Breaking News

ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ,ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ಶ್ರೀ ಮಲೆ ಮಹದೇಶ್ವರ ಬೆಟ್ಟದಿಂದ ಚಾಮರಾಜನಗರದವರಗೆ ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

Collectively led Karnataka State Farmers Association and Green Army, on behalf of Chamarajanagar district unit, launched a massive farmers’ walk from Sri Male Mahadeshwar Hill to Chamarajanagar.

ಜಾಹೀರಾತು
Screenshot 2024 01 23 10 52 49 49 6012fa4d4ddec268fc5c7112cbb265e72 300x150

ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ, ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ಶ್ರೀ ಮಲೆ ಮಹದೇಶ್ವರ ಬೆಟ್ಟದಿಂದ ಚಾಮರಾಜನಗರದವರಗೆ ರೈತರ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಲಾಯಿತು.
ಜಿಲ್ಲೆಯ ರೈತರ ವಿವಿಧ ಸಮಸ್ಯೆಗಳನ್ನು ಮತ್ತು ಇತರೆ ಬೇಡಿಕೆಗಳನ್ನು (ಪಟ್ಟಿ ಲಗತ್ತಿಸಿದೆ) ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘ & ಹಸಿರು ಸೇನೆಯ ಚಾಮರಾಜನಗರ ಜಿಲ್ಲಾ ಘಟಕ ಅಧ್ಯಕ್ಷರಾದ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ ಪಾದಯಾತ್ರೆಗೆ ಸಾಲೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಯವರು ಚಾಲನೆ ನೀಡಿದ್ದರು.
ಪಾದಯಾತ್ರೆಯಲ್ಲಿ ಹಿರಿಯ ರೈತ ಹೋರಾಟಗಾರರದ ಕೆ ಟಿ ಗಂಗಾಧರ, ತುಮಕೂರಿನ ಗಾಂಧೀಜಿ ಸಹಜ ಬೇಸಾಯ ಶಾಲೆಯ ವಿಜ್ಞಾನಿ ಡಾ|| ಮಂಜುನಾಥ, ಹನೂರು ತಾಲೂಕಿನ ರೈತ ಸಂಘದ ಅಧ್ಯಕ್ಷರಾದ ಚಂಗಡಿ ಕರಿಯಪ್ಪ, ಮೈಸೂರು ಘಟಕದ ವಿದ್ಯಾಸಾಗರ ಮತ್ತು ತಂಡದವರು, ಕೊಳ್ಳೇಗಾಲ ಜೆ ಎಸ್ ಬಿ ಪ್ರತಿಷ್ಠಾನದ ಶಶಿಕುಮಾರ, ಸತ್ತೇಗಾಲದ ಪ್ರಗತಿಪರ ಕೃಷಿಕ ಮತ್ತು ಚಿಂತಕ ಪ್ರಶಾಂತ ಜಯರಾಂ, ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಹಾಡಿ ಮತ್ತು ಗ್ರಾಮದ ರೈತರು ಹಾಗು ಜಿಲ್ಲೆಯ ಗುಂಡ್ಲುಪೇಟೆ, ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ ಮತ್ತು ಹನೂರು ತಾಲೂಕುಗಳ ವಿವಿಧ ಗ್ರಾಮಗಳಿಂದ ನೂರಾರು ರೈತರು ಆಗಮಿಸಿ, ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ..

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.