Breaking News

ಕಳಕಪ್ಪ ತಳವಾರರಿಗೆ ರಾಷ್ಟ್ರೀಯ ಕಲಾ ರತ್ನ ಪ್ರಶಸ್ತಿಗೆ ಆಯ್ಕೆ

Kalakappa Talwar selected for National Art Ratna Award

ಯಲಬುರ್ಗಾ:ರಂಗಭೂಮಿ ಕಲಾವಿದರು.ಗಾಯಕರು,ಪಪಂ ಸದಸ್ಯರಾದ ಕಳಕಪ್ಪ ತಳವಾರ ಅವರಿಗೆ ಪ್ರಸಕ್ತ ಸಾಲಿನ ರಾಷ್ಟ್ರೀಯ ಕಲಾ ರತ್ನ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.ರಂಗಭೂಮಿ ಕಲಾವಿದರಾಗಿ,ಗಾಯಕರಾಗಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ.ಹಲವಾರು ಕಡೆಗಳಲ್ಲಿ ಸಂಗೀತ ಸಂಜೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಕಂಚಿನ ಕಂಠದಿಂದ ಮ ನಸೂರೆಗೊಂಡಿದ್ದಾರೆ.ಅಲ್ಲದೇ ಜ್ಯೂನಿಯರ್ ಶಂಕರನಾಗ ಎಂದೇ ಖ್ಯಾತಿ ಪಡೆದಿರುವ ಕಳಕಪ್ಪ ತಳವಾರ,ಪಪಂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಈಗ ಹಾಲಿ ಸದಸ್ಯರಾಗಿ ಕಾರ್ಯನಿರ್ವಹಿಸಿ, ಸಾಮಾಜಿಕ,ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ.ಇವರ ಕ್ರೀಯಾಶೀಲತೆಯನ್ನು ಗುರ್ತಿಸಿ,ಧಾರವಾಡ ಜಿಲ್ಲೆಯ ಕುಂದಗೊಳದ ಚಿರಾಯು ಆಸೋಶಿಯೇಶನ್(ರಿ) ಕ ರ್ನಾಟಕ ಇವರು ಗಣರಾಜ್ಯೋತ್ಸವ ಅಂಗವಾಗಿ ಕೊಡಮಾಡುವ ರಾಷ್ಟ್ರೀಯ ಕಲಾ ರತ್ನ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.ಇದೇ ಜ.28 ರಂದು ಹುಬ್ಬಳ್ಳಿಯಲ್ಲಿ ನಡೆಯುವ ಪ್ರಶಸ್ತಿ ವಿತರಣ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದೆಂದು ಚಿರಾಯು ಅಸೋಶಿಯೇಶನ್(ರಿ) ಕರ್ನಾಟಕ ಅಧ್ಯಕ್ಷ ಡಾ.ಮಂಜುನಾಥ ಶಿವಕ್ಕನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ರಾಷ್ಟ್ರೀಯ ಪಕ್ಷ ಬಿಎಸ್ಪಿಗೆ ಅವಕಾಶನೀಡಿ:ಎಂ.ಕೃಷ್ಣಮೂರ್ತಿ

ಕೊಪ್ಪಳ.ಮೇ.04: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷಕ್ಕೆ ಬುದ್ಧಿ ಕಲಿಸಿ ಬಿಎಸ್ ಪಿ ಪಕ್ಷವನ್ನು ಬೆಂಬಲಿಸುವಂತೆ ಬಹುಜನ ಸಮಾಜ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.