Girl’s Day Celebration at Virupapura Government School
ಗಂಗಾವತಿ,ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ವಿರುಪಾಪುರ ತಾಂಡಾದ ಸರ್ಕಾರಿ ಶಾಲೆಯಲ್ಲಿ ಆರೋಗ್ಯ ಮತ್ತು ಕ್ಷಯ ರೋಗ ಜಾಗೃತಿ
ಹೆಣ್ಣು ಬಾಳಿನ ಕಣ್ಣು ಎನ್ನುವಂತೆ ಸಮಾಜದ ಸದೃಢವಾಗಿ ನಿಲ್ಲಬೇಕಾದರೆ ತಾಯಿಯ ಅವಶ್ಯಕತೆ ತುಂಬಾ ಮುಖ್ಯ ಆದ್ದರಿಂದ ಇಂದು ವಿರುಪಾಪುರ ಸರ್ಕಾರಿ ಶಾಲೆಯಲ್ಲಿ ಹೆಣ್ಣು ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಮಕ್ಕಳಿಗೆ ಸಿಹಿ ತಿನಿಸುವ ಮುಖಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕ್ಷಯರೋಗ ವಿಭಾಗ ಕೊಪ್ಪಳ ಉಪ ವಿಭಾಗ ಆಸ್ಪತ್ರೆ ಮತ್ತು ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿ ಗಂಗಾವತಿ ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಆರೋಗ್ಯ ಸಮರ್ಧನ ಸಂಸ್ಥೆ ಇವರ ಸಯುಕ್ತ ಆಶ್ರಯದಲ್ಲಿ ಆಚರಿಸಲಾಯಿತು, ಕಾರ್ಯಕ್ರಮದಲ್ಲಿ ಕ್ಷಯ ರೋಗ ಆರೋಗ್ಯ ಪರಿವೀಕ್ಷಕ ಎಚ್ ಮಲ್ಲಿಕಾರ್ಜುನಗೌಡ ಇವರು ಮಾತನಾಡುತ್ತಾ ಆರೋಗ್ಯವೇ ಭಾಗ್ಯ ವಿಶೇಷವಾಗಿ ಮಹಿಳೆಯರಲ್ಲಿ ಆರೋಗ್ಯ ರಕ್ಷಿಸಿಕೊಳ್ಳುವುದು ತುಂಬಾ ಮುಖ್ಯ ಅದರಲ್ಲೂ ಸಾಂಕ್ರಾಮಿಕ ರೋಗಗಳಿಂದ ರಕ್ಷಣೆಯನ್ನು ಪಡೆದು ಆರೋಗ್ಯವಾಗಿರುವುದು ಬಹು ಮುಖ್ಯವಾಗಿರುತ್ತದೆ ಮಕ್ಕಳು ಶಿಶು ಅವಧಿಯಿಂದ, ಬಾಲ್ಯ, ಕಿಶೋರಿ , ಅಂತಂತವಾಗಿ ಆರೋಗ್ಯವನ್ನು ರಕ್ಷಿಸಿಕೊಳ್ಳುವುದು ಪ್ರಾಮುಖ್ಯವಾಗಿರುತ್ತದೆ ಪ್ರತಿ ಅವಧಿಯಲ್ಲಿ ದೇಹದಲಾಗುವ ಬದಲಾವಣೆ ಮತ್ತು ಸಾಮಾಜಿಕ ಬದಲಾವಣೆಗೆ ಮಹಿಳೆಯು ಒಳಪಡುತ್ತಾಳೆ ಸಾಂಕ್ರಾಮಿಕ ರೋಗಕ್ಕೆ ಬಂದರೆ ವಿಶೇಷವಾಗಿ ಕ್ಷಯ ರೋಗಕ್ಕೆ ಪ್ರತಿ ವರ್ಷ ತುಂಬಾ ಮಹಿಳೆಯರು ತುತ್ತಾಗುತ್ತಿದ್ದು ಈ ಶೇರೋಗದ ತೀವ್ರತೆ ಮತ್ತು ಸಮಾಜಮುಖಿ ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಸುಮಾರು ಹತ್ತು ಸಾವಿರಕ್ಕಿಂತ ಹೆಚ್ಚು ಮಹಿಳೆಯರು ಮನೆಯಿಂದ ಹೊರಡುಲ್ಪಡುತ್ತಾರೆ ಕಾರಣ ಸಮಾಜದಿಂದ ಈ ದುಷ್ಟ ಕ್ಷಯ ರೋಗವನ್ನು ದೂರ ಮಾಡಬೇಕಾದ ಜವಾಬ್ದಾರಿ ಪ್ರತಿಯೊಬ್ಬ ತಾಯಿ ಮತ್ತು ನಮ್ಮೆಲ್ಲರ ಮೇಲೆ ಇದೆ ಎಂದು ತಿಳಿಸಿದರು ಕಾರ್ಯಕ್ರಮದಲ್ಲಿ ರಾಮಪ್ಪ, ಮಂಜುನಾಥ,ಶ್ರೀ ದೇವಿ, ಅಶ್ವಿನಿ, ಕುಮಾರಿ ಕಾಶೀಂಬಿ ಹನುಮಂತಪ್ಪ ಇವರು ಭಾಗವಹಿಸಿದ್ದರು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…