Breaking News

ಬಸಾಪಟ್ಟಣ: ವಿಕಲಚೇತನರ ಸಮನ್ವಯ ಗ್ರಾಮ ಸಭೆ

Basapatna: Coordinating Gram Sabha of the Handicapped

ಜಾಹೀರಾತು

ಗಂಗಾವತಿ: ವಿಕಲಚೇತನರಿಗೆ ಅನುಕೂಲಕ್ಕಾಗಿ ಸರಕಾರದ ವಿವಿಧ ಯೋಜನೆಗಳನ್ನು ಜಾರಿ ಮಾಡಿದ್ದು, ಯೋಜನೆ ಸದುಪಯೋಗ ಪಡೆದಕೊಳ್ಳಿ ಎಂದು ಗ್ರಾ.ಪಂ ಅಧ್ಯಕ್ಷ ಆಂಜನೇಯ ಹೇಳಿದರು.

ತಾಲೂಕಿನ ಬಸಾಪಟ್ಟಣ ಗ್ರಾಮ ಪಂಚಾಯತಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ವಿಕಲಚೇತನರಿಗೆ ಸರಕಾರದಿಂದ ಸಾಲ ಸೌಲಭ್ಯ, ಸಲರಣೆ ವಿತರಣೆ, ಬೈಕ್ ವಿತರಣೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಇದರ ಉಪಯೋಗವನ್ನು ಪಡೆದು ಸ್ವಾಲಂಬಿ ಜೀವನ ನಡೆಸಲು ಮುಂದಾಗಬೇಕು. ಅಂಗವಿಕಲರಿಗೆ ಯುಡಿಐಡಿ ಕಾರ್ಡ್ ಮಾಡಲು ಅನುಕೂಲ ಕಲ್ಪಿಸಿದ್ದು, ಇನ್ನೂ ಯಾರ ಯಾರ್ ಕಾರ್ಡ್ಗಳನ್ನು ಪಡೆದಿಲ್ಲ ಅವರಿಗೆ ವಿತರಣೆ ಮಾಡಲು ಮುಂದಾಗಬೇಕು. ಹಾಗೂ ಸರಕಾರದ ಸೌಲಭ್ಯಗಳನ್ನು ವಿಕಲಚೇತನರಿಗೆ ದೊರೆಕಿಸಿ ಕೊಡುವಲ್ಲಿ ಎಲ್ಲರೂ ಸಹಕರಿಸಬೇಕು ಎಂದರು. ನಂತರ ವಿಕಲಚೇತನರಿಗೆ ಕುಂದುಕೊರತೆಗಳ ಬಗ್ಗೆ ಚರ್ಚಿಸಿದರು.

ಈ ವೇಳೆ ಅಭಿವೃದ್ಧಿ ಅಧಿಕಾರಿ ವಿದ್ಯಾವತಿ, ಎಂ.ಆರ್.ಡಬ್ಲೂö್ಯ, ಮಂಜುಳಾ ಪುರಾಣಿಕ್, ವಿಕಲಚೇತನರ ಪಾಲಕರ ಒಕ್ಕೂಟದ ತಾಲೂಕಾ ಅಧ್ಯಕ್ಷ ಬಸವರಾಜ ಗೋನಾಳ, ಬಸಾಪಟ್ಟಣ ವಿ.ಆರ್.ಡಬ್ಲೂö್ಯ ಭಾಷಾ, ಗ್ರಾಮ ಪಂಚಾಯತಿ ಸದಸ್ಯರಾದ ಕನಕಪ್ಪ ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಇದ್ದರು.

About Mallikarjun

Check Also

ಕೆರೆ ಹೂಳೆತ್ತುವ ಕಾಮಗಾರಿ ಅಭಿವೃದ್ಧಿ ಅಧಿಕಾರಿಗಳಿಂದ ಪರಿಶೀಲನೆ

Development officials inspect lake dredging work ಕೂಲಿಕಾರರು ಮೇಜರ್ ಮೆಂಟ್ ಪ್ರಕಾರ ಕೆಲಸ ನಿರ್ವಹಿಸಲಿ,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲಿಕಾರ್ಜುನ …

Leave a Reply

Your email address will not be published. Required fields are marked *