ಕಲ್ಯಾಣಸಿರಿ ವಿಶೇಷ

ಕಾಡಾನೆ ದಾಳಿಗೆ ಬೆಳೆನಾಶ ರೈತ ನಷ್ಟದ ಸುಳಿಯಲ್ಲಿ

In the whirlwind of crop loss due to forest attack.


ವರದಿ : ಬಂಗಾರಪ್ಪ ಸಿ ಹನೂರು .
ಹನೂರು :ಇತ್ತೀಚಿನ ದಿನಗಳಲ್ಲಿ ಗ್ರಾಮಗಳಿಗೆ ಕಾಡನೆಗಳ ಹಾವಳಿಯು ಹೆಚ್ಚಿದ್ದು ಜೋಳದ ಫಸಲು ನಾಶವಾಗಿರುವ ಘಟನೆ ತಾಲೂಕಿನ ಮೈಸೂರಪ್ಪನ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಹನೂರು ತಾಲೂಕಿನ ಪಿ ಜಿ ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೈಸೂರಪ್ಪನ ದೊಡ್ಡಿ ಗ್ರಾಮದ ನಿವಾಸಿ ರಾಮಯ್ಯ ಬಿನ್ ರಾಮಯ್ಯ ಎಂಬವರಿಗೆ ಸೇರಿದ 85ಅರಬಗೆರೆ ಸರ್ವೇ ನಂ 405/3ರಲ್ಲಿ 86. ಸೆಂಟ್ ಹಾಗೂ ಸರ್ವೇ ನಂ 406/1ರಲ್ಲಿ 1.27ಎಕರೆ ಅಷ್ಟು ಜೋಳದ ಫಸಳನ್ನು ಬೆಳೆಯಲಾಗಿದ್ದು ತಡ ರಾತ್ರಿ ಕಾಡನೆ ಗಳು ಲಗ್ಗೆ ಇಟ್ಟು ಜೋಳದ ಫಸಲನ್ನು ತಿಂದು ನಾಶ ಪಡಿಸಿವೆ, ಫಸಲು ಕಟಾವು ಮಾಡುವ ಹಂತದಲ್ಲಿದ್ದು ಕೈಗೆ ಬಂದ ತುತ್ತು ಬಾಯಿಗೆ ಭಾರದಂತಾಗಿದೆ ಎಂದು ರೈತ ಕಂಗಲಾಗಿದ್ದಾರೆ, ಆದ್ದರಿಂದ ಸರಕಾರದಿಂದ ಸೂಕ್ತ ಪರಿಹಾರ ವನ್ನು ಒದಗಿಸಬೇಕೆಂದು ಒತ್ತಾಯ ಮಾಡಿದ್ದಾರೆ,

ಮೈಸೂರಪ್ಪನ ದೊಡ್ಡಿ ಗ್ರಾಮವೂ ಬಹುತೇಕ ಅರಣ್ಯದ ಅಂಚಿನಲ್ಲಿ ಇರುವುದರಿಂದ ಕಳೆದ 15ದಿನ ಗಳಿಂದಲೂ ಸಹ ಈ ಭಾಗದಲ್ಲಿ ರಾತ್ರಿಯ ವೇಳೆ ಕಾಡಾನೆ ಗಳು ಜಮೀನು ಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಪಡಿಸುತ್ತಿವೆ ಎಂದು ಸ್ಥಳೀಯರು ಅರಣ್ಯ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದರು,

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

15 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

15 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago