Breaking News

ರುದ್ರಮ್ಮ ಹಾಸಿನಾಳ ಅವರ ಎರಡುಕೃತಿಗಳಲೋಕಾರ್ಪಣೆ

Presentation of two works by Rudramma Hasina

ಗಂಗಾವತಿ, ೨೮:ಹಿರಿಯ ಮಹಿಳಾ ಸಾಹಿತಿ ರುದ್ರಮ್ಮ ಹಾಸಿನಾಳ ಅವರು ಬರೆದಿರುವ ವಚನ ಹೊಳವು ಹಾಗೂ ಬೆಳಗಿನೊಳಗೆ ಮಹಾಬೆಳಗು ಎಂಬ ಎರೆಉ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ (ಜ.೨೮) ನೆರವೇರಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗಂಗಾವತಿ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ ಅಂಗಡಿ ತಿಳಿಸಿದ್ದಾರೆ.

ನಗರದ ಸಿದ್ದಿಕೇರಿ ರಸ್ತೆಯಲ್ಲಿರುವ ಶ್ರೀನಗರದ ರುದ್ರಮ್ಮ ಅಮರೇಶಪ್ಪ ಹಾಸಿನಾಳ ಅವರ ನಿವಾಸದಲ್ಲಿ ಬೆಳಗ್ಗೆ ಹನ್ನೊಂದು ಗಂಟೆಗೆ ಹುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಿರುಗುಪ್ಪಾದ ಹಿರಿಯ ಸಾಹಿತಿ ಸರ್ವಮಂಗಳಾ ವಿರೂಪಾಕ್ಷಗೌಡ ಕೃತಿ ಬಿಡುಗಡೆ ಮಾಡುವರು.

ಸಾಹಿತಿ, ಸಂಶೋಧಕ ಡಾ. ಶರಣಬಸಪ್ಪ ಕೊಲ್ಕಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಸಾಪ ಜಿಲ್ಲಾ ಅಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್ ಅಧ್ಯಕ್ಷತೆ ವಹಿಸುವರು, ಡಾ. ಅಮರೇಶ ಪಾಟೀಲ್, ಡಾ. ಶಿವಕುಮಾರ ಮಾಲಿಪಾಟೀಲ್, ಜಗದೇವಿಕಳಶೆಟ್ಟಿ, ಯಂಕಪ್ಪ ಕಟ್ಟಿಮನಿ ಇತರರು ಭಾಗಿಯಾಗಲಿದ್ದಾರೆ ಎಂದು ಅಂಗಡಿ ತಿಳಿಸಿದ್ದಾರೆ.

About Mallikarjun

Check Also

ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು : ಡಾ.ಲಿಂಗರಾಜ್‌ಸರ್ಕಾರಿ ಉಪವಿಭಾಗಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ

ಗಂಗಾವತಿ,14:ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು, ಅವರಿಗೆ ಗೌರವ ಸಲ್ಲಿಸಲೆಂದೇ ಪ್ರತಿ ವರ್ಷ ಮೇ.12 ರಂದು ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನವನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.