ಕಲ್ಯಾಣಸಿರಿ ವಿಶೇಷ

ಕೂಡಲ ಸಂಗಮದಲ್ಲಿ ಲಿಂಗಾಯತ ಧರ್ಮ ಪೀಠಸ್ಥಾಪನೆಯಾಗಬೇಕು – ಚನ್ನಬಸವಾನಂದ ಶ್ರೀಗಳು.

Lingayat Dharma should be enthroned in Kudala Sangam – Channabasavananda Sri.

ಕೂಡಲ ಸಂಗಮ ಜನೇವರಿ.15:

ವಿಶ್ವಗುರು ಬಸವಣ್ಣನವರ ಐಕ್ಯ ಕ್ಷೇತ್ರ ಕೂಡಲ ಸಂಗಮದಲ್ಲಿ ಲಿಂಗಾಯತ ಧರ್ಮ ಪೀಠ ಸ್ಥಾಪನೆಯಾಗಬೇಕು ಎಂದು ಸ್ವಾಭಿಮಾನಿ ಶರಣ ಮೇಳದ ಉತ್ಸವ ಸಮಿತಿ ಅಧ್ಯಕ್ಷ ಜಗದ್ಗುರು ಡಾ. ಚನ್ನಬಸವಾನಂದ ಸ್ವಾಮೀಜಿ ಹೇಳಿದರು.ಹುನಗುಂದ ತಾಲೂಕಿನ ಹೂವನೂರ ಗ್ರಾಮದ ಹೊರ ವಲಯದಲ್ಲಿ ನಡೆಯುತ್ತಿರುವ ದ್ವಿತೀಯ ಸ್ವಾಭಿಮಾನಿ ಶರಣ ಮೇಳದಲ್ಲಿ ನೇತೃತ್ವ ವಹಿಸಿ ಮಾತನಾಡಿದ ಅವರು ವಿಶ್ವಗುರು ಬಸವಣ್ಣನವರು ೧೧೫೫ರ ಜನೇವರಿ ೧೪ ರಂದು ಇಷ್ಟಲಿಂಗ ಕಂಡು ಹಿಡಿದರು. ಅಂದೇ ಪರಮಾತ್ಮನ ಸಾಕ್ಷಾತ್ಕಾರವಾಯಿತು.

ಪೂಜ್ಯ ಮಾತೆ ಮಹಾದೇವಿ ಅವರು ೧೯೮೮ ರಿಂದ ಸುಮಾರು ೩೫ ವರ್ಷಗಳ ಕಾಲ ಲಿಂಗಾಯತ ಧರ್ಮ ಸಂಸ್ಥಾಪನಾ ದಿನಾಚರಣೆ ಮತ್ತು ವಚನ ಪಠಣ,ಸಮುದಾಯ ಪ್ರಾರ್ಥನೆ ಮಾಡಿಕೊಂಡು ಬಂದಿದ್ದಾರೆ. ಕೂಡಲ ಸಂಗಮವು ವ್ಯಾಟಿಕನ್ ಸಿಟಿಯಂತೆ ಪವಿತ್ರ ಸ್ವತಂತ್ರ ಧರ್ಮ ಕ್ಷೇತ್ರವಾಗಿ ಹೊರ ಹೊಮ್ಮಬೇಕು.ಕೂಡಲ ಸಂಗಮ ಮತ್ತು ಬಸವಕಲ್ಯಾಣ ರಾಜಧಾನಿ ಯಾಗಬೇಕು. ಏಕೆಂದರೆ ಬಸವೇಶ್ವರರು ಪ್ರಧಾನ ಮಂತ್ರಿಯಾಗಿದ್ದರು.

ಭಾರತದಲ್ಲಿ ಹುಟ್ಟಿದ ಜೈನ ಬೌದ್ಧ ಇಸ್ಲಾಂ ಸಿಖ್ ಧರ್ಮಗಳು ಸ್ವತಂತ್ರ ಧರ್ಮದ ಮಾನ್ಯತೆ ಪಡೆದಿವೆ, ಆದರೆ ಲಿಂಗಾಯತ ಧರ್ಮ ಇವುಗಳಿಗಿಂತ ಮೊದಲೇ ಬಸವೇಶ್ವರರಿಂದ ಜನಿಸಿದರೂ ಐಕ್ಯತೆಯ ಕೊರತೆಯಿಂದ ಸ್ವತಂತ್ರ ಧರ್ಮದ ಮಾನ್ಯತೆ ದೊರೆಯದಿರುವುದು ವಿಷಾದನೀಯ ಎಂದು ಕಳವಳ ವ್ಯಕ್ತಪಡಿಸಿದರು. ನಮ್ಮವರೇ ನಮ್ಮನ್ನು ಅಪ್ಪಿ ಕೊಳ್ಳದಿರುವುದು ಮಾನ್ಯತೆಗೆ ಹಿನ್ನಡೆಯಾಗುತ್ತಿದೆ. ಹೀಗಾಗಿ ಪ್ರತಿ ವರ್ಷ ಧರ್ಮಕ್ಷೇತ್ರ ಕೂಡಲ ಸಂಗಮವನ್ನು ಸಂದರ್ಶಿಸಿ, ಬಸವಣ್ಣನವರನ್ನು ಧರ್ಮಗುರು ಎಂದು ಒಪ್ಪಿಕೊಂಡು ಧಾರ್ಮಿಕ ಅನುಯಾಯಿತ್ವವನ್ನು ಸ್ವೀಕರಿಸಿ ಕೊಳ್ಳಬೇಕು ಎಂದು ಚನ್ನಬಸವಾನಂದ ಶ್ರೀಗಳು ಪ್ರತಿಪಾದಿಸಿದರು.ಶರಣ ಮೇಳಕ್ಕಾಗಿ ಸ್ಥಳಾವಕಾಶ ನೀಡಿದ ದಲಿತ ಮುಖಂಡರಾದ ಹನುಮಂತ ಹೂವನೂರು ಬಸವ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಎಲ್ಲಾ ಜಂಗಮ ಮೂರ್ತಿಗಳು ನೆರವೇರಿಸಿದರು. ಪೂಜ್ಯ ಶ್ರೀ ಸದ್ಗುರು ಮಾತೆ ಸತ್ಯಾದೇವಿ ಸಮುದಾಯ ಪ್ರಾರ್ಥನೆ ನೆರವೇರಿಸಿದರು. ವಿಶೇಷವಾಗಿ ೧೦೮ ವಚನ ಪಠಣ ಸ್ವಾಭಿಮಾನಿ ಶರಣ ಮೇಳದಲ್ಲಿ  ಪಠಿಸಲಾಯಿತು. ವೇದಿಕೆ ಮೇಲೆ ಸದ್ಗುರು ಪ್ರಭುಲಿಂಗ ಸ್ವಾಮೀಜಿ, ಅಕ್ಕನಾಗಲಾಂಬಿಕಾ ಮಾತಾಜಿ,ಶಾಂತಾದೇವಿ ಮಾತಾಜಿ, ಗುರುಸ್ವಾಮಿ,ವೀರಣ್ಣ ಲಿಂಗಾಯತ ಕೊಪ್ಪಳ,ಅಶೋಕ ಬೆಂಡಿಗೇರಿ ಬೆಳಗಾವಿ,  ದಿಲೀಪ ವಂದಲ್ ಗಂಗಾವತಿ,ಜಗದೇವಿ ಚಟ್ಟಿ ಕಲಬುರಗಿ, ಅಶೋಕ ಮಾನೂರೆ ವಕೀಲರು ಬೀದರ, ಸಚ್ಚಿದಾನಂದ ಚಟನಳ್ಳಿ ಶರಣ ಸಾಹಿತಿ ಬೆಂಗಳೂರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತೆಲಂಗಾಣ ಅಕ್ಕನಾಗಲಾಂಬಿಕಾ ಮಹಿಳಾ ಗಣದ ರಾಜ್ಯಾಧ್ಯಕ್ಷೆ ಶ್ರೀದೇವಿ ಪಾಟೀಲ ಸ್ವಾಗತಿಸಿದರು. ಅಶೋಕ ಬೆಂಡಿಗೇರಿ ನಿರೂಪಿಸಿದರು. ಬಸವಕುಮಾರ ಚಟನಳ್ಳಿ ಬೀದರ ವಂದಿಸಿದರು.

– ಐದು ನಿರ್ಣಯಗಳು-ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿಬೇಕು,ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರಕ್ಕೆ ಮರು ಪ್ರಸ್ತಾವಣೆ ಸಲ್ಲಿಸಬೇಕು,ಕೂಡಲ ಸಂಗಮ ಬಸವಣ್ಣನವರ ಐಕ್ಯ ಸ್ಥಳ ಸಂದರ್ಶನಕ್ಕೆ ಉಚಿತ ಪ್ರವೇಶ ನೀಡುವುದು ಮತ್ತು ಐಕ್ಯ ಸ್ಥಳದಲ್ಲಿ ಬಸವಣ್ಣನವರ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು,ಬಸವ ಕಲ್ಯಾಣದಿಂದ ಮಲೇಮಹಾದೇಶ್ವರ ಬೆಟ್ಟದವರಗೆ ಲಿಂಗಾಯತ ಧರ್ಮ ಜನಜಾಗೃತಿ ಅಭಿಯಾನ ನಡೆಯಬೇಕು.

ವರದಿಗಾರರು: ಮಲ್ಲಿಕಾರ್ಜುನ.ಎಂ.ಬಂಡರಗಲ್ಲ. ಹುನಗುಂದ

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

22 minutes ago

ಹುಂಡಿಗೆ ಬಿತ್ತು ಭಕ್ತನ iPhone! ಅಯ್ಯೋ ಹುಂಡಿಗೆ ಬಿದ್ಮೇಲೆ ಮುಗೀತು

Devotee's iPhone fell into his pocket! Alas, it ended after falling into his pocket. ಹುಂಡಿಗೆ…

28 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

20 hours ago