16th to 18th February at Koramangala Indoor Stadium, Karate Kurita International Forum: Dignitaries from home and abroad participated.
ಬೆಂಗಳೂರು, ಫೆ, 14: ಭಾರತೀಯ ರೈಯುಯೆ ರೈಯು ಕರಾಟೆ ಡು ಕೊಬೊಡೋ ಸಂಘಟನೆಯಿಂದ ಕರಾಟೆಗೆ ಹೊಸ ಸ್ಪರ್ಷ ನೀಡುವ, ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕಾರಣವಾಗಿರುವ ಕ್ರೀಡೆಗೆ ಹೊಸ ಆಯಾಮ ನೀಡುವ ಸಲುವಾಗಿ ನಗರದ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಫೆ. 16 ರಿಂದ 18 ರ ವರೆಗೆ ಅಂತರರಾಷ್ಟ್ರೀಯ ಕರಾಟೆ ಕುರಿತಾದ ವಿಚಾರ ಸಂಕಿರಣ ಆಯೋಜಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ರೈಯುಯೆ ರೈಯು ಕರಾಟೆ ಡು ಕೊಬೊಡೋ ಸಂಘಟನೆ ಅಧ್ಯಕ್ಷ ಹಾಗೂ ತಾಂತ್ರಿಕ ನಿರ್ದೇಶಕ ಎಸ್. ಚಂದ್ರಶೇಖರ್, 18 ದೇಶಗಳ ಕರಾಟೆ ಪಟುಗಳು, ತರಬೇತುದಾರರು, ಕ್ರೀಡಾ ಉತ್ತೇಜಕರು, ಕರಾಟೆ ಸಂಘಟನೆಗಳ ಪ್ರತಿನಿಧಿಗಳು ಒಳಗೊಂಡಂತೆ ದೇಶ, ವಿದೇಶಗಳ 50 ರಿಂದ 60 ಸಾವಿರ ಮಂದಿ ಭಾಗವಹಿಸಲಿದ್ದಾರೆ. ಜಪಾನ್ ನಲ್ಲಿ 1800 ರ ಮಧ್ಯ ಭಾಗದಲ್ಲಿ ನ್ರಿಸಟೋ ನಕೈಮಾ ಅವರು ರೈಯುಯೆ ರೈಯು ಡು ಕೊಬೊಡೋ ಕರಾಟೆಯನ್ನು ಅಸ್ಥಿತ್ವಕ್ಕೆ ತಂದಿದ್ದು, ಶತಮಾನಗಳಿಂದ ಈ ಕರಾಟೆ ಶಾಲೆ ತನ್ನದೇ ಆದ ಮಹತ್ವ ಕಾಯ್ದುಕೊಂಡು ಬರುತ್ತಿದೆ. ಹಲವಾರು ಮಂದಿ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಕರಾಟೆಗೆ ಹೊಸ ಆಯಾಮ ನೀಡುವ ಕುರಿತು ಚರ್ಚೆ ನಡೆಯಲಿದೆ ಎಂದರು.
ಜಗತ್ತಿನಾದ್ಯಂತ ಇರುವ ಮಾರ್ಷಲ್ ಆರ್ಟ್ಸ್ ಕ್ರೀಡಾಪಟುಗಳನ್ನು ಒಂದೆಡೆ ಕರೆ ತರುವ, ಪರಸ್ಪರ ಜ್ಞಾನಹಂಚಿಕೆ, ಅಂತರರಾಷ್ಟ್ರೀಯ ಸಹಕಾರ ವೃದ್ಧಿಸುವ ದ್ಯೇಯ ಹೊಂದಲಾಗಿದೆ. ದೇಶದಲ್ಲಿ 28 ರಿಂದ 30 ಲಕ್ಷ ಮಂದಿ ಕರಾಟೆ ಕ್ರೀಡಾಪಟುಗಳಿದ್ದು, ಅವರ ಭವಿಷ್ಯವನ್ನು ಉಜ್ವಲಗೊಳಿಸುವ ಕುರಿತು ಚರ್ಚೆ ನಡೆಯಲಿದೆ. ವಿಚಾರಗೋಷ್ಠಿಯನ್ನು ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಉದ್ಘಾಟಿಸಲಿದ್ದಾರೆ. ನೆಹರು ಯುವ ಕೇಂದ್ರದ ದಕ್ಷಿಣ ಭಾರತ ನಿರ್ದೇಶಕರಾದ ಎಂ.ಎನ್. ನಟರಾಜನ್, ದಕ್ಷಿಣ ಏಷ್ಯಾ ಕರಾಟೆ ಡು ಫೆಡರೇಷನ್ ನ ಅಧ್ಯಕ್ಷ ಶಿಹಾನ್ ಭರತ್ ಶರ್ಮಾ ಮತ್ತಿತರರು ಉಪಸ್ಥಿತರಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕಾಟಾ ವರ್ಲ್ಡ್ ಚಾಂಪಿಯನ್ ಶಿಪ್ ನಲ್ಲಿ ಏಳು ಬಾರಿ ವೈಯಕ್ತಿಕ ವಿಭಾಗದಲ್ಲಿ ಪ್ರಶಸ್ತಿ ಗೆದ್ದಿರುವ ಸುಗೋ ಸಕುಮೊಟೊ, ನಾಲ್ಕು ಬಾರಿ ಪ್ರಶಸ್ತಿ ವಿಜೇತ ರೈಯು ಕಿಯುನ, ಮಹಿಳೆಯರ ವಿಭಾಗದಲ್ಲಿ ಮೂರು ಪ್ರಶಸ್ತಿ ಗೆದ್ದಿರುವ ಯುಕು ಶಿಮಿಝು ಮತ್ತಿತರರು ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…