Breaking News

ರಾಜ್ಯ ಬಜೆಟ್ – ವಿದ್ಯಾರ್ಥಿಗಳ ಅಪೇಕ್ಷೆ!

State budget – students demand!

ಜಾಹೀರಾತು
Screenshot 2024 02 13 14 20 34 78 6012fa4d4ddec268fc5c7112cbb265e7 300x276

ಕೊಪ್ಪಳ :ಇನ್ನು ಕೆಲವೇ ದಿನಗಳಲ್ಲಿ ರಾಜ್ಯ ಬಜೆಟ್ ಮಂಡಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಹಲವು ವರ್ಷಗಳಿಂದ ಶಿಕ್ಷಣ ಕ್ಷೇತ್ರವನ್ನು ಅದರಲ್ಲೂ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳ ನಿವಾರಣೆಯ ಕಡೆಗೆ ರಾಜ್ಯ ಸರ್ಕಾರ ಗಮನ ಹರಿಸಬೇಕೆಂದು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ರಾಜ್ಯದ ವಿದ್ಯಾರ್ಥಿಗಳ ಪರವಾಗಿ ಮನವಿ ಮಾಡುತ್ತದೆ. ರಾಜ್ಯದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಧ್ಯಯನ ನಡೆಸುತ್ತಿದ್ದು, ಅವರ ವ್ಯಾಸಂಗದ ಏಳಿಗೆಯನ್ನು ಆದ್ಯತೆ ಎಂದು ಭಾವಿಸಿ ಪ್ರಸ್ತುತ ಬಜೆಟ್ನಲ್ಲಿ ಈ ಕೆಳಗಿನ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಎಐಡಿಎಸ್ಓ ಆಗ್ರಹಿಸುತ್ತದೆ.

ಬೇಡಿಕೆಗಳು*
1. ಕಳೆದ ಸರ್ಕಾರ ಅಪ್ರಜಾತಾಂತ್ರಿಕವಾಗಿ ರಾಜ್ಯದಲ್ಲಿ ಹೇರಿದ ಏನ್.ಇ.ಪಿ -2020 ರ ಎಲ್ಲಾ ಶಿಫಾರಸ್ಸುಗಳನ್ನು ಹಿಂಪಡೆಯಿರಿ
2. ಕಟ್ಟಡ ಕಾರ್ಮಿಕರ ಮಕ್ಕಳ ಶಿಷ್ಯವೇತನದ ಹಿಂದಿನ ಮೊತ್ತವನ್ನೇ ಮುಂದುವರೆಸಿ
3. ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದ ಹಣವನ್ನು ಅವರ ಬ್ಯಾಂಕ್ ಖಾತೆಗೆ ಹಾಕುವ (ಡಿ.ಬಿ.ಟಿ) ಪದ್ಧತಿಯನ್ನು ಹಿಂಪಡೆಯಿರಿ
4. ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಸಂಖ್ಯೆಯನ್ನು ಹೆಚ್ಚಿಸಿರಿ
5. ವಿವಿಗಳಲ್ಲಿ ಹಾಗೂ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕ ಹಾಗೂ ಭೋದಕೇತರ ಸಿಬ್ಬಂದಿಗಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ.
6. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಿ
7. ಸರ್ಕಾರಿ ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಿ
8. ಅಂಗನವಾಡಿಗಳ ನಿರ್ವಹಣೆಗೆ ಅನುದಾನ ಹೆಚ್ಚಿಸಿ
9. ಈ ಬಾರಿಯ ಬಜೆಟ್ನಲ್ಲಿ ಯಾವುದೇ ನೂತನ ಸ್ವ – ಹಣಕಾಸು ಶಿಕ್ಷಣ ಸಂಸ್ಥೆಗಳನ್ನು ಘೋಷಿಸಬೇಡಿ

ಜಿಲ್ಲಾ ಸಮಿತಿಯ ಪರವಾಗಿ,
ಗಂಗರಾಜ ಅಳ್ಳಳ್ಳಿ
ಜಿಲ್ಲಾ ಸಂಚಾಲಕರು
ಎಐಡಿಎಸ್ಓ ಕೊಪ್ಪಳ

.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.