Establishment of Karnataka State Farmers’ Association at Antoniyar Kovil village
ವರದಿ : ಬಂಗಾರಪ್ಪ ಸಿ ಹನೂರು .
ಹನೂರು : ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂತೋನಿಯರ್ ಕೋವಿಲ್ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಸ್ಥಾಪನೆ ಯಾಯಿತ್ತು.
ಅಂತೋನಿಯರ್ ಕೋವಿಲ್ ಗ್ರಾಮದಲ್ಲಿ ನೀರು ಹಾಕುವ ಮೂಲಕ ಉದ್ಘಾಟನೆ ಮಾಡಲಾಯಿತು. ಹೊಸದಾಗಿ ಸ್ಥಾಪನೆಯಾದ ಸಂಘದ ಸದಸ್ಯತ್ವ ಪಡೆದ ಸದಸ್ಯರಿಗೆ ಹಸಿರು ಸಾಲು ಹಾಕಿ ಸಂಘಕ್ಕೆ ಬರಮಾಡಿಕೊಂಡರು.
ಅಂತೋನಿಯರ್ ಕೋವಿಲ್ ಗ್ರಾಮದ ಘಟಕದ ರೈತ ಸಂಘದ ಅಧ್ಯಕ್ಷರಾಗಿ ಪೀಟರ್ ಪೆರಿಯ ನಾಯಗಂ, ಉಪಾಧ್ಯಕ್ಷರಾಗಿ ಧರ್ಮರಾಜ್, ಅಂತೋನಿಯಮ್ಮ, ಲಿಲ್ಲಿ ಪುಷ್ಪ, ಪ್ರೇಮ, ಮದಲೈಯಮ್ಮ, ಆಯ್ಕೆ ಮಾಡಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘದ ಹನೂರು ತಾಲೂಕ್ ಘಟಕ ಅಧ್ಯಕ್ಷ ಗಂಗನದೊಡ್ಡಿ ಅಮ್ಜದ್ ಖಾನ್ ಮಾತನಾಡಿ ಹೊಸದಾಗಿ ಸ್ಥಾಪನೆಯಾದ ರೈತ ಸಂಘದ ಸದಸ್ಯತ್ವ ಪಡೆದ ಸದಸ್ಯರೆಲ್ಲರೂ ಒಗ್ಗಟಿನಿಂದ ಇರಬೇಕು, ಸರ್ಕಾರದಿಂದ ರೈತರಿಗೆ ಸಿಗುವ ಸೌಲಭ್ಯಗಳನ್ನು ರೈತ ಫಲಾನುಭವಿಗಳಿಗೆ ದೊರಕುವಂತೆ ಮಾಡಬೇಕು, ಸಂಘದ ಸದಸ್ಯರು ಭ್ರಷ್ಟಾಚಾರ ಮತ್ತು ಅಮಿಷಗಳಿಗೆ ಒಳಗಾಗದೆ ಸದಸ್ಯರು ಸಂಘದ ಏಳಿಗೆಗಾಗಿ ನಿಷ್ಠೆಯಿಂದ ಹಾಗೂ ಒಮ್ಮತದಿಂದ ಇರಬೇಕು ಎಂದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷರಾದ ಗೌಡೇಗೌಡ,ಲೋಕೇಶ್ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಸ್ಕರ್.ಸಿ, ತಾಲೂಕು ಗೌರವಾಧ್ಯಕ್ಷ ರಾಜಣ್ಣ, ತಾಲೂಕು ಉಪಾಧ್ಯಕ್ಷ ಪಳನಿಸ್ವಾಮಿ, ಮಾರ್ಟಳ್ಳಿ ಘಟಕದ ಅಧ್ಯಕ್ಷ ಸೂಸೈ ಮಾಣಿಕ್ಯ0,ಅರ್ಪದರಾಜ್, ಅಂತೋನಿ ಸ್ವಾಮಿ, ಸಂತಿಯಾಗ್, ವೆಟ್ಟು ಕಾಡು ಮಹಿಳಾ ಘಟಕ ಅಧ್ಯಕ್ಷ ಸೂಸೈಯಮ್ಮ, ಹಾಗೂ ಇನ್ನಿತರರು ಹಾಜರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…