ಕಲ್ಯಾಣಸಿರಿ ವಿಶೇಷ

ಶ್ರೀ ವಿದ್ಯಾನಿಕೇತನ ಪದವಿಮಹಾವಿದ್ಯಾಲಯದಲ್ಲಿ ಇವಿಎಂ/ವಿವಿಪ್ಯಾಟ್ ಪ್ರಾತ್ಯಕ್ಷಿಕೆ

Demonstration of EVM/VVPAT at Sri Vidyaniketan Graduate College

ಮೊದಲ ಬಾರಿಗೆ ಮತ ಹಾಕಿ ಖುಷಿಪಟ್ಟ ಹೊಸ ಮತದಾರರು

ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಮದ ಶ್ರೀ ವಿದ್ಯಾನಿಕೇತನ ಪದವಿ ಮಹಾವಿದ್ಯಾಲಯದಲ್ಲಿ ತಾಲೂಕು ಸ್ವೀಪ್ ಸಮಿತಿ ಹಾಗೂ ಗ್ರಾ.ಪಂ.ಯಿಂದ ಮಂಗಳವಾರ ಆಯೋಜಿಸಿದ್ದ ಮತದಾನ ಜಾಗೃತಿ ಹಾಗೂ ಇವಿಎಂ/ವಿವಿಪ್ಯಾಟ್ ಪ್ರಾತ್ಯಕ್ಷಿಕೆಯಲ್ಲಿ ಹೊಸ ಮತದಾರರು ಮೊದಲ ಬಾರಿಗೆ ಅಣಕು ಮತದಾನ ಮಾಡಿ ಖುಷಿ ಪಟ್ಟರು.

ಸೆಕ್ಟರ್ ಅಧಿಕಾರಿಗಳಾದ ಕಿರಣ್ ಕುಮಾರ್ ಅವರು ಮಾತನಾಡಿ, 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬೇಕು. ವೋಟರ್ ಹೆಲ್ಪ್ ಲೈನ್ ಆ್ಯಪ್ ನಲ್ಲಿ ಕೂಡ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ ಎಂದರು.
ನಂತರ ಇವಿಎಂ/ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಕುರಿತು ಮಾಹಿತಿ ನೀಡಿದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಅವರು ಮಾತನಾಡಿ, ಪ್ರತಿಯೊಬ್ಬರೂ ಮತದಾನದ ಹಕ್ಕನ್ನು ಜವಾಬ್ದಾರಿಯುತವಾಗಿ ನಿಭಾಯಿಸಬೇಕು. ಯಾವುದೇ ಆಸೆ, ಆಮಿಷಕ್ಕೆ ಬಲಿಯಾಗದೆ ಮತದಾನ ಮಾಡಬೇಕು. ಜೊತೆಗೆ ಯುವ ಸಮುದಾಯ ತಮ್ಮ ಕುಟುಂಬಸ್ಥರು ಹಾಗೂ ಗ್ರಾಮಸ್ಥರನ್ನು ಕಡ್ಡಾಯವಾಗಿ ಮತದಾನ ಮಾಡಿಸಲು ಪ್ರೇರೆಪಿಸಬೇಕು ಎಂದರು.

ವಡ್ಡರಹಟ್ಟಿ ಗ್ರಾಮದ ಬಸ್ ನಿಲ್ದಾಣ ಬಳಿಯೂ ಸಾವರ್ಜನಿಕರಿಗೆ ಮತದಾನ ಜಾಗೃತಿ ಮೂಡಿಸಿ, ಇವಿಎಂ/ವಿವಿಪ್ಯಾಟ್ ಪ್ರಾತ್ಯಕ್ಷಿಕೆ ನೀಡಲಾಯಿತು.

ತಾಲೂಕು ಸ್ವೀಪ್ ಸಮಿತಿಯ ಸಂತೋಷ ಎಂ., ಪ್ರಶಾಂತ ಬಾನಾಪುರ, ಬಾಳಪ್ಪ ತಾಳಕೇರಿ, ಗ್ರಾಪಂ ಕಾರ್ಯದರ್ಶಿಗಳಾದ ಈಶಪ್ಪ, ವಿದ್ಯಾನಿಕೇತನ ಪದವಿ ಮಹಾ ವಿದ್ಯಾಲಯ ಪ್ರಾಚಾರ್ಯರಾದ ಶ್ರೀ ಅಭಿಷೇಕ ಡಿ.ಎಂ., ಉಪನ್ಯಾಸರಾದ ಆನಂದ ಪುರೋಹಿತ್, ಗ್ರಾಪಂ ಉಪಾಧ್ಯಕ್ಷರು, ಸದಸ್ಯರು, ಗ್ರಾಪಂ ಸಿಬ್ಬಂದಿಗಳು ಇದ್ದರು.

ಬಸಾಪಟ್ಟಣ ಬಸ್ ನಿಲ್ದಾಣದಲ್ಲಿ ಮತದಾನ ಜಾಗೃತಿ
ಗಂಗಾವತಿ : ತಾಲೂಕಿನ ಬಸಾಪಟ್ಟಣ ಗ್ರಾಮದ ಬಸ್ ನಿಲ್ದಾಣ ಬಳಿ ಮತದಾನ ಜಾಗೃತಿ ಹಾಗೂ ಇವಿಎಂ/ವಿವಿಪ್ಯಾಟ್ ಪ್ರಾತ್ಯಕ್ಷಿಕೆ ನೀಡಲಾಯಿತು.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ವಿದ್ಯಾವತಿ ಅವರು, ಮತದಾನದ ಮಹತ್ವ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದರು.

ಗ್ರಾಪಂ ಅಧ್ಯಕ್ಷರಾದ ಆಂಜನೇಯ ಡಿ.ನಾಯಕ, ಪಿಡಿಓ ವಿದ್ಯಾವತಿ, ಕಾರ್ಯದರ್ಶಿ ನಾಗೇಶ, ಎಸ್ ಡಿಎ ಶ್ರೀನಿವಾಸ, ತಾಲೂಕು ಸ್ವೀಪ್ ಸಮಿತಿಯ ಸದಸ್ಯರು, ಗ್ರಾಪಂ ಸದಸ್ಯರು, ಸಿಬ್ಬಂದಿಗಳು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago