ರತಿಭಟನೆ ನಡೆಸಿದರೆ ವಿಚಾರ ತಿಳಿಯುವುದಿಲ್ಲ. ಮುಂದಿನ ದಿನಗಳಲ್ಲಿ ಸಮಸ್ಯೆಗಳನ್ನು ನನ್ನ = ಗಮನಕ್ಕೆ ತಂದು, ಸಮಸ್ಯೆ ಪರಿಹರಿಸದಿದ್ದರೆ ನೀವು ಹೋರಾಟ ಮಾಡಬಹುದು ಅದಕ್ಕೆ ನನ್ನ ಅಭ್ಯಂತರವಿಲ್ಲ ಎಂದು ತಿಳಿಸಿದರು.

ನಂತರ ರೈತ ಮುಖಂಡರು ಮಾತನಾಡಿ, ರಾಮಾಪುರ ಹೋಬಳಿ ವ್ಯಾಪ್ತಿಯಲ್ಲಿ ಒಂದೇ ಸರ್ವೆ ನಂಬರ್‌ನಲ್ಲಿರುವ > ೨ ಜಮೀನುಗಳನ್ನು ಪ್ರತ್ಯೇಕವಾಗಿ ಪೋಡುಗಳನ್ನಾಗಿ ಮಾಡಿಕೊಡಬೇಕು ಎಂಬುದೂ ಸೇರಿದಂತೆ ಹಲವುಬೇಡಿಕೆಗಳನ್ನು ಶಾಸಕರ ಮುಂದಿಟ್ಟರು. ಇದಕ್ಕೆ ಸ್ಪಂದಿಸಿದ ಶಾಸಕರು ಸಮಸ್ಯೆಗಳನ್ನು ಬಗೆಹರಿಸಲು ಬದ್ಧನಾಗಿದ್ದು, ಹೆಚ್ಚಿನ ಅನುದಾನ ತಂದು ರಸ್ತೆ ಅಭಿವೃದ್ಧಿ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಇದೇ ಸಮಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವ ಅಧ್ಯಕ್ಷ ರಾಜೇಂದ್ರ, ಜಿಲ್ಲಾಧ್ಯಕ್ಷ ಶಾಂತಮಲ್ಲಪ್ಪ, ಪ್ರಧಾನ ಕಾರ್ಯದರ್ಶಿ ಭಾಸ್ಕ‌ರ್, ಹನೂರು ತಾಲೂಕು ರೈತ ಸಂಘದ ಅಧ್ಯಕ್ಷ ಅಮ್ಜಾದ್ ಖಾನ್‌, ಉಪಾಧ್ಯಕ್ಷ ಪಳನಿ ಸ್ವಾಮಿ, ರೈತ ಮುಖಂಡರುಗಳಾದ ಶೈಲೇಂದ್ರ, ಕಾಂಚಳ್ಳಿ ಬಸವರಾಜು, ಶಕ್ತಿವೇಲು, ಕಾಚಿಗೌಡ ಹಾಗೂ ಪದಾಧಿಕಾರಿಗಳು ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

11 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

11 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

11 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

11 hours ago