ಉತ್ತರ ಕರ್ನಾಟಕದಲ್ಲೇ ದ್ವಿತೀಯ ಬಾರಿಗೆ ಯಶಸ್ವಿ’ಲ್ಯಾಪ್ರೊಸ್ಕೋಪಿ ಪೆಲ್ವಿಕ್ ಲಿಂಪ್ಲೋಡ್ ಡಿಸೆಕ್ಷನ್’ ಶಸ್ತ್ರಚಿಕಿತ್ಸೆ

Second successful ‘Laparoscopy Pelvic Lymphedema Dissection’ surgery in North Karnataka

ಗಂಗಾವತಿ : ಆನುವಂಶೀಯತೆ ಸೇರಿದಂತೆ ನಾನಾ ಕಾರಣಗಳಿಂದ ಉಂಟಾಗುವ ಜನನೇಂದ್ರಿಯ ಕ್ಯಾನ್ಸರ್​ನಿಂದ ಬಳಲುತ್ತಿದ್ದ ವೃದ್ಧ ವ್ಯಕ್ತಿಗೆ ಇಲ್ಲಿನ ಮೂತ್ರ ರೋಗ ಹಾಗೂ ಮೂತ್ರ ಕ್ಯಾನ್ಸರ್ ತಜ್ಞ ನಾಗರಾಜ್ ಅವರ ನೇತೃತ್ವದ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ.

ಹೊಸಪೇಟೆ ತಾಲೂಕಿನ ಕಮಲಾಪುರದ ರಾಮಪ್ಪ(75) ಎಂಬವರು ಕಳೆದ ಹಲವು ವರ್ಷದಿಂದ ಮೂತ್ರಸೋಂಕಿನಿಂದ ಬಳಲುತ್ತಿದ್ದರು. ಪದೇ ಪದೇ ಮೂತ್ರ ವಿಸರ್ಜನೆಯ ಬಯಕೆ, ಮೂತ್ರ ವಿಸರ್ಜಿಸುವಾಗ ಶಿಶ್ನದಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುತ್ತಿತ್ತು. ಮೂತ್ರನಾಳದಿಂದ ಬರುವ ಮೂತ್ರ ಸರಾಗವಾಗಿ ಹೋಗದೇ ಶಿಶ್ನದ ಮುಂಭಾಗ ಸ್ಥಗಿತವಾಗಿ ನೋವು ಉಂಟಾಗುತಿತ್ತು. ಹೀಗಾಗಿ ಚಿಕಿತ್ಸೆ ಪಡೆಯಲು ಮಲ್ಲಿಕಾರ್ಜುನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಪರೀಕ್ಷೆ ನಡೆಸಿದಾಗ ಜನನೇಂದ್ರಿಯ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು.

ರೋಗಿಯನ್ನು ಪರಿಶೀಲಿಸಿದ ವೈದ್ಯರ ತಂಡಕ್ಕೆ, ರೋಗಿಯ ಜನನೇಂದ್ರಿಯ (ಪ್ರಾಸ್ಟೇಟ್) ಗ್ರಂಥಿ ಊದಿಕೊಂಡಿರುವುದು ಕಂಡುಬಂದಿದೆ. ರಕ್ತ ಸೇರಿದಂತೆ ನಾನಾ ಪರೀಕ್ಷೆಗಳನ್ನು ಮಾಡಿಸಿದಾಗ ಪ್ರಾಸ್ಟೇಟ್ ಗ್ರಂಥಿಯಲ್ಲಿ ಅಸಹಜ ಸಿರಮ್ ಕಂಡುಬಂದಿದೆ. ಹೀಗಾಗಿ ರೋಗಿಯಿಂದ ಸಂದೇಹಿತ ಭಾಗದಲ್ಲಿನ ಬಯಾಪ್ಸಿ ಸ್ಯಾಂಪಲ್ ಸಂಗ್ರಹಿಸಿ ಹಿಸ್ಟೋಪೆಥಾಲಜಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಆಗ ಜನನೇಂದ್ರಿಯದ ಕ್ಯಾನ್ಸರ್ ಇರುವುದು ಖಚಿತವಾಗಿದೆ. ಪ್ರಾಸ್ಟೇಟ್ ಗ್ರಂಥಿಗೆ ಹರಡಿದ್ದ ಕ್ಯಾನ್ಸರ್​ಗೆ ಬೆಂಗಳೂರಿನಲ್ಲಿ ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ಚಿಕಿತ್ಸೆ, ಶಸ್ತ್ರಚಿಕಿತ್ಸೆ ಲಭ್ಯವಾಗುತ್ತದೆ. ಅಲ್ಲಿಗೆ ಹೋಗುವಂತೆ ವೈದ್ಯರು ರೋಗಿಗೆ ಸಲಹೆ ನೀಡಿದ್ದಾರೆ. ಆದರೆ ಇದಕ್ಕೆ ಒಪ್ಪದ ರೋಗಿ, ಇಲ್ಲಿಯೇ ಶಸ್ತ್ರಚಿಕಿತ್ಸೆ ಮಾಡುವಂತೆ ಮನವಿ ಮಾಡಿದ್ದಾರೆ. ರೋಗಿಯ ವಯಸ್ಸು, ಆರೋಗ್ಯದ ಸ್ಥಿತಿಗತಿಗಳನ್ನು ಗಮನಿಸಿದ ವೈದ್ಯರು, ಶಸ್ತ್ರಚಿಕಿತ್ಸೆಯನ್ನು ಸವಾಲಾಗಿ ಸ್ವೀಕರಿಸಿ ಯಶಸ್ವಿಯಾಗಿ ಮಾಡಿದ್ದಾರೆ.

ಅಪರೂಪದ ಲ್ಯಾಪ್ರೊಸ್ಕೋಪಿ ರ್ಯಾಡಿಕಲ್ ಪ್ರಾಸ್ಟೆಕ್ಟಮಿ ಶಸ್ತ್ರಚಿಕಿತ್ಸೆ. ನಮ್ಮ ಉತ್ತರ ಕರ್ನಾಟಕ ಅಥವಾ ಕಲ್ಯಾಣ ಕರ್ನಾಟಕದಲ್ಲಿ ಈ ತರಹದ ಶಸ್ತ್ರಚಿಕಿತ್ಸೆಗಳು ಬಹಳ ವಿರಳ. ಈ ಶಸ್ತ್ರಚಿಕಿತ್ಸೆ ಬೆಂಗಳೂರು ಬಿಟ್ಟರೆ ನಮ್ಮ ಭಾಗದಲ್ಲಿ ಮಾಡಲ್ಲ. ಒಂದೊಮ್ಮೆ ಶಸ್ತ್ರಚಿಕಿತ್ಸೆ ಮಾಡಿದರೆ ಅದು ಕೇವಲ ಒಪೆನ್ ಸರ್ಜರಿ (ತೆರೆದ ಶಸ್ತ್ರಚಿಕಿತ್ಸೆ) ಮಾಡುತ್ತಾರೆ. ಲ್ಯಾಪ್ರೋಸ್ಕೋಪಿಕ್ (ಉದರ ದರ್ಶಕ) ಸರ್ಜರಿ ಮಾಡಲ್ಲ. ಈ ತರಹದ ಶಸ್ತ್ರಚಿಕಿತ್ಸೆ ನನ್ನ ಸೇವಾ ಅವಧಿಯಲ್ಲಿ ಎರಡನೇಯದ್ದು” ಎಂದು ತಿಳಿಸಿದರು.

*ಜನನೇಂದ್ರೀಯ ಗ್ರಂಥಿ(ಪ್ರಾಸ್ಟೇಟ್) ಕ್ಯಾನ್ಸರ್ ಎಂದರೇನು?* ಪ್ರಾಸ್ಟೇಟ್ ಕ್ಯಾನ್ಸರ್ ಎಂದರೆ ಪುರುಷನ ಜನನೇಂದ್ರೀಯ ಗ್ರಂಥಿ ಮೇಲೆ ಪರಿಣಾಮ ಬೀರುವ ಕ್ಯಾನ್ಸರ್. ಪುರುಷರಲ್ಲಿ ಪ್ರಾಸ್ಟೇಟ್ ಗ್ರಂಥಿಯು ಮೂತ್ರನಾಳದ ಪ್ರದೇಶದಲ್ಲಿರುವುದು. ಇದು ಲೈಂಗಿಕ ಕ್ರಿಯೆ ವೇಳೆ ಶಿಶ್ನದಿಂದ ಬರುವಂತಹ ಸೆಮಿನಲ್ ದ್ರವವನ್ನು ಉತ್ಪತ್ತಿ ಮಾಡುವುದು. ಪ್ರಾಸ್ಟೇಟ್ ಗ್ರಂಥಿಯಲ್ಲಿ ಉತ್ಪತ್ತಿಗೊಂಡಿರುವ ಸೆಮಿನಲ್ ದ್ರವವು ಸಂತಾನೋತ್ಪತ್ತಿಗೆ ಕಾರಣವಾಗಿದ್ದು, ಇದರಲ್ಲಿ ವೀರ್ಯಾಣುಗಳಿವೆ. ಪ್ರಾಸ್ಟೇಟ್ ಗ್ರಂಥಿಯಲ್ಲಿ ಕ್ಯಾನ್ಸರ್ ಕೋಶಗಳು ಅಸಾಮಾನ್ಯ ರೀತಿಯಲ್ಲಿ ದ್ವಿಗುಣಗೊಂಡಾಗ ಪ್ರಾಸ್ಟೇಟ್ ಕ್ಯಾನ್ಸರ್ ಬರುವುದು ಮತ್ತು ಇದು ಪುರುಷರಲ್ಲಿ ಸಾಮಾನ್ಯವಾಗಿರುವುದು. ಅದರಲ್ಲೂ 50ರ ಗಡಿದಾಟಿದವರಿಗೆ ಇದು ಹೆಚ್ಚು. ಬೆಂಗಳೂರಿನಂತಹ ಮಹಾನಗರಕ್ಕೆ ಹೋದರೆ ಬಡ, ಮಧ್ಯಮ ವರ್ಗದ ರೋಗಿಗಳಿಗೆ ಖರ್ಚು ಅಧಿಕ. ಆದರೆ ಸ್ಥಳೀಯ ಗಂಗಾವತಿಯಂತಹ ಸಣ್ಣ ನಗರಗಳಲ್ಲಿ ಇಂತಹ ಚಿಕಿತ್ಸೆ ಸಿಕ್ಕರೆ  ವೆಚ್ಚದಲ್ಲಿ ಮಾಡಿ ಮುಗಿಸಬಹುದು” ಎಂದು ನಗರದ ಖ್ಯಾತ ಮೂತ್ರ ರೋಗ ಹಾಗೂ ಮೂತ್ರ ಕ್ಯಾನ್ಸರ್ ತಜ್ಞ ವೈದ್ಯ ಹೆಚ್. ನಾಗರಾಜ ತಿಳಿಸಿದರು.

ಡಾ.ನಾಗರಾಜ್ ನೇತೃತ್ವದಲ್ಲಿನ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಿದೆ. ವೈದ್ಯರ ತಂಡದಲ್ಲಿ ಅರವಳಿಕೆ  ಸವಿತಾ ಸಿಂಗನಾಳ, ಸಿಬ್ಬಂದಿ ಚೈತ್ರಾ, ಮುಸ್ಕಾನ್, ಮಹಾಂತೇಶ, ಮಲ್ಲೇಶ, ಶರಣೇಗೌಡ, ಮಹೆಬೂಬ, ಮಹೇಶ ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

11 hours ago