Breaking News

ಕಳಕಪ್ಪ ತಳವಾರರಿಗೆ ರಾಷ್ಟ್ರೀಯ ಕಲಾ ರತ್ನ ಪ್ರಶಸ್ತಿಗೆ ಆಯ್ಕೆ

Kalakappa Talwar selected for National Art Ratna Award

ಜಾಹೀರಾತು
Screenshot 2024 01 20 20 44 04 08 6012fa4d4ddec268fc5c7112cbb265e7 209x300

ಯಲಬುರ್ಗಾ:ರಂಗಭೂಮಿ ಕಲಾವಿದರು.ಗಾಯಕರು,ಪಪಂ ಸದಸ್ಯರಾದ ಕಳಕಪ್ಪ ತಳವಾರ ಅವರಿಗೆ ಪ್ರಸಕ್ತ ಸಾಲಿನ ರಾಷ್ಟ್ರೀಯ ಕಲಾ ರತ್ನ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.ರಂಗಭೂಮಿ ಕಲಾವಿದರಾಗಿ,ಗಾಯಕರಾಗಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ.ಹಲವಾರು ಕಡೆಗಳಲ್ಲಿ ಸಂಗೀತ ಸಂಜೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಕಂಚಿನ ಕಂಠದಿಂದ ಮ ನಸೂರೆಗೊಂಡಿದ್ದಾರೆ.ಅಲ್ಲದೇ ಜ್ಯೂನಿಯರ್ ಶಂಕರನಾಗ ಎಂದೇ ಖ್ಯಾತಿ ಪಡೆದಿರುವ ಕಳಕಪ್ಪ ತಳವಾರ,ಪಪಂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಈಗ ಹಾಲಿ ಸದಸ್ಯರಾಗಿ ಕಾರ್ಯನಿರ್ವಹಿಸಿ, ಸಾಮಾಜಿಕ,ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ.ಇವರ ಕ್ರೀಯಾಶೀಲತೆಯನ್ನು ಗುರ್ತಿಸಿ,ಧಾರವಾಡ ಜಿಲ್ಲೆಯ ಕುಂದಗೊಳದ ಚಿರಾಯು ಆಸೋಶಿಯೇಶನ್(ರಿ) ಕ ರ್ನಾಟಕ ಇವರು ಗಣರಾಜ್ಯೋತ್ಸವ ಅಂಗವಾಗಿ ಕೊಡಮಾಡುವ ರಾಷ್ಟ್ರೀಯ ಕಲಾ ರತ್ನ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.ಇದೇ ಜ.28 ರಂದು ಹುಬ್ಬಳ್ಳಿಯಲ್ಲಿ ನಡೆಯುವ ಪ್ರಶಸ್ತಿ ವಿತರಣ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದೆಂದು ಚಿರಾಯು ಅಸೋಶಿಯೇಶನ್(ರಿ) ಕರ್ನಾಟಕ ಅಧ್ಯಕ್ಷ ಡಾ.ಮಂಜುನಾಥ ಶಿವಕ್ಕನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.