Breaking News

ರಾಜಶೇಖರ್ ಹಿಟ್ನಾಳಗೆ ವಾಲ್ಮೀಕಿಗುರುಪೀಠದಿಂದ ಸನ್ಮಾನ

Rajasekhar Hitna honored by Valmiki Gurupeeth

ಜಾಹೀರಾತು


ಕೊಪ್ಪಳ: ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ ಕೆ. ರಾಜಶೇಖರ್ ಹಿಟ್ನಾಳ ಅವರನ್ನು ಹರಿಹರ ತಾಲೂಕ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಜಾತ್ರೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ವಾಲ್ಮೀಕಿ ಗುರುಪೀಠದಲ್ಲಿ ಕಳೆದ ಆರು ರ್ವಗಳಿಮದ ಹಮ್ಮಿಕೊಂಡಿರುವ ವಾಲ್ಮೀಕಿ ಜಾತ್ರೆ ಬಹಳ ವಿಶೇಷ ಮನ್ನಣೆ ಪಡೆಯುತ್ತಿದ್ದು, ಅರ್ಧ ಕೋಟಿ ಇರುವ ವಾಲ್ಮೀಕಿ ಸಮಾಜದ ವಿಶೇಷ ಕಾರ್ಯಕ್ರಮವಾಗಿದೆ, ಫೆ. ೮ ಮತ್ತು ೯ ರಂದು ನಡೆಯುವ ಜಾತ್ರೆಯಲ್ಲಿ ಪಾಲ್ಗೊಂಡ ರಾಜಶೇಖರ್ ಹಿಟ್ನಾಳ ಅವರ ಬಗ್ಗೆ ಅಪಾರ ಪ್ರೀತಿ ಹೊಂದಿರುವ ವಾಲ್ಮೀಕಿ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳು ಸನ್ಮಾನಿಸಿ ಬರುವ ದಿನಗಳಲ್ಲಿ ವಾಲ್ಮೀಕಿಯ ಅನುಗ್ರಹವಾಗಲಿ ಎಂದು ಶುಭ ಕೋರಿದರು.
ಈ ವೇಳೆ ಮಠದ ಬೃಹತ್ ಯಾಂತ್ರಿಕ ಮಾನವರಹಿತ ಚಾಲನೆಗೊಳ್ಳುವ ದೇಶದ ಏಕೈಕ ಎನ್ನಲಾದ ತೇರು ಮತ್ತು ಮಠವನ್ನು ನೋಡಿ ಸಂತಸವ್ಯಕ್ತಪಡಿಸಿದ ರಾಜಶೇಖರ್ ಅವರು ಕಾಣಿಕೆ ಸಲ್ಲಿಸಿ ಅಲ್ಲಿಯೇ ಸಾಮಾನ್ಯರೊಂದಿಗೆ ಪ್ರಸಾದ ಸ್ವೀಕರಿಸಿದರು.
ಜಿಲ್ಲೆಯಿಂದ ಜಾತ್ರೆಯಲ್ಲಿ ಅಥಿತಿಗಳಾಗಿ ಪಾಲ್ಗೊಂಡಿದ್ದ ಸಮಾಜದ ಜಿಲ್ಲಾಧ್ಯಕ್ಷ ಟಿ.ರರತ್ನಾಕರ, ಧರ್ಮದರ್ಶಿ ರಾಮಣ್ಣ ಕಲ್ಲನವರ, ಯುವ ಮುಖಂಡ ಪತ್ರಕರ್ತ ಮಂಜುನಾಥ ಜಿ. ಗೊಂಡಬಾಳ, ಜಿ. ಪಂ. ಮಾಜಿ ಸದಸ್ಯ ರಾಮಣ್ಣ ಚೌಡಕಿ, ಮುಖಂಡರುಗಳಾದ ಶಿವಮೂರ್ತಿ ಗುತ್ತೂರ, ಭರಮಣ್ಣ ನಗರ, ಗವಿಸಿದ್ದಪ್ಪ ಕಲ್ಲನವರ, ಶೇಖರಪ್ಪ ಗಿಣಗೇರಿ ಇತರರು ಇದ್ದರು.

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *